Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಗರಣ ಮುಕ್ತ, ದಕ್ಷ, ಪ್ರಾಮಾಣಿಕ ಸರ್ಕಾರ ನಮ್ಮ ಧ್ಯೇಯ: ಈಶ್ವರ ಖಂಡ್ರೆ

ಬೆಂಗಳೂರು, ಜೂ.8: ರಾಜ್ಯದ ಜನತೆಯ ನಿರೀಕ್ಷೆಗೆ ತಕ್ಕಂತೆ ದಕ್ಷ, ಪ್ರಾಮಾಣಿಕ, ಹಗರಣರಹಿತ ಹಾಗೂ ಪಾರದರ್ಶಕ ಆಡಳಿತ ನೀಡಲು ಶಕ್ತಿ ಮೀರಿ ಶ್ರಮಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ವಿಕಾಸಸೌಧದಲ್ಲಿಂದು ತಮ್ಮ ಅಧಿಕೃತ ಕಚೇರಿಯ ಪೂಜೆ ನೆರವೇರಿಸಿ ಮಾತನಾಡಿದ ಅವರು, ವಿಧಾನಸೌಧದ ಕಟ್ಟಡದ ಮೇಲೆ ಸರ್ಕಾರದ ಕೆಲಸ ದೇವರ ಕೆಲಸ ಎಂಬ ಲೇಖವಿದೆ. ಅದರಂತೆ ಜನಪರವಾದ, ಜನಸ್ನೇಹಿಯಾಗಿ ಇಲಾಖೆಯ ಕೆಲಸವನ್ನು ದೇವರ ಕೆಲಸ ಎಂಬಂತೆ ನಿಸ್ಪೃಹತೆಯಿಂದ ಮಾಡುವುದಾಗಿ ತಿಳಿಸಿದರು.



ಇಂದು ಅರಣ್ಯ, ಪರಿಸರ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಈ ಎಲ್ಲ ಸವಾಲುಗಳನ್ನು ಮೆಟ್ಟಿನಿಂತು ಇಲಾಖೆಯಲ್ಲಿ ಕಣ್ಣಿಗೆ ಕಾಣುವಂತಹ ಮಹತ್ವದ ಬದಲಾವಣೆ ಮಾಡಲು ಶ್ರಮಿಸುವುದಾಗಿ ತಿಳಿಸಿದರು.

ಇಂದು ಭೂಗ್ರಹದ ಮುಂದೆ ದೊಡ್ಡ ಸವಾಲಿದೆ. ಪ್ಲಾಸ್ಟಿಕ್ ಸಮಸ್ಯೆ ತೀವ್ರವಾಗಿದೆ. ಕುಡಿಯುವ ನೀರು, ಪ್ರಾಣವಾಯು ಗಾಳಿಯೂ ಕಲುಷಿತವಾಗುತ್ತಿದೆ. ಈ ನಿಟ್ಟಿನಲ್ಲಿ ರಾಜ್ಯದ ಐದು ಪ್ರಮುಖ ನಗರಗಳನ್ನು ಪ್ಲಾಸ್ಟಿಕ್ ಮುಕ್ತ ಗೊಳಿಸಲು ತೀರ್ಮಾನಿಸಲಾಗಿದೆ. ಇದರ ಜೊತೆಗೆ ಈ ವರ್ಷ ಅರಣ್ಯ ಇಲಾಖೆಯ ವತಿಯಿಂದ ಮತ್ತು ಸಾರ್ವಜನಿಕರ ನೆರವಿನಿಂದ 5 ಕೋಟಿ ಸಸಿಗಳನ್ನು ನೆಟ್ಟು, ಪೋಷಿಸುವ ಸಂಕಲ್ಪ ಮಾಡಲಾಗಿದೆ ಎಂದರು.

ಪಕ್ಷದ ವರಿಷ್ಠರಾದ ಸೋನಿಯಾಗಾಂಧೀ, ರಾಹುಲ್ ಗಾಂಧೀ, ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಕರ್ನಾಟಕವನ್ನು ದೇಶದಲ್ಲಿಯೇ ನಂಬರ್ 1 ರಾಜ್ಯ ಮಾಡಲು ಶ್ರಮಿಸಲಾಗುವುದು ಎಂದರು.

ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವನಾಗಿ ಅಧಿಕಾರ ವಹಿಸಿಕೊಂಡ ತರುವಾಯ ತುಮಕೂರು, ಚಿತ್ರದುರ್ಗ, ರಾಮನಗರ ಜಿಲ್ಲೆಗೆ ಭೇಟಿ ನೀಡಿ ಅರಣ್ಯ ಇಲಾಖೆಯ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚಿಸಿದ್ದೇನೆ. ರಾಮನಗರ ಜಿಲ್ಲೆಯಲ್ಲಿ ಆನೆ ದಾಳಿಯಿಂದ ಮೃತಪಟ್ಟ ಇಬ್ಬರು ಕೂಲಿ ಕಾರ್ಮಿಕರ ಕುಟುಂಬಕ್ಕೆ ಸಾಂತ್ವನ ಹೇಳಿ, ಘಟನೆ ನಡೆದ 3 ದಿನಗಳ ಒಳಗಾಗಿ ತಲಾ 15 ಲಕ್ಷ ಪರಿಹಾರದ ಚೆಕ್ ವಿತರಿಸಿದ್ದೇನೆ.

ನೊರೆ ಮತ್ತು ಮಾಲಿನ್ಯದಿಂದ ಕಲುಷಿತವಾಗಿ ಅಪಾಯಕಾರಿ ಹಂತ ತಲುಪಿರುವ ಬೆಂಗಳೂರಿನ ಬೆಳ್ಳಂದೂರು ಕೆರೆಗೂ ಖುದ್ದು ಭೇಟಿ ನೀಡಿ, 2024ರೊಳಗೆ ಕೆರೆ ಮಾಲಿನ್ಯ ತಡೆಗೆ ಅಗತ್ಯವಾದ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಮುಂದಿನ ದಿನಗಳಲ್ಲಿ ಇಲಾಖೆಯ ಬಗ್ಗೆ ನಾಡಿನ ಜನತೆ ಹೆಮ್ಮೆ ಪಡುವಂತೆ ಕಾರ್ಯ ನಿರ್ವಹಿಸುತ್ತೇನೆ ಎಂದು ಈಶ್ವರ ಖಂಡ್ರೆ ಹೇಳಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ