Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗೃಹ ಜ್ಯೋತಿಯ ಅರ್ಜಿಗಾಗಿ ಪರದಾಟ

 

ಸುದ್ದಿಮೂಲವಾರ್ತೆ

ಕೊಪ್ಪಳ ಜೂ 19:ರಾಜ್ಯ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ 200 ಯುನಿಟ್ ವರೆಗೂ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆ ಜಾರಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಕಾರ್ಯ ಆರಂಭವಾಗಿದೆ. ಆದರೆ ಗೃಹ ಜ್ಯೋತಿ ಅರ್ಜಿಯ ಸರ್ವರ್ ಡೌನ್ ಇದ್ದು. ಅರ್ಜಿ ಸಲ್ಲಿಸಲು ಬಂದವರು ಪರದಾಡುವಂತಾಗಿದೆ. ಅರ್ಜಿ ಸಲ್ಲಿಸುವದಕ್ಕಾಗಿ ದಿನವಿಡೀ ಕಾಯಿಯುವಂತಾಗಿದೆ.

ಕಾಂಗ್ರೆಸ್ ಸರಕಾರ ಚುನಾವಣೆಯ ಮುನ್ನ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದೆ. ಈ ಗ್ಯಾರಂಟಿ ಯೋಜನೆಗಳನ್ನು ನಂಬಿ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದೆ. ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರಕಾರವು ಒಂದೊಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಈಗಾಗಲೇ ಮಹಿಳೆಯರು ಬಸ್ ನಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆ ಜಾರಿಗೊಳಿಸಿದೆ. ಈ ಮಧ್ಯೆ ಆಗಷ್ಟ ತಿಂಗಳಿನಿಂದ ಗೃಹ ಬಳಕೆಯ 200 ಯುನಿಟ್ ವರೆಗೂ ಉಚಿತ ವಿದ್ಯುತ್ ನೀಡಲು ಭಾನುವಾರದಿಂದ ಆನ್ ಲೈನ್ ಅರ್ಜಿ ಸಲ್ಲಿಸುವ ಕಾರ್ಯ ಆರಂಭಿಸಿದೆ. ಯುನಿಟ್ ವರೆಗೆ ವಿದ್ಯುತ್ ನ್ನು ಉಚಿತವಾಗಿ ಪಡೆಯಲು ನಿನ್ನೆಯಿಂದಲೇ ಹಲವರು ಅರ್ಜಿ ಸಲ್ಲಿಸಲು ಮುಂದಾಗಿದ್ದಾರೆ.

ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಕರ್ನಾಟಕ್ ಒನ್. ನೆಮ್ಮದಿ. ಗ್ರಾಮ ಒನ್ ಹಾಗು ನೆಟ್ ಸೆಂಟರ್ ಗಳಲ್ಲಿ ಜನ ಅರ್ಜಿ ಹಾಕಲು ಬಂದಿದ್ದಾರೆ. ನೆಟ್ ಸೆಂಟರ್ ನಲ್ಲಿ ಸೇವಾ ಸಿಂಧು ಆಪ್ ನಲ್ಲಿ ಗೃಹ ಜ್ಯೋತಿ ಯೋಜನೆ ಅರ್ಜಿ ಸಲ್ಲಿಸಲು ಆಗುತ್ತಿಲ್ಲ. ಇನ್ನೂ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಕರ್ನಾಟಕ ಒನ್ ಕೇಂದ್ರದಲ್ಲಿ ಇಲ್ಲಿಯವರೆಗೂ ಕೇವಲ 5 ಜನರ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಗಾಗಿ ನೂರಾರು ಜನ ಕರ್ನಾಟಕ ಒನ್ ಕೇಂದ್ರದಲ್ಲಿ ಕಾಯಿಯುತ್ತಿದ್ದಾರೆ. ಇಲ್ಲಿ ಆಧಾರ ಕಾರ್ಡ್ ನಲ್ಲಿ ಬದಲಾವಣೆಗಾಗಿ ಕೆಲವರು ಕಾಯಿಯುತ್ತಿದ್ದು ಸರ್ವರ್ ಸಮಸ್ಯೆಯಿಂದಾಗಿ ಅರ್ಜಿ ಅಪಲೋಡ್ ಆಗದೆ ಜನರು ಪರದಾಡುವಂತಾಗಿದೆ. ಅರ್ಜಿ ಸಲ್ಲಿಸುವ ಸರ್ವರ್ ಗೆ ಬೇರೆ ಸರ್ವರ್ ಗಳ ಲಿಂಕ್ ಕೊಡಬೇಕು ಅಲ್ಲದೆ ಸರ್ವರ್ ನ್ನು ಬಲಪಡಿಸಬೇಕೆಂದು ಜನತೆ ಹೇಳುತ್ತಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ