Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೀನುಗಾರಿಕೆ ವಿಶ್ವವಿದ್ಯಾಲಯ ಸ್ಥಾಪನೆಗೆ ಪರಿಶೀಲನೆ

ಸುದ್ದಿಮೂಲ ವಾರ್ತೆ

ಬೆಂಗಳೂರು, ನ.21: ಮೀನುಗಾರಿಕೆ ವಿಶ್ವ ವಿದ್ಯಾಲಯ ಮಾಡುವ ಬಗ್ಗೆ ಮುಂದಿನ ವರ್ಷ ವಿಚಾರ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಮೀನುಗಾರರಿಗೆ ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಬಳಿಕ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮೀನು ನಮ್ಮ ಆಹಾರ ಸಂಸ್ಕೃತಿಯ ಪ್ರಮುಖ ಭಾಗ. ಅತ್ಯಂತ ಆರೋಗ್ಯಕಾರಿ ಆಹಾರ. ಮೀನಿನ‌ ಸಂತತಿ ಮತ್ತು ಪ್ರಮಾಣವನ್ನು ಹೆಚ್ಚಿಸಲು ನಮ್ಮ ಸರ್ಕಾರ ಅಗತ್ಯ ಎಲ್ಲಾ ನೆರವನ್ನೂ ನೀಡುತ್ತದೆ. ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ದವಾಗಿದೆ ಎಂದು ಅವರು ಭರವಸೆ ನೀಡಿದರು.

ಮೀನುಗಾರರ ಸಮಸ್ಯೆಗಳ ಪರಿಹಾರಕ್ಕೆ ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗಿನಿಂದಲೂ ಅಧಿವೇಶನದಲ್ಲಿ ಹೋರಾಟ ನಡೆಸಿದ್ದೆ. ಆದರೂ ಹಿಂದಿನ ಸರ್ಕಾರ ಮತ್ತು ಸರ್ಕಾರದಲ್ಲಿದ್ದ ಸಚಿವರು ಪರಿಹಾರ ಒದಗಿಸಲೇ ಇಲ್ಲ. ರಿಯಾಯ್ತಿ ಡೀಸೆಲ್ ಕೊಡುವಂತೆ ನಾವು ಅಧಿವೇಶನದಲ್ಲಿ ಹೋರಾಟ ಮಾಡಿದರೂ ಸರ್ಕಾರ ಕೊಡಲಿಲ್ಲ. ಹೀಗಾಗಿ ನಾವು ಅಧಿಕಾರಕ್ಕೆ ಬಂದ ಬಳಿಕ ಬೇಡಿಕೆ ಈಡೇರಿಸಿದ್ದೇವೆ. ಮೀನುಗಾರ ಸಮುದಾಯದ ಮಹಿಳೆಯರಿಗೆ ನೀಡಲಾಗುತ್ತಿದ್ದ 50 ಸಾವಿರ ರೂಪಾಯಿ ಸಹಾಯ ಧನವನ್ನು 3 ಲಕ್ಷಕ್ಕೆ ಏರಿಸಿದ್ದು ನಮ್ಮ ಸರ್ಕಾರ. ಮುಂದಿನ ವರ್ಷದಿಂದ ಮೀನುಗಾರ ಸಮುದಾಯಕ್ಕೆ ಮನೆ ಕಟ್ಟಿಸಿಕೊಡುವ ಕೆಲಸ ಆರಂಭವಾಗುತ್ತದೆ ಎಂದು ವಿವರಿಸಿದರು.

1977 ರಲ್ಲಿ ದೆಹಲಿಯಲ್ಲಿ ಹತ್ತಾರು ದೇಶಗಳ ಮೀನುಗಾರ ಸಮುದಾಯದ ಪ್ರತಿನಿಧಿಗಳು ಸಮುದಾಯದ ಹಿತಕ್ಕಾಗಿ ಮೊದಲ ಸಭೆ ನಡೆಯಿತು. ಅಲ್ಲಿಂದ ಪ್ರತಿವರ್ಷ ವಿಶ್ವ ಮೀನುಗಾರರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.

ಮೀನುಗಾರ ಸಮುದಾಯದ ಜತೆ ನೇರ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳನ್ನು ಆಲಿಸಿ ಎಲ್ಲಾ ಸಮಸ್ಯೆಗಳಿಗೂ ಕಾಲಮಿತಿಯಲ್ಲಿ ಪರಿಹಾರ ಒದಗಿಸಲು ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದರು.

ಮೀನುಗಾರಿಕೆ ಮತ್ತು ಬಂದರು ಸಚಿವರಾದ ಮಂಕಾಳ ಎಸ್ ವೈದ್ಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸರ್ಕಾರ ಮೀನುಗಾರ ಸಮುದಾಯಕ್ಕೆ ಮತ್ತು ಸಮುದಾಯದ ಮಕ್ಕಳಿಗೆ ನೀಡಿರುವ ಸರ್ಕಾರದ ಸವಲತ್ತುಗಳನ್ನು ವಿವರವಾಗಿ ಹೆಸರಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ