Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆ ಯಾದಗಿರಿ ನಗರಕ್ಕೆ ಸತ್ಯಾತ್ಮತೀರ್ಥರು

ಸುದ್ದಿಮೂಲ ವಾರ್ತೆ

ಯಾದಗಿರಿ, ಜು. 3 - ಇಂದು ಜುಲೈ 4 ಮಂಗಳವಾರ ನಗರಕ್ಕೆ ಉತ್ತರಾಧಿ ಮಠಾಧೀಶರಾದ ಶ್ರೀ ಸತ್ಯಾತ್ಮ ತೀರ್ಥರು ಆಗಮಿಸಲಿದ್ದಾರೆ.

ಜುಲೈ 5 ಬುಧವಾರ, ಶ್ರೀ ಉತ್ತರಾದಿ ಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥರ ದಿವ್ಯ ಸಾನಿಧ್ಯದಲ್ಲಿ ಯಾದಗಿರಿ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಬೆಳಗ್ಗೆ ಮುದ್ರದಾರಣೆ, ಬಳಿಕ 10.30ಕ್ಕೆ ಭಕ್ತರಾದ ಅಪ್ಪಾರವ್ ಎಂ. ಸೌದಿ ಅವರ ಮನೆಯಲ್ಲಿ ಮೂಲ ರಾಮ ದೇವರ ಪೂಜೆ ಜರುಗಲಿದೆ, ಮಧ್ಯಾಹ್ನ ತೀರ್ಥ, ಪ್ರಸಾದ ಮಂತ್ರಾಕ್ಷತೆ ನಡೆಯಲಿದೆ, ಸಂಜೆ ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರವಚನ ಕಾರ್ಯಕ್ರಮ ನಡೆಯಲಿದೆ.

ಜುಲೈ 6ಗುರುವಾರ, ಯರಗೋಳದಲ್ಲಿ ಜಯತೀರ್ಥರ ಪೂರ್ವಾರಾಧನೆ, ಜುಲೈ 7 ಶುಕ್ರವಾರ, ಮತ್ತು 8 ಶನಿವಾರ ಮಳಖೇಡದಲ್ಲಿ ಜಯತೀರ್ಥರ ಮೂಲ ಬೃಂದಾವನದಲ್ಲಿ ಮಧ್ಯಾರಾದನೆ, ಉತ್ತರರಾಧನೆ ಜರುಗಲಿದೆ.

ನಿತ್ಯವೂ ಮೂಲ ರಾಮದೇವರ ಪೂಜೆ, ಗುರುವಾರ ಯರಗೋಳ ದಲ್ಲಿ ರಾಮಚಂದ್ರ ತೀರ್ಥರು, ವಿದ್ಯಾನಿಧಿ ತೀರ್ಥರ ಮೂಲ ಬೃಂದಾವನದಲ್ಲಿ , ಶುಕ್ರವಾರ ಮತ್ತು ಶನಿವಾರ ಮಳಖೇಡದಲ್ಲಿ ಜಯತೀರ್ಥರ, ಅಕ್ಷೋಭ್ಯ ತೀರ್ಥರ

ಹಾಗೂ ರಘುನಾಥ ತೀರ್ಥರ ಮೂಲ ಬೃಂದಾವನದ ವಿಶೇಷ ಪೂಜೆ, ಅಭಿಷೇಕ, ಅಲಂಕಾರ, ಮಹಾಮಂಗಳಾರತಿ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮ ಜರಗಲಿವೆ.

ಕಲಾವಿದರಿಂದ ದಾಸವಾಣಿ, ಪಂಡಿತರ ಉಪನ್ಯಾಸ, ಶ್ರೀಪಾದಂಗಳವರ ಅನುಗ್ರಹ ಸಂದೇಶ ನೀಡಲಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಜಯತೀರ್ಥರ ಅನುಗ್ರಹಕ್ಕೆ ಪಾತ್ರರಾಗಲು ಮಠದ ವ್ಯವಸ್ಥಾಪಕರಾದ ಪಂಡಿತ ಸತ್ಯ ಬೋದಾಚಾರ್ಯ ಘಟಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ