Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಂತ ಶ್ರೀ ಸೇವಾಲಾಲ ಮಹಾರಾಜರ ಜಯಂತಿ ಆಚರಣೆ ಬಂಜಾರ ಸಮಾಜದ ಅಭಿವೃದ್ಧಿಗೆ ಒಂದಾಗಿ ಶ್ರಮಿಸಬೇಕು : ಮತ್ತಿಮಡು

ಸುದ್ದಿಮೂಲ ವಾರ್ತೆ ಕಲಬುರಗಿ, ೆ.16:
ಸಮಾನತೆ ಮತ್ತು ಕಾಯಕದ ಮಹತ್ವವನ್ನು ಜಗತ್ತಿಿಗೆ ಸಾರಿದ ಮಹಾನ್ ಸಂತ ಸೇವಾಲಾಲ್ ಮಹಾರಾಜರು, ಬಂಜಾರ ಸಮಾಜದ ಸರ್ವತೋಮುಖ ಏಳಿಗೆಗೆ ತೋರಿಸಿರುವ ಮಾರ್ಗದಲ್ಲಿ ನಡೆಯುವುದು ನಮ್ಮೆೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಶಾಸಕ ಬಸವರಾಜ ಮತ್ತಿಿಮಡು ಹೇಳಿದರು.
ನಗರದ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ಜಿಲ್ಲಾಡಳಿತದ ವತಿಯಿಂದ ಜರುಗಿದ ಶ್ರೀ ಸಂತ ಸೇವಾಲಾಲ ಮಹಾರಾಜರ ಜಯಂತೋತ್ಸವದಲ್ಲಿ ಸೇವಾಲಾಲ ಮಹಾರಾಜರ ಭಾವಚಿತ್ರಕ್ಕೆೆ ಪುಷ್ಪಾಾರ್ಚನೆ ಮಾಡಿ ಮಾತನಾಡಿದರು. ಬಂಜಾರ ಸಮಾಜವು ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಇಡೀ ವಿಶ್ವಕ್ಕೆೆ ಮಾದರಿಯಾಗಿದೆ. ನುಡಿದಂತೆ ನಡೆಯುವ ಮತ್ತು ಕೈಹಿಡಿದವರನ್ನು ಎಂದಿಗೂ ಕೈಬಿಡದ ವಿಶ್ವಾಾಸಾರ್ಹ ಸಮಾಜ ಎಂದು ಶ್ಲಾಾಘಿಸಿದರು. ಬಂಜಾರ ಸಮಾಜದ ಅಭಿವೃದ್ಧಿಿಗೆ ರಾಜಕೀಯ ಮರೆತು ನಾವೆಲ್ಲರೂ ಒಂದಾಗಿ ಶ್ರಮಿಸಬೇಕು ಎಂದರು.
ಶಾಸಕರಾದ ಡಾ.ಅವಿನಾಶ ಜಾಧವ ಮಾತನಾಡಿ, ಮಾಜಿ ಮುಖ್ಯಮಂತ್ರಿಿ ಯಡಿಯೂರಪ್ಪನವರು ಸರ್ಕಾರದಲ್ಲಿದ್ದಾಗ ಬಂಜಾರಾ ಸಮಾಜದ ನಿಗಮ ಸ್ಥಾಾಪನೆ ಮಾಡಿದರು. ಸಮಾಜದ ಸರ್ವತೋಮುಖ ಅಭಿವೃದ್ಧಿಿಯಾಗಬೇಕಿದ್ದರೆ ಯಾವುದೇ ರಾಜಕೀಯ ಪಕ್ಷಪಾತ ಹಾಗೂ ಭಿನ್ನಾಾಭಿಪ್ರಾಾಯಗಳನ್ನು ಮರೆತು ನಾವೆಲ್ಲರೂ ಮೊದಲು ಒಂದಾಗಬೇಕು. ಸಮಾಜದ ಹಿರಿಯರು ಮತ್ತು ಕಿರಿಯರು ಒಗ್ಗಟ್ಟಿಿನಿಂದ ಶ್ರಮಿಸಿದರೆ ಮಾತ್ರ ಸಮಾಜಕ್ಕೆೆ ಒಳ್ಳೆೆಯದು ಮಾಡಲು ಸಾಧ್ಯ ಎಂದು ತಿಳಿಸಿದರು.
ವಿಧಾನ ಪರಿಷತ್ ಶಾಸಕ ಡಾ.ಬಿ.ಜಿ. ಪಾಟೀಲ, ಶ್ರೀ ಸಂತ ಸೇವಾಲಾಲ್ ಮಹಾರಾಜ ಜಿಲ್ಲಾ ಗೌರವಾಧ್ಯಕ್ಷರು ಹಾಗೂ ಮಾಜಿ ಸಚಿವ ರೇವೂ ನಾಯಕ ಬೆಳಮಗಿ ಮಾತನಾಡಿದರು. ಡಾ.ಗಣಪತಿ ರಾಠೋಡ ವಿಶೇಷ ಉಪನ್ಯಾಾಸ ನೀಡಿದರು. ಇದಕ್ಕೂ ಮುನ್ನ ಗಂಜ್ ನಗರೇಶ್ವರ ಶಾಲೆಯಿಂದ ರಂಗಮಂದಿರ ವರೆಗೆ ಭವ್ಯವಾದ ಮೆರವಣೆಗೆ ಜರುಗಿತು.
ಸಮಾರಂಭದಲ್ಲಿ ಕೆಸರಟಗಿಯ ಮಾತಾ ಲತಾ ದೇವಿ, ಓಂಕಾರ ಮಹಾರಾಜ, ಶಂಕರ ಮಹಾರಾಜ ದಿವ್ಯ ಸಾನಿಧ್ಯವಹಿಸಿದರು. ಎಂಎಲ್ಸಿಿ ಶಶೀಲ ನಮೋಶಿ, ಶಿವಪ್ರಭು ಹೀರೆಮಠ, ಜಿಲ್ಲಾ ಜಯಂತೋತ್ಸವ ಸಮಿತಿ ಅಧ್ಯಕ್ಷರಾದ ಸಾಗರ ರಾಠೋಡ, ಮಹೇಶ ಹುಬಳ್ಳಿಿ, ಜಗದೀಶ್ವರಿ ನಾಸಿ ವಿಠಲ ಜಾಧವ, ಪ್ರೇೇಮಸಿಂಗ ಚವ್ಹಾಾಣ, ಶ್ಯಾಾಮನೂರ ಪವರ, ಕೃಷ್ಣೇ ನಾಯಕ, ಬಾಬು ಜಾಧವ, ಉಮೇಶ ರಾಠೋಡ, ರಾಕೇಶ ಚವ್ಹಾಾಣ ಸೇರಿದಂತೆ ಸಮಾಜದ ಮುಖಂಡರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ