Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಳ್ಳಾರಿ : ಚುನಾವಣೆ ಹಿನ್ನೆಲೆ ಪೊಲೀಸ್‌ ಇಲಾಖೆಯಿಂದ ಪಥ ಸಂಚಲನ

ಸುದ್ದಿಮೂಲ ವಾರ್ತೆ ,

ಬಳ್ಳಾರಿ ಏ೦೫ :ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರು ಆತ್ಮ ಸ್ಥೈರ್ಯ, ನಿರ್ಭಯ ಮತ್ತು ನಿರ್ಭಿತಿಯಿಂದ ಮತ ಚಲಾಯಿಸಲು ಅನುಕೂಲವಾಗುವ ದೃಷ್ಟಿಯಿಂದ ಹಾಗೂ ಭದ್ರತೆಗಾಗಿ ನಗರದಲ್ಲಿ ಪಥ ಸಂಚಲನ ಹಮ್ಮಿಕೊಳ್ಳಲಾಗಿತ್ತು.

ನಗರದ ಕೋಟೆ ಪ್ರದೇಶದಲ್ಲಿನ ಸೆಂಟ್ ಜೋಸೇಫ್ ಕಾಲೇಜು ಮೈದಾನದಿಂದ ಆರಂಭವಾಗಿ ಕೌಲ್ ಬಜಾರ್ ರಸ್ತೆಯಿಂದ ಮೋತಿ ಸರ್ಕಲ್ ಮೂಲಕ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ರಾಯಲ್ ಸರ್ಕಲ್ ನಿಂದ ಬೆಂಗಳೂರು ರಸ್ತೆ ಮಾರ್ಗವಾಗಿ ಎಪಿಎಂಸಿ ಮಾರುಕಟ್ಟೆವರೆಗೆ ನಡೆಯಿತು.

ಜಿಲ್ಲಾ ಪೊಲೀಸ್ ಅಧೀಕ್ಷಕರಾದ ರಂಜೀತ್ ಕುಮಾರ್ ಭಂಡಾರು ಅವರ ನೇತೃತ್ವದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ನಟರಾಜ, ಐಟಿಬಿಟಿ ಸೆಕೆಂಡ್ ಇನ್ ಕಮಾಂಡೆಂಟ್ ಅಧೋಲಿ ಚೆಸ್ಸಿ, ಐಟಿಬಿಟಿ ಡೆಪ್ಯೂಟಿ ಕಮಾಂಡೆಂಟ್ ಪ್ರವೀಣ್ ಸಿಂಗ್, ಅಸಿಸ್ಟೆಂಟ್ ಕಮಾಂಡೆಂಟ್ ಡಾ.ಪ್ರಕಾಶ್ ಕುಮಾರ, ಅಭಿಮನ್ಯು ಕುಮಾರ್, ಐಟಿಬಿಟಿ ಅಸಿಸ್ಟೆಂಟ್ ಕಮಾಂಡೆಂಟ್ ಗಜೇಂದ್ರ ಪಾಲ್ ಸಿಂಗ್ ಒಳಗೊಂಡಂತೆ ಜಿಲ್ಲೆಯ ನಾಲ್ಕು ಡಿಎಎಸ್ ಪಿ, 10 ಜನ ಇನ್ಸ್ಪೆಕ್ಟರ್, 25 ಜನ ಪಿಎಸ್ಐ, 200 ಜನ ಸಿಐಪಿಎಫ್ ಪೊಲೀಸ್ ಸಿಬ್ಬಂದಿ, ಯವರು 5 ಡಿಎಅರ್ ಪ್ಲೋಟೋನುಗಳು, 200 ಜನ ನಾಗರಿಕ ಪೊಲೀಸ್ ಸಿಬ್ಬಂದಿಗಳನ್ನು ಒಳಗೊಂಡಂತೆ ಜಾಥಾ ನಡೆಸಿದರು.
ಈ ಸಂದರ್ಭದಲ್ಲಿ ಐಜಿ ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪವನ್ ಕುಮಾರ್ ಮಾಲಪಾಟಿ ಸೇರಿದಂತೆ ಇತರರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ