Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಸೇರ್ಪಡೆ ಬಹತೇಕ ಖಚಿತ ಬಿಜೆಪಿಗೆ ಇಂದು ರಾಜೀನಾಮೆ ನೀಡಲು ಸವದಿ ನಿರ್ಧಾರ

ಸುದ್ದಿಮೂಲ ವಾರ್ತೆ
ಬೆಳಗಾವಿ, ಏ.14: ಅಥಣಿ ಕ್ಷೇತ್ರದಿಂದ ಟಿಕೆಟ್ ಸಿಗದೆ ಬಿಜೆಪಿ ಜೊತೆ ಮುನಿಸಿಕೊಂಡಿರುವ ಲಕ್ಷ್ಮಣ ಸವದಿ ಅವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಶುಕ್ರವಾರ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.

ಸವದಿ ಅಥಣಿ ಕ್ಷೇತ್ರದ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ, ಮಹೇಶ್ ಕುಮಟಳ್ಳಿ ಅವರಿಗೆ ಟಿಕೆಟ್ ನೀಡಿದ ಕಾರಣ ಬಿಜೆಪಿ ನಾಯಕರ ವಿರುದ್ಧ ಸವದಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಥಣಿ ಪಟ್ಟಣದಲ್ಲಿ ಕಾರ್ಯಕರ್ತರ ಸಮಾವೇಶ ಆಯೋಜಿಸಿದ್ದ ಸವದಿ, ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದು, ಪಕ್ಷೇತರನಾಗಿ ಸ್ಪರ್ಧಿಸಬೇಕೆ ಅಥವಾ ಕಾಂಗ್ರೆಸ್ ಪಕ್ಷ ಸೇರಬೇಕೆ ಎಂಬುದರ ಬಗ್ಗೆ ಸುದೀರ್ಘವಾಗಿ ಚರ್ಚಿಸಿದರು. ಸಭೆಯಲ್ಲಿ ಭಾಗಿಯಾಗಿದ್ದ ಜನರೂ ಸಹ ತಾವು ಕಾಂಗ್ರೆಸ್ ಸೇರುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ವೇಳೆ ಮಾನಾಡಿದ ಸವದಿ, ಅಥಣಿ ಟಿಕೆಟ್ ಹಂಚಿಕೆ ಸಂಬಂಧ ಕೋರ್ ಕಮಿಟಿ ಸಭೆಯಲ್ಲಿ ನಾನೂ ಭಾಗಿಯಾಗಿದ್ದೆ. ನನಗೆ ಅಥಣಿ ಟಿಕೆಟ್ ನೀಡುವಂತೆ ವರಿಷ್ಠರನ್ನು, ರಾಜ್ಯ ನಾಯಕರನ್ನು ಕೋರಿದ್ದೆ. ನನಗೆ ಟಿಕೆಟ್ ನೀಡಿದಿದ್ದರೆ ಬಿಜೆಪಿಗೆ ಗೆಲುವು ಕಷ್ಟ ಎಂದೂ ಸಹ ಹೇಳಿದ್ದೆ. ಅಥಣಿಯಲ್ಲಿ ಬಿಜೆಪಿ ಸೋತರೆ ಆ ಸೋಲಿನ ಹಣೆಪಟ್ಟಿ ನನ್ನ ವಿರುದ್ಧ ಕಟ್ಟಲು ತಂತ್ರ ನಡೆದಿದೆ. ನನ್ನ ಕ್ಷೇತ್ರ, ಇಲ್ಲಿ ನಾನು ಪಕ್ಷವನ್ನು ಸಂಘಟನೆ ಮಾಡಿದ್ದೇನೆ. ಕಟ್ಟಿ ಬೆಳೆಸಿದ್ದೇನೆ. ಆದರೆ ನನ್ನ ಮನವಿಗೆ ಸ್ಪಂದಿಸಲಿಲ್ಲ ಹೀಗಾಗಿ ಬೇಸರವಾಗಿದೆ ಎಂದು ಹೇಳಿದರು.

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ವಿಧಾನ ಪರಿಷತ್ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡುತ್ತೇನೆ. ಅಥಣಿ ಅಭಿವೃದ್ದಿಗೆ ಶ್ರಮಿಸುವ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ. ಇಲ್ಲವಾದರೆ ಪಕ್ಷೇತರರನಾಗಿ ಸ್ಪರ್ಧಿಸುತ್ತೇನೆ ಎಂದು ಸವದಿ ಹೇಳಿದರು.

ಮೂಲಗಳ ಪ್ರಕಾರ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರಲಿದ್ದಾರೆ. ಶುಕ್ರವಾರ ವಿಧಾನಪರಿಷತ್ ಮತ್ತು ಬಿಜೆಪಿಗೆ ರಾಜೀನಾಮೆ ನೀಡಿದ ಬಳಿಕ ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ