Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾವೇರಿ ವಿವಾದ ಬಗೆಹರಿಸದಿದ್ದರೆ ರಾಜೀನಾಮೆ ಕೊಡಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಸೆ.23: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ಎಡವಿದೆ ಎಂದು ಆರೋಪಿಸಿ ರಾಜ್ಯ ಬಿಜೆಪಿ ಶನಿವಾರ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ರಸ್ತೆ ತಡೆ ಮೂಲಕ ಬೃಹತ್‌ ಪ್ರತಿಭಟನೆ ನಡೆಸಿತು. ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿ ಬಿಡುಗಡೆ ಮಾಡಿದರು.

ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ ಎಸ್‌ ಯಡಿಯೂರಪ್ಪ ಮಾಜಿ ಸಚಿವರಾದ ಗೋವಿಂದ ಕಾರಜೋಳ, ಸಿ ಎನ್‌ ಅಶ್ವತ್ಥನಾರಾಯಣ, ಗೋಪಾಲಯ್ಯ ಸೇರಿದಂತೆ ಸಂಸತ್‌ ಸದಸ್ಯರು, ಶಾಸಕರು ಹಾಗೂ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು‌ ಪ್ರತಿಭಟನೆಗೆ ಸಾಥ್ ನೀಡಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಬಿ ಎಸ್‌ ಯಡಿಯೂರಪ್ಪ, “ಕಾಂಗ್ರೆಸ್‌ ಸರ್ಕಾರ ತಮಿಳುನಾಡಿನ ಏಜೆಂಟ್‌ರಂತೆ ವರ್ತಿಸುತ್ತಿದೆ. ಸುಪ್ರೀಂ ಕೋರ್ಟ್‌ ಹೇಳುವ ಮುಂಚೆಯೇ ನೀರು ಬಿಟ್ಟಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳಿಗೆ ಯೋಗ್ಯತೆ ಇದ್ದರೆ ಕಾವೇರಿ ಸಮಸ್ಯೆ ಬಗೆಹರಿಸಿ, ಇಲ್ಲವಾದರೆ ರಾಜೀನಾಮೆ ಕೊಟ್ಟು ಮನೆಗೆ ನಡೆಯಿರಿ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸುಪ್ರೀಂ ಕೋರ್ಟ್‌ನಿಂದ ಒಂದು ಸಮಿತಿ ಬಂದು ಕಾವೇರಿ ಜಲಾನಯನ ಪ್ರದೇಶದ ಸಮೀಕ್ಷೆ ನಡೆಸಲಿ. ನೀರಿನ ಬಗ್ಗೆ ವಾಸ್ತವ ತಿಳಿದುಕೊಳ್ಳಲಿ. ಇಲ್ಲದಿದ್ದರೆ ಬರುವ ದಿನಗಳಲ್ಲಿ ಬೆಂಗಳೂರಿಗೆ ಕುಡಿಯುವ ನೀರಿನ ಅಭಾವ ಆಗುತ್ತದೆ. ರಾಜ್ಯ ಸರ್ಕಾರದ ನಡೆಯಿಂದ ತಮಿಳುನಾಡಿಗೆ ಅನುಕೂಲವಾಗುತ್ತಿದೆ. ಕೂಡಲೇ ಸರ್ಕಾರ ಸುಪ್ರೀಂ ಕೋರ್ಟ್‌ಗೆ ವಾಸ್ತವ ಸಂಗತಿಯನ್ನು ಮನವರಿಕೆ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಕಾವೇರಿ ಕುರಿತು ನಮ್ಮ ಹೋರಾಟ ಬೆಂಗಳೂರು ಸುತ್ತಮುತ್ತಲೂ ನಡೆಯಲಿದೆ. ಸರ್ಕಾರದ ಆಡಳಿತ ವೈಖರಿ ಖಂಡಿಸಿ ಪ್ರತಿಭಟನೆ ಮುಂದುವರೆಸುತ್ತೇವೆ. ದೇವೇಗೌಡರು, ಕುಮಾರಸ್ವಾಮಿ ಈಗಾಗಲೇ ಈ ಬಗ್ಗೆ ಮಾತನಾಡಿದ್ದಾರೆ. ಕಾವೇರಿ ನೀರು ಖಾಲಿ ಆಗಿದೆ. ಕಾಂಗ್ರೆಸ್‌ ಮುಖಂಡರು ಮಾತ್ರ ತಮಿಳುನಾಡಿನ ಏಜೆಂಟ್‌ರಂತೆ ವರ್ತಿಸುವುದು ಬಿಡಬೇಕು” ಎಂದು ಹರಿಹಾಯ್ದರು.

“ರಾಜ್ಯದ ಅಭಿವೃದ್ಧಿ ಸಂಪೂರ್ಣ ನಾಶವಾಗಿದೆ. ನೆಲ, ಜಲ ರಕ್ಷಣೆಯಲ್ಲಿ ಸಿದ್ದರಾಮಯ್ಯ ಸರ್ಕಾರ ವಿಫಲವಾಗಿದೆ. ಕಾವೇರಿ ವಿಚಾರಕ್ಕೆ ರಾಜ್ಯ ಸರ್ಕಾರ ನಿರ್ಲಕ್ಯ ಮಾಡಿದ್ದರಿಂದ ನೀರು ಹರಿದು ಹೋಗುತ್ತಿದೆ. ಸರ್ಕಾರಕ್ಕೆ ಬದ್ಧತೆ ಎಂಬುದು ಇಲ್ಲ. ಬರುವ ದಿನಗಳಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾದರೆ ಅದರ ನೇರ ಜವಾಬ್ದಾರಿ ಸರ್ಕಾರ ಆಗಿರಲಿದೆ” ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದರು.

ಹೋಗಬೇಕಾದ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‌ ಮೊರೆ ಹೋಗಲಿಲ್ಲ. ಸರ್ವಪಕ್ಷದ ಸಭೆಯಲ್ಲಿ ನಮಗೆ ಸುಳ್ಳು ಹೇಳಿದ್ದಾರೆ. ಪದೇ ಪದೇ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಲಿ ಎಂದು ಕಾಂಗ್ರೆಸ್‌ ನವರು ಹೇಳುತ್ತಾರೆ. ಇದು ಕಾನೂನಿನಿಂದ ಬಗೆಹರಿಯಬೇಕಾದ ಸಮಸ್ಯೆ. ಕೇಂದ್ರ ಮಧ್ಯಸ್ಥಿಕೆ ವಹಿಸಲು ಬರುವುದಿಲ್ಲ. ಅಷ್ಟಕ್ಕೂ ಮಧ್ಯಸ್ಥಿಕೆ ಬೇಕಿದ್ದರೆ ಸೋನಿಯಾ ಗಾಂಧಿ ವಹಿಸಲಿ. ತಮಿಳುನಾಡು ಮತ್ತು ನಮ್ಮ ರಾಜ್ಯದ ಮುಖ್ಯಮಂತ್ರಿಗಳನ್ನು ಕರೆದು ಮಾತನಾಡಲಿ” ಎಂದರು.

“ತಮಿಳುನಾಡು ಅಕ್ರಮವಾಗಿ ನೀರಾವರಿ ಮಾಡುತ್ತಿದೆ. 32 ಟಿಎಂಸಿ ನೀರು ಬಳಸಬೇಕಿತ್ತು. ಆದರೆ, 62 ಟಿಎಂಸಿ ನೀರು ಬಳಕೆ ಮಾಡಿದ್ದಾರೆ. ನಮ್ಮ ವಕೀಲರು ಈ ಬಗ್ಗೆ ಹೇಳಬೇಕಿತ್ತು. ಆದರೆ, ಸಭೆಗಳಲ್ಲಿ ಈ ಬಗ್ಗೆ ಮಾತನಾಡಿಯೇ ಇಲ್ಲ. ಪದೇ ಪದೇ ರಾಜ್ಯ ಸರ್ಕಾರ ವಿಷಯ ಮನವರಿಕೆ ಮಾಡುವಲ್ಲಿ ಸೋತಿದೆ” ಎಂದು ಟೀಕಿಸಿದರು.

“ರೈತರು ಹೋರಾಟ ಮಾಡಿದರೆ ಅವರೇ ಸುಪ್ರೀಂ ಕೋರ್ಟ್‌ಗೆ ಹೋಗಲಿ ಎಂದು ಜಲಸಂಪನ್ಮೂಲ ಸಚಿವರು ಹೇಳುತ್ತಾರೆ. ಬ್ರ್ಯಾಂಡ್‌ ಬೆಂಗಳೂರು ಕನವರಿಕೆಯಲ್ಲಿರುವ ಸಚಿವರಿಗೆ ಮುಂದೆ ಅರಿವಾಗಲಿದೆ. ಸರ್ಕಾರದಲ್ಲಿ ತಾಳಮೇಳ ಇಲ್ಲ. ಡಿಕೆಶಿ ಮತ್ತು ಸಿದ್ದರಾಮಯ್ಯ ಅವರು ತಮಿಳುನಾಡಿನ ಹಿತಾಸಕ್ತಿ ಕಾಪಾಡಲು ನಮ್ಮ ರಾಜ್ಯದ ಹಿತಾಸಕ್ತಿ ಬಲಿಕೊಟ್ಟಿದ್ದಾರೆ. ಕಾವೇರಿ ವಿವಾದವನ್ನು ರಾಜಕೀಯವಾಗಿ ಪರಿವರ್ತನೆ ಮಾಡುವ ಕೆಲಸ ಸಿದ್ದರಾಮಯ್ಯ ಮಾಡುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ