Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 'ಬಹುರೂಪಿ'ಯ 10 ಮಕ್ಕಳ ಕೃತಿಗಳ ಬಿಡುಗಡೆ 

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ. 9 : ಇಂದಿನ ಶಿಕ್ಷಣ ಪದ್ಧತಿಯಲ್ಲಿ ಅನ್ಯಾಯ ಮತ್ತು ತಾರತಮ್ಯಗಳು ಅಡಕವಾಗಿವೆ. ಮಕ್ಕಳಿಗೆ ಶಿಕ್ಷಣ ನೀಡುವ ನೈತಿಕತೆಯೇ ನಮಗೆ ಇಲ್ಲವಾಗಿದೆ. ಹೀಗಿರುವಾಗ ಮಕ್ಕಳಿಗೆ ಯಾವ ರೀತಿಯ ನೀತಿ ಶಿಕ್ಷಣ ನೀಡಲು ಸಾಧ್ಯವಿದೆ. ವಾಸ್ತವದಲ್ಲಿ ಮಕ್ಕಳಿಗೆ ನೀತಿ ಶಿಕ್ಷಣ ನೀಡುವ ಅರ್ಹತೆಯನ್ನೇ ನಾವು ಕಳೆದುಕೊಂಡಿದ್ದೇವೆ ಎಂದು ಹಿರಿಯ ಲೇಖಕ, 'ಆದಿಮ'ದ ಸಂಸ್ಥಾಪಕರಾದ ಕೋಟಗಾನಹಳ್ಳಿ ರಾಮಯ್ಯ ವಿಷಾದಿಸಿದರು.

'ಬಹುರೂಪಿ' ಪ್ರಕಾಶನ ಬೆಂಗಳೂರಿನಲ್ಲಿ ಇಂದು ಪರಾಗ್, ಪರಿ, ಕರಡಿ ಟೇಲ್ಸ್, ಕಲ್ಪವೃಕ್ಷ, ಏಕತಾರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 10 ಮಕ್ಕಳ ಪುಸ್ತಕಗಳನ್ನು ಬಿಡುಗಡೆ ಮಾಡಿ ಅವರು ಮಾತನಾಡುತ್ತಿದ್ದರು.

ನಮ್ಮ ದೇಶದಲ್ಲಿ ಪಠ್ಯ ಪುಸ್ತಕಗಳು, ಕಥೆ ಪುಸ್ತಕಗಳ ಮೂಲಕ ಬಹು ಹಿಂದಿನಿಂದಲೂ ಮೈಕ್ರೋ ಫ್ಯಾಸಿಸಂ ಅನ್ನು ಬಿತ್ತಲಾಗುತ್ತಿದೆ. ಆದನ್ನು ಇಂದಿಗೂ ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಮಕ್ಕಳು ಏನು ಓದಬೇಕು, ಏನನ್ನು ಓದಬಾರದು ಎಂಬುದನ್ನು ತೀರ್ಮಾನಿಸುವವರು ಯಾರು? ಇಂಥ ತೀರ್ಮಾನ ಕೈಗೊಳ್ಳಲು ನಮಗೆ ಅರ್ಹತೆ ಇದೆಯೇ? ಈ ಬಗ್ಗೆ ಮಕ್ಕಳಿಂದ ಅಭಿಪ್ರಾಯಗಳನ್ನು ಪಡೆಯಲಾಗಿದೆಯೇ ಎಂಬ ಸಂಕೀರ್ಣ ಪ್ರಶ್ನೆಗಳಿಗೆ ತ್ವರಿತವಾಗಿ ಉತ್ತರ ಕಂಡುಕೊಳ್ಳುವ ಅನಿವಾರ್ಯತೆ ಇದೆ ಎಂದು ತಿಳಿಸಿದರು.

ಗಾಯಕಿ ಎಂ ಡಿ ಪಲ್ಲವಿ ಅವರು ಮಾತನಾಡಿ, ಕನ್ನಡ ಭಾಷೆಯಲ್ಲಿ ಮಕ್ಕಳ ಪುಸ್ತಕಗಳು ತುಂಬಾ ಕಡಿಮೆ ಇವೆ. ಈ ವಿಷಯದಲ್ಲಿ ಸಾಕಷ್ಟು ಕೆಲಸಗಳು ಆಗಬೇಕಿದೆ. ಹಾಗಾಗಿ, ಬರವಣಿಗೆ ಕ್ಷೇತ್ರದಲ್ಲಿ ಹೆಚ್ಚಿನ ಕೊಡುಗೆ ನೀಡುವ ಆಸೆ ಇರುವುದಾಗಿ ಹೇಳಿದರು.

ಮಕ್ಕಳ ಪುಸ್ತಕಗಳನ್ನು ಹೇಗೋ ರೂಪಿಸಬಹುದು. ಆದರೆ, ಅವುಗಳನ್ನು ಮಕ್ಕಳಿಗೆ ತಲುಪಿಸುವ ನಿಟ್ಟಿನಲ್ಲಿ ಹಲವಾರು ಅಡೆತಡೆಗಳು ಸೃಷ್ಟಿಯಾಗಿವೆ. ಒಂದೆಡೆ ಶಾಲೆಗಳೇ ಕಣ್ಮರೆಯಾಗುತ್ತಿದ್ದರೆ, ಇನ್ನೊಂದೆಡೆ ಕನ್ನಡ ಮಕ್ಕಳೇ ಕಣ್ಮರೆಯಾಗುತ್ತಿದ್ದಾರೆ ಎಂದು ವಿಜ್ಞಾನ ಬರಹಗಾರರಾದ ನಾಗೇಶ ಹೆಗಡೆ ಅವರು ಅಭಿಪ್ರಾಯಪಟ್ಟರು.

ಮಕ್ಕಳ ಪುಸ್ತಕಗಳನ್ನು ಮಕ್ಕಳಿಗೆ ತಲುಪಿಸುವ ನಿಟ್ಟಿನಲ್ಲಿ ಪುಸ್ತಕ ಪ್ರಾಧಿಕಾರ, ಭಾಷಾ ಪ್ರಾಧಿಕಾರ ಸೇರಿದಂತೆ ಸರ್ಕಾರದ ಸಂಸ್ಥೆಗಳು ಕೆಲಸ ಮಾಡಬೇಕಿತ್ತು. ಆದರೆ, ಈ ವಿಷಯದಲ್ಲಿ ಅವೆಲ್ಲವೂ ವಿಫಲವಾಗಿವೆ ಎಂದರು.

ಬಹುರೂಪಿ ಸಂಸ್ಥೆಯು ಹೊರತಂದಿರುವ 10 ಪುಸ್ತಕಗಳು ಮಕ್ಕಳಿಗೆ ವಾಸ್ತವತೆಯ ಕಥೆಯನ್ನು ಹೇಳುತ್ತಲೇ ಅವರಿಗೆ ಹೊಸ ಜಗತ್ತಿಗೆ ಪ್ರವೇಶ ಕಲ್ಪಿಸುತ್ತದೆ. ಸಾಮಾಜಿಕ ವರದಿಗಳಿಗೆ ಕಲ್ಪನೆ ಬೆರೆಸಿ ಕಥೆಗಳ ರೂಪವನ್ನು ನೀಡಲಾಗಿದೆ. ಇದೊಂದು ಮಹತ್ವದ ಕೆಲಸ ಎಂದು ಅಭಿಪ್ರಾಯಪಟ್ಟರು.

ಮಕ್ಕಳ ಸಾಹಿತ್ಯಕ್ಕೆ ಸಮಕಾಲೀನ ಸ್ಪರ್ಶ: ಅನುವಾದದ ಮಹತ್ವ ಕುರಿತು ಸಂವಾದ ಜರುಗಿತು. ಮಕ್ಕಳ ಹಕ್ಕುಗಳ ಟ್ರಸ್ಟ್ ನ ವಾಸುದೇವ ಶರ್ಮಾ, ನಾಗೇಶ್ ಹೆಗಡೆ, ಕಲಾವಿದ ಗುಜ್ಜಾರ್, ಶಿಕ್ಷಣ ತಜ್ಞರಾದ ವೀಣಾ ಮೋಹನ್, ನವಕರ್ನಾಟಕ ಪ್ರಕಾಶನದ ರಮೇಶ್ ಉಡುಪ, 'ಪರಿ'ಯ ಪ್ರೀತಿ ಡೇವಿಡ್ ಅವರು ಸಂವಾದದಲ್ಲಿದ್ದರು.

ಬಹುರೂಪಿಯ ಜಿ ಎನ್ ಮೋಹನ್, ಶ್ರೀಜಾ ವಿ ಎನ್, ಪರಾಗ್ ನ ಲಕ್ಷ್ಮಿ ಕರುಣಾಕರನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ