Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆ.21ರಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆ-2

 

ಸುದ್ದಿಮೂಲ ವಾರ್ತೆ

ಬೆಂಗಳೂರು, ಜು.28: ಅನುತ್ತೀರ್ಣರಾದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಮತ್ತೊಂದು ಪೂರಕ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ಧರಿಸಿದ್ದು, ಇಂದು ಪರೀಕ್ಷಾ ವೇಳಾಪಟ್ಟಿ ಬಿಡುಗಡೆ ಮಾಡಿದೆ.

ಆ. 21ರಿಂದ ಸೆ. 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ನಡೆಯಲಿವೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟಿಸಿದೆ.

2022-23ನೇ ಸಾಲಿನಲ್ಲಿ ಹಾಗೂ ಅದಕ್ಕಿಂತ ಹಿಂದಿನ ವರ್ಷಗಳಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ ಈ ಪರೀಕ್ಷೆಗೆ ನೋಂದಾಯಿಸಲು ಅರ್ಹರಾಗಿರುತ್ತಾರೆ. ಫಲಿತಾಂಶ ತಿರಸ್ಕರಿಸಲು ಸದರಿ ಪರೀಕ್ಷೆಯಲ್ಲಿ ಅವಕಾಶವಿರುವುದಿಲ್ಲ. ಪರೀಕ್ಷೆ ಸಂಬಂಧಿಸಿದ ಸುತ್ತೋಲೆ ಹಾಗೂ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ https://kseab.karnataka.gov.in ಪ್ರಕಟಿಸಲಾಗಿದೆ. ಈ ಅವಕಾಶವನ್ನು ವಿದ್ಯಾರ್ಥಿಗಳು ಉಪಯೋಗಿಸಿಕೊಳ್ಳಬೇಕು ಎಂದು ಮಂಡಳಿ ತಿಳಿಸಿದೆ.

ಈ ಮೊದಲು ಪ್ರಸಕ್ತ ವರ್ಷದಲ್ಲಿ ಮೇ ಮತ್ತು ಜೂನ್ ತಿಂಗಳಿನಲ್ಲಿ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ನಡೆಸಲಾಗಿತ್ತು. ಆ ಬಳಿಕ ಜೂನ್ 20 ರಂದು ಫಲಿತಾಂಶ ಪ್ರಕಟವಾಗಿತ್ತು. ಇದೀಗ ಮತ್ತೊಂದು ಪೂರಕ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ದಿನಾಂಕ ಪ್ರಕಟಿಸಿದೆ.

ಕಳೆದ ಬಾರಿಯ ಪೂರಕ ಪರೀಕ್ಷೆಗೆ ಒಟ್ಟು 1,58,881 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ಆದರೆ 1,57,756 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 50,478 ವಿದ್ಯಾರ್ಥಿಗಳು ಪಾಸ್ ಆಗಿದ್ದರು. ಪೂರಕ ಪರೀಕ್ಷೆಯಲ್ಲಿ ಶೇ.32 ರಷ್ಟು ಫಲಿತಾಂಶ ಬಂದಿತ್ತು.

ಇದಕ್ಕೂ ಮುನ್ನ ಮಾರ್ಚ್‌ ತಿಂಗಳಲ್ಲಿ ನಡೆದ 2022-23ನೇ ಸಾಲಿನ ದ್ವಿತೀಯ ಪಿಯಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಏಪ್ರಿಲ್‌ನಲ್ಲಿ ಪ್ರಕಟವಾಗಿತ್ತು. ಈ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದರು. ಪರೀಕ್ಷೆಗೆ ಹಾಜರಾದ ಒಟ್ಟು 7,02,067 ವಿದ್ಯಾರ್ಥಿಗಳ ಪೈಕಿ 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಶೇ. 74.67 ರಷ್ಟು ಫಲಿತಾಂಶ ಬಂದಿತ್ತು. ವಾಣಿಜ್ಯ ವಿಭಾಗದಲ್ಲಿ ಶೇ. 75.8, ಕಲಾ ವಿಭಾಗ ಶೇ. 61.22 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.85.71 ರಷ್ಟು ವಿದ್ಯಾರ್ಥಿಗಳು ಪಾಸ್ ಆಗಿದ್ದರು.

ವೇಳಾಪಟ್ಟಿ ಹೀಗಿದೆ:

ಆಗಸ್ಟ್ 21: ಕನ್ನಡ

ಆಗಸ್ಟ್ 22: ರಸಾಯನಶಾಸ್ತ್ರ

ಆಗಸ್ಟ್ 23: ಸಮಾಜ ಶಾಸ್ತ್ರ,

ಆಗಸ್ಟ್ 24: ವ್ಯವಹಾರ ಅಧ್ಯಯನ

ಆಗಸ್ಟ್ 25: ಇತಿಹಾಸ

ಆಗಸ್ಟ್ 26: ಇಂಗ್ಲೀಷ್‌

ಆಗಸ್ಟ್ 28: ಭೌತಶಾಸ್ತ್ರ, ಮನಃಶಾಸ್ತ್ರ

ಆಗಸ್ಟ್ 29: ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ

ಆಗಸ್ಟ್ 30: ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ

ಆಗಸ್ಟ್ 31: ಹಿಂದಿ

ಸೆಪ್ಟೆಂಬರ್ 01: ಅರ್ಥಶಾಸ್ತ್ರ, ಜೀವಶಾಸ್ತ್ರ

ಸೆಪ್ಟೆಂಬರ್ 02: ತೆಲು

ಗು, ತಮಿಳು, ಉರ್ದು ಇತರ ಭಾಷೆ

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ