Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಕ್ತಿ ಯೋಜನೆ ಚಾಲನೆ ನೀಡಿದ ಸಚಿವ: ತಂಗಡಗಿ

ಸುದ್ದಿಮೂಲವಾರ್ತೆ
ಕೊಪ್ಪಳ,ಜೂ.11: ರಾಜ್ಯ ಸರಕಾರ ಘೋಷಣೆ ಮಾಡಿದಂತೆ ಈಗ ಅನುಷ್ಠಾನಗೊಳಿಸುತ್ತಿದ್ದೇವೆ. ನಮ್ಮ ಮುಖ್ಯಮಂತ್ರಿಗಳು ಸಮರ್ಥ ಮುಖ್ಯಮಂತ್ರಿಗಳಾಗಿದ್ದಾರೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದರು.

ಅವರು ಇಂದು ಕೊಪ್ಪಳ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಗೆ ಚಾಲನೆ ಮಾತನಾಡಿದರು. ಈ ಯೋಜನೆ ಪ್ರತಿಯೊಬ್ಬ ಮಹಿಳೆಯರು ತಲುಪಬೇಕು ಎಂದು ಉದ್ದೇಶದಿಂದ ನಮ್ಮ ಸರಕಾರ ಜಾರಿ ಮಾಡಿದೆ.ಸರಕಾರ ಬರುವ ಮುಂಚೆ ಐದು ಗ್ಯಾರಂಟಿಗಳನ್ನು ನೀಡಿದ್ದೆವು. ನಮ್ಮ ಸಮರ್ಥ ಮುಖ್ಯಮಂತ್ರಿಗಳಿಂದ ಈ ಯೋಜನೆ ಜಾರಿ ಮಾಡಿದ್ದಾರೆ ಎಂದರು.

11 ಕ್ಕೆ ಶಕ್ತಿ ಯೋಜನೆ, ಜುಲೈ 1 ಕ್ಕೆ ಅನ್ನಭಾಗ್ಯ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಗೃಹಲಕ್ಷ್ಮೀ ಯೋಜನೆಗೆ ಜೂನ್ 15 ರಿಂದ ಅರ್ಜಿ ಕರೆಯಲಾಗುತ್ತದೆ. ನಮ್ಮ ಸಿಎಂ ಅವರು 13 ಬಜೆಟ್ ಮಂಡಿಸಿದ್ದಾರೆ.ಪ್ರತಿಯೊಬ್ಬ ಬಡವರ ಜವಾಬ್ದಾರಿ ನಮ್ಮ ಸರಕಾರದ ಮೇಲೆ ಇದೆ. ನುಡಿದಂತೆ ನಡೆಯುತ್ತೇವೆ ಎಂದರು.

ಶಕ್ತಿ ಯೋಜನೆಯಿಂದ ಎಲ್ಲ ಕಡೆಯೂ ಒಳ್ಳೆಯ ವಾತಾವರಣ ನಿರ್ಮಾಣವಾಗುತ್ತದೆ.ಒಂದು ಒಳ್ಳೆಯ ಯೋಜನೆ ಜಾರಿ ಮಾಡುವಾಗ ಸಣ್ಣ ಪುಟ್ಟ ರೂಲ್ಸ್ ಮಾಡುವುದು ಸಹಜ.ನಾವು ನೀಡಿರುವ ಭರವಸೆಯನ್ನು ನೂರಕ್ಕೆ ನೂರರಷ್ಟು ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಶಾಸಕ ಕೆ ರಾಘವೇಂದ್ರ ಹಿಟ್ನಾಳ ಹಿಂದಿನ ಸರಕಾರದಲ್ಲಿ ರಸ್ತೆಗಳಿಗೆ ಅನುದಾನ ನೀಡಿಲ್ಲ. ಈಗ ನಮ್ಮ ಸರಕಾರದಲ್ಲಿ ರಸ್ತೆ ಅನುದಾನಕ್ಕೆ ಹೆಚ್ಚು ಒತ್ತು ಕೊಡಲಾಗುವುದು. ಜಿಲ್ಲೆಯಲ್ಲಿ ಎಲ್ಲಾ ಗ್ರಾಮಗಳಿಗೂ ಬಸ್ ಸೇವೆ ನೀಡಬೇಕೆಂದು ಅಧಿಕಾರಿಗಳಿಗೆ ಹೇಳಿದರು.

ಇದೇ ವೇಳೆ ಸಚಿವರು ಸಾಂಕೇತಿಕವಾಗಿ ಎರಡು ಬಸ್ ಗಳಿಗೆ ಚಾಲನೆ ನೀಡಿದ್ದು ತಾವೇ ಟಿಕೆಟ್ ನೀಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷೆ ಶಿವಲೀಲಾ ಭೂಮಕ್ಕನವರ. ಉಪಾಧ್ಯಕ್ಷೆ ಆಯಿಷಾ ಬಾನು. ಜಿಲ್ಲಾಧಿಕಾರಿ ಸುಂದರೇಶ ಬಾಬು. ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ರತ್ನಂ ಪಾಂಡೆಯಾ. ಕೆಕೆಆರ್ಟಿಸಿ ವಿಭಾಗೀಯ ನಿಯಂತ್ರಕ ಜಿ ವೆಂಕಟೇಶ ಸೇರಿ ಹಲವರು ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ