Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟ: ಮತದಾನದ ಜಾಗೃತಿಗೆ ಬೈಕ್ ರ್ಯಾಲಿ

 

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಏ.5: ಜನರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಿಲ್ಲಾಡಳಿತ, ತಾಲೂಕು ಆಡಳಿತಗಳು ವಿಧವಿಧವಾದ ಪ್ರಯತ್ನ ನಡೆಸುತ್ತಿವೆ. ತಾಲ್ಲೂಕಿನ ಸರಕಾರಿ ಹಾಗೂ ಅನುದಾನಿತ ಶಾಲಾ ಅಧಿಕಾರಿಗಳು ಬೈಕ್ ರ್ಯಾಲಿ ನಡೆಸುವ ಮೂಲಕ ಜನರ ಗಮನ ಸೆಳೆದರು.

ಈ ಅಭಿಯಾನಕ್ಕೆ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮುನಿರಾಜ ಚಾಲನೆ ನೀಡಿದರು. ಚುನಾವಣೆ ಸುಗಮವಾಗಿ ನಡೆಸಲು ಹಾಗೂ ಜನರಲ್ಲಿ ಮತದಾನದ ಅರಿವು ಮೂಡಿಸಲು ಜಿಲ್ಲಾ ಹಾಗೂ ತಾಲ್ಲೂಕು ಸ್ವೀಪ್ ಸಮಿತಿಯು ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ತಿಳಿಸಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರೂ ಮತದಾನ ಮಾಡಬೇಕೆಂಬ ಕಾರಣಕ್ಕಾಗಿ ಚುನಾವಣಾ ಆಯೋಗ ವಿಧವಿಧವಾಗಿ ಜಾಗೃತಿ ಮೂಡಿಸುವ ಕಾರ್ಯ ನಡೆಸುತ್ತಿದೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಅಂಗವಾಗಿ ಮತದಾರರಲ್ಲಿ ಮತದಾನದ ಜಾಗೃತಿ ಮೂಡಿಸಲು ಸರ್ಕಾರಿ ಹಾಗೂ ಅನುದಾನಿತ ರಹಿತ ಮತ್ತು ಅನುದಾನ ರಹಿತ ಶಾಲಾ ಅಧಿಕಾರಿರವರು ಬೈಕ್ ರ್ಯಾಲಿ ನಡೆಸಿದರು.

ತಾಲ್ಲೂಕು ಸ್ವೀಪ್ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಂಡಿದ್ದ ಈ ಬೈಕ್ ರ್ಯಾಲಿಯು ತಾಲ್ಲೂಕು ಆಡಳಿತ ಕಚೇರಿಯಿಂದ ಉಲ್ಲೂರು ಪೇಟೆ, ಸಂತೆ ಬೀದಿ, ಕೋಟೆ ಸರ್ಕಲ್, ಬಸ್ ನಿಲ್ದಾಣ ಮುಖಾಂತರ ಅಶೋಕ ಸರ್ಕಲ್ ನಿಂದ ನಗರದ ಪ್ರಮುಖ ರಸ್ತೆಯ ಮುಖಾಂತರ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದ ಹತ್ತಿರ ಮುಕ್ತಾಯಗೊಂಡಿತು.

ಈ ಸಂದರ್ಭದಲ್ಲಿ ನಗರಸಭೆ ಕಮಿಷನರ್ ಶ್ರೀನಾಥ್, ಬಿಇಓ, ಅನುದಾನ ರಹಿತ ಹಾಗೂ ಅನುದಾನಿತ ಸಹಿತ ಶಾಲೆಯ ಪದಾಧಿಕಾರಿಗಳು, ಎಲ್ಲಾ ಶಿಕ್ಷಣ ಇಲಾಖೆ ಸಿಬ್ಬಂದಿ, ದೈಹಿಕ ಶಿಕ್ಷಕರು, ಪೋಲಿಸ್ ಇಲಾಖೆಯವರು ಸೇರಿದಂತೆ ಹಲವರು ಭಾರಿಯಾಗಿದ್ದರು.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ