Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟ: ಸುಗ್ಗಲಮ್ಮ ದೇವಿ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವ

ಸುದ್ದಿಮೂಲ ವಾರ್ತೆ

ಶಿಡ್ಲಘಟ್ಟ, ಮಾ.31: ತಾಲ್ಲೂಕಿನ ಕಸಬಾ ಹೋಬಳಿಯ ವೈ.ಹುಣಸೇನಹಳ್ಳಿ ಗ್ರಾಮ ಪಂಚಾಯಿತಿಗೆ ಬರುವ ಚಿಕ್ಕದಾಸೇನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶ್ರೀ ಸುಗ್ಗಲಮ್ಮದೇವಿ ದೇವಾಲಯ ಪ್ರತಿಷ್ಠಾಪನಾ ಮಹೋತ್ಸವ ಹಾಗೂ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವವನ್ನು ಹಮ್ಮಿಕೊಳ್ಳಲಾಗಿತ್ತು.

ಸುಗ್ಗಲಮ್ಮ ದೇವಾಲಯ ಪ್ರತಿಷ್ಠಾಪನಾ ಮಹೋತ್ಸವದಲ್ಲಿ ಕುಂಭಮೇಳ, ವಿಮಾನ ಗೋಪುರ, ಕಳಸಾ ಗೋಪುರ, ಹೋಮ ಹವನಗಳನ್ನು ಹಮ್ಮಿಕೊಳ್ಳಲಾಗಿತ್ತು.

ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ ಬಿ.ಎನ್ ರವಿಕುಮಾರ್ ರವರು ಚಿಕ್ಕದಾಸೇನ ಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಶ್ರೀ ಶ್ರೀ ಶ್ರೀ ಸುಗ್ಗಲಮ್ಮ ದೇವಾಲಯದ ಪ್ರತಿಷ್ಠಾಪನಾ ಮಹೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು.

ಈ ಸಂದರ್ಭದಲ್ಲಿ ಮಾತನಾಡಿದ ನರಸಿಂಹ ಗೌಡರ ನಮ್ಮಗ್ರಾಮದಲ್ಲಿ 31 3.2023 ರಂದು ಪ್ರತಿಷ್ಠಾಪನ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಈ ನಮ್ಮ ಗ್ರಾಮ ದೇವತೆ ಚಿಕ್ಕದಾಸೇನಹಳ್ಳಿ, ಬಸನಾಫಾರ್ತಿ ಮತ್ತು ಮಾರಪ್ಪನಹಳ್ಳಿ ಈ ಮೂರು ಹಳ್ಳಿಗಳಿಗೆ ಗ್ರಾಮ ದೇವತೆಯಾಗಿರುತ್ತದೆ. ದೇವಾಲಯವು ಸುಮಾರು 300 ವರ್ಷಗಳ ಹಳೆಯ ದೇವಸ್ಥಾನವಾಗಿದ್ದು ಆಗಿನ ಕಾಲದಲ್ಲಿ ಮಣ್ಣಿನ ಕಟ್ಟಡದಲ್ಲಿ ನಿರ್ಮಿಸಲಾಗಿದ ದೇವಾಲಯವಾಗಿತ್ತು ಈಗ ನೂತನವಾಗಿ ನಮ್ಮ ಊರಿನ ಗ್ರಾಮಸ್ಥರು ದಾನಿಗಳು ಎಲ್ಲರ ಸಹಾ ಒಟ್ಟಿಗೆ ಸೇರಿ ಈಗ ನೂತನ ವಿನ್ಯಾಸದಲ್ಲಿ ಕಲ್ಲಿನ ಕಟ್ಟಡದಲ್ಲಿ ಶ್ರೀ ಶ್ರೀ ಶ್ರೀ ಸುಗಲ್ಲಮ್ಮ ದೇವಾಲಯ ನಿರ್ಮಿಸಲಾಗಿದೆ ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಚಿಕ್ಕದಾಸೇನಹಳ್ಳಿ ಗ್ರಾಮಸ್ಥರು ಗ್ರಾಮದ ಯುವಕರು ಮುಖಂಡರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಭಕ್ತಾದಿಗಳು ಹಾಜರಿದ್ದರು.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ