Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮೇತನಹಳ್ಳಿ ಗ್ರಾ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ

ಸುದ್ದಿಮೂಲ ವಾರ್ತೆ

ಹೊಸಕೋಟೆ, ಆ.23: ತಾಲ್ಲೂಕಿನ ಸಮೇತನಹಳ್ಳಿ ಗ್ರಾಮ ಪಂಚಾಯ್ತಿಯ ನೂತನ ಅಧ್ಯಕ್ಷರಾಗಿ ಸಮೇತನಹಳ್ಳಿ ಗ್ರಾಮದ ಅನ್ನಪೂರ್ಣ ಶಂಕರ್ ಹಾಗೂ ಉಪಾಧ್ಯಕ್ಷರಾಗಿ ತಿರುಮಲಶೆಟ್ಟಿಹಳ್ಳಿ ಗ್ರಾಮದ ರಾಜಣ್ಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಅನುಗೊಂಡನಹಳ್ಳಿ ಹೋಬಳಿಯ ಸಮೇತನಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 23 ಸದಸ್ಯರ ಹಾಗೂ ಕಾಂಗ್ರೆಸ್ ಬೆಂಬಲಿತ 8 ಸದಸ್ಯರ ಸಂಖ್ಯಾಬಲ ಇತ್ತು. ಬಹುಮತ ಇರುವ ಬಿಜೆಪಿ ಬೆಂಬಲಿತ ಅನ್ನಪೂರ್ಣ ಶಂಕರ್ ಒಬ್ಬರು ಮಾತ್ರ ಅಧ್ಯಕ್ಷ ಸ್ಥಾನಕ್ಕೆ

ನಾಮಪತ್ರ ಸಲ್ಲಿಸಿದ ಕಾರಣ ಅಧ್ಯಕ್ಷರನ್ನಾಗಿ ಹಾಗೂ ತಿರುಮಲಶೆಟ್ಟಿಹಳ್ಳಿ ರಾಜಣ್ಣ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಿ ಚುನಾವಣೆ ಅಧಿಕಾರಿ ಚಂದ್ರಶೇಖರ್ ಘೋಷಿಸಿದರು.

ಗ್ರಾಮ ಪಂಚಾಯ್ತಿ ಸದಸ್ಯರಾದ ಕೊರಳೂರು ನಾರಾಯಣಸ್ವಾಮಿ ಮಾತನಾಡಿ, ಈ ಪಂಚಾಯ್ತಿ ಬಿಜೆಪಿ ಬೆಂಬಲಿತ ಅದ್ಯಕ್ಷರನ್ನಾಗಿ ಮೂರನೇ ಬಾರಿಗೆ ಆಯ್ಕೆ ಮಾಡುತ್ತಿದ್ದು ಇಲ್ಲಿ ಪಕ್ಷ ಭೇದ ಬಿಟ್ಟು ಎಲ್ಲರೂ ಒಗ್ಗಟ್ಟಾಗಿ ಅಧ್ಯಕ್ಷರನ್ನು ಆಯ್ಕೆ ಮಾಡುತ್ತಿದ್ದೇವೆ. ಅದೇ ರೀತಿ ಈ ಬಾರಿಯ ಅವಧಿಗೆ ನಮ್ಮ ಮಾಜಿ ಸಚಿವರು

ಹಾಗೂ ಹಾಲಿ ವಿಧಾನಪರಿಷತ್ ಸದಸ್ಯರಾದ ಎಂ.ಟಿ.ಬಿ. ನಾಗರಾಜ್ ಅವರ ಮಾರ್ಗದರ್ಶನದಲ್ಲಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಎಲ್ಲಾ ಗ್ರಾಮಗಳ ಅಭಿವೃದ್ದಿಗೆ ಶ್ರಮ ವಹಿಸಬೇಕು ಎಂದರು.

ನೂತನ ಅಧ್ಯಕ್ಷೆ ಅನ್ನಪೂರ್ಣಶಂಕರ್ ಮಾತನಾಡಿ, ಈ ಹಿಂದೆ ಇದ್ದಂತಹ ಅಧ್ಯಕ್ಷರು ತಮ್ಮ ಶಕ್ತಿ ಮೀರಿ ಪಂಚಾಯಿತಿ ಅಭಿವೃದ್ಧಿಗೆ ಕೆಲಸ ಮಾಡಿದ್ದಾರೆ. ಅದರಂತೆ ನಾವು ಸಹ ಗ್ರಾಮಗಳಿಗೆ ಬೇಕಾದ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ನೀಡುವುದರ ಜೊತೆಗೆ ಇನ್ನು ಹೆಚ್ಚಿನ ರೀತಿಯಲ್ಲಿ ಗ್ರಾಮಗಳ ಅಭಿವೃದ್ದಿ ಮಾಡಲು ಎಲ್ಲಾ ಸದಸ್ಯರ ಜೊತೆ ಚರ್ಚೆ ನಡೆಸಿ ನಮ್ಮ ಸಮೇತನಹಳ್ಳಿ ಗ್ರಾಮ ಪಂಚಾಯ್ತಿಯನ್ನು ಮಾದರಿ ಪಂಚಾಯ್ತಿಯನ್ನಾಗಿ ಮಾರ್ಪಡಿಸುತ್ತೇವೆ ಎಂದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯರು ಹಾಗು ಬಿಜೆಪಿ ಮುಖಂಡರಾದ ಕೊರಳೂರು ನಾರಾಯಣಸ್ವಾಮಿ, ಶಂಕರೇಗೌಡ, ಗ್ರಾಮ ಪಂಚಾಯ್ತಿ ಸದಸ್ಯರಾದ ಸಮೇತನಹಳ್ಳಿ ಉಮೇಶ್, ಕೊರಳೂರು ಕವಿತ ರಮೇಶ್, ಮಾಜಿ ತಾಲ್ಲೂಕು ಪಂಚಾಯ್ತಿ ಸದಸ್ಯ ಶ್ರೀನಿವಾಸ್, ಪಿಡಿಓ ಪ್ರಸಾದ್, ತಿರುಮಲಶೆಟ್ಟಿಹಳ್ಳಿ ಚಿಕ್ಕಣ್ಣ, ಸೇರಿದಂತೆ ಹಲವಾರು ಮುಖಂಡರು ಗ್ರಾಮಸ್ಥರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ