Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸತೀಶ ಜಾರಕಿಹೊಳಿ ಡಿಸಿಎಂ ಮಾಡಿ:ರತ್ನಾಕರ

ಸುದ್ದಿಮೂಲ ವಾರ್ತೆ

ಕೊಪ್ಪಳ,ಮೇ 16: ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಏಳ್ಗೆಗೆ ಶ್ರಮಿಸಿದ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು. ವಾಲ್ಮೀಕಿ ನಾಯಕ ಸಮಾಜದ ಮುಖಂಡರಾಗಿರುವ ಸತೀಶ ಜಾರಕಿಹೊಳಿಯವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂದು ಕೊಪ್ಪಳ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಜಿಲ್ಲಾಧ್ಯಕ್ಷ ಟಿ ರತ್ನಾಕರ ಆಗ್ರಹಿಸಿದ್ದಾರೆ.



ಅವರು ಇಂದು ಕೊಪ್ಪಳದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೇ ಸತೀಶ ಜಾರಕಿಹೊಳಿ ನಾನು ಸಿಎಂ ಆಕಾಂಕ್ಷಿ ಅಲ್ಲ ಎಂದು ಹೇಳಿರುವುದರಿಂದ ನಾಯಕ ಸಮಾಜಕ್ಕೆ ಡಿಸಿಎಂ ಹುದ್ದೆ ನೀಡಬೇಕೆಂದು ಅವರು ಆಗ್ರಹಿಸಿದರು.

ರಾಜ್ಯದಲ್ಲಿ ಪರಿಶಿಷ್ಠ ವರ್ಗಕ್ಕೆ 15 ಸ್ಥಾನ ಮೀಸಲಿಡಲಾಗಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮೀಸಲು ಕ್ಷೇತ್ರದಿಂದ 14 ಹಾಗು ಕೆ ಎನ್ ರಾಜಣ್ಣ ಸಾಮಾನ್ಯ ಕ್ಷೇತ್ರದಿಂದ ಆಯ್ಕೆಯಾಗಿರುವ ನಾಯಕ ಸಮಾಜದ ಮುಖಂಡರಾಗಿದ್ದಾರೆ. ಇದು ಹಿಂದಿನ ಸರಕಾರ ವಾಲ್ಮೀಕಿ ನಾಯಕ ಸಮಾಜಕ್ಕೆ ಕೇವಲ ಕಣ್ಣೊರೆಸುವ ತಂತ್ರ ಮಾಡಿರುವುದಕ್ಕೆ ದಿಕ್ಸೂಚಿಯಾಗಿದೆ ಎಂದರು.

ರಾಜ್ಯದಲ್ಲಿ ಐದು ಜನರಿಗೆ ಒಬ್ಬರಂತೆ ಸಚಿವರನ್ನಾಗಿ ಮಾಡಲು ಅವಕಾಶವಿದೆ.ಕಾಂಗ್ರೆಸ್ ಪಕ್ಷದಿಂದ ನಾಯಕ ಸಮಾಜದವರು 15 ಜನರು ಆಯ್ಕೆಯಾಗಿದ್ದಾರೆ. ಈ ಕಾರಣಕ್ಕಾಗಿ ನಾಯಕ ಸಮಾಜದವರಲ್ಲಿ ಮೂರು ಜನರನ್ನು ಸಚಿವರನ್ನಾಗಿ ಮಾಡಬೇಕೆಂದು ಆಗ್ರಹಿಸಿದರು.

ಸತೀಶ ಜಾರಕಿಹೊಳಿ ನಾಯಕ ಸಮಾಜ ಸೇರಿದಂತೆ ಎಲ್ಲಾ ವರ್ಗದ ಜನರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ರಾಮಣ್ಣ ಕಲ್ಲಣ್ಣನವರ, ಕೆ ಎನ್ ಪಾಟೀಲ, ಮಾಲತಿ ನಾಯಕ ಹಾಗು ಮಂಜುನಾಥ ಗೊಂಡಬಾಳ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ