Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಡಿಜಿಟಲೀಕರಣದಿಂದ ಓದುವ ಹವ್ಯಾಸಕ್ಕೆ ಧಕ್ಕೆ : ಶಿವರಾಜ್ ತಂಗಡಗಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ. 11 : ಆಧುನಿಕ ಯುಗದಲ್ಲಿ ಡಿಜಿಟಲೀಕರಣ ಹೆಚ್ಚಾಗಿದ್ದು, ಜನರು ಪುಸ್ತಕಗಳನ್ನು ಓದುವುದು ಕಡಿಮೆಯಾಗುತ್ತಾ ಬಂದಿದೆ. ಹೀಗಾಗಿ, ಪುಸ್ತಕಗಳನ್ನು ಓದುವ ಅಭ್ಯಾಸ ರೂಡಿಸಿಕೊಳ್ಳುವುದು ಒಳಿತು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದರು.

ನಯನ ಸಭಾಂಗಣದಲ್ಲಿ ಶಾಲಾ-ಕಾಲೇಜುಗಳಿಗೆ ಉಚಿತ ಪುಸ್ತಕಗಳ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಚಿವರು ಪುಸ್ತಕವನ್ನು ಓದಿದರೆ ತೃಪ್ತಿಯ ಭಾವವಿರುತ್ತದೆ. ಮಕ್ಕಳಿಗೆ ಓದುವ ಹವ್ಯಾಸವನ್ನು ಬೆಳೆಸವುದರ ಜೊತೆಗೆ ಪೂರಕ ಅವಕಾಶವನ್ನು ಕಲ್ಪಿಸಿಕೊಡಬೇಕು ಎಂದರು.

ಇಂದಿನ ದಿನಗಳಲ್ಲಿ ಸಾಹಿತ್ಯಗಳನ್ನು ಓದುವ ಅಭಿರುಚಿ ಕಡಿಮೆಯಾಗುತ್ತಿದೆ. ಸಾಹಿತ್ಯವನ್ನು ಓದುವ ಹವ್ಯಾಸವನ್ನು ಎಲ್ಲರೂ ರೂಢಿಸಿಕೊಳ್ಳಬೇಕು. ಸಾಹಿತ್ಯ, ಕಲಾವಿದರು, ಕನ್ನಡ ಸಂಸ್ಕಂತಿ ನೋಡಿದಂತೆಲ್ಲ ಅದರ ರುಚಿ ಹೆಚ್ಚಾಗುತ್ತದೆ. ಅದರ ರುಚಿಯನ್ನು ಅನುಭವಿಸಿ ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ಸಾಹಿತ್ಯವನ್ನು ಎಲ್ಲರಿಗೂ ಮುಟ್ಟಿಸುವ ಪ್ರಯತ್ನವನ್ನು ಇಲಾಖೆಯು ಮಾಡುತ್ತದೆ ಎಂದರು.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ. ಚಂದ್ರಶೇಖರ ಕಂಬಾರ ಮಾತನಾಡಿ, ಶಾಲಾ ಕಾಲೇಜುಗಳಿಗೆ ಉಚಿತ ಪುಸ್ತಕಗಳ ವಿತರಣೆಯ ಮೂಲಕ ವಿದ್ಯಾರ್ಥಿಗಳು ಪಠ್ಯೇತರ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳುತ್ತಾರೆ. ಇದರ ವ್ಯಾಪ್ತಿಯು ಹಳ್ಳಿ ಹಳ್ಳಿಗೂ ತಲುಪುವಂತಾಗಬೇಕು. ಈ ನಿಟ್ಟಿನಿಲ್ಲಿ ಪ್ರಾಧಿಕಾರವು ಮಾಡುತ್ತಿದೆ ಎಂದರು.

ಲೇಖಕಿಯರ ಸಂಘದ ಅಧ್ಯಕ್ಷರಾದ ಡಾ. ಹೆಚ್. ಎಲ್ ಪುಪ್ಪ ಮಾತನಾಡಿ, ಖಾಸಗಿ ಸ್ವಾಮ್ಯದಲ್ಲಿ ಪ್ರಕಟವಾಗುವ ಪುಸ್ತಕಗಳು ಅತ್ಯಾಧುನಿಕ ತಾಂತ್ರಿಕತೆಯನ್ನು ಉಪಯೋಗಿಸಿಕೊಂಡರೆ ಅತ್ಯಂತ ಆಕರ್ಷಕವಾಗಿರುತ್ತದೆ. ಸರ್ಕಾರಿ ಸ್ವಾಮ್ಯದಲ್ಲಿ ಪ್ರಕಟವಾಗುವ ಪುಸ್ತಕಗಳು ಸ್ಫರ್ಧೆಯನ್ನು ಎದುರಿಸುತ್ತಿದೆ. ಪ್ರಕಟವಾಗುವ ಪುಸ್ತಕಗಳನ್ನು ಜನರಿಗೆ ತಲುಪಿಸುವ ಬಗ್ಗೆ ಚಿಂತನೆ ನಾವು ಮಾಡಬೇಕಾಗಿದೆ ಎಂದರು.

ಕನ್ನಡ ಸಂಸ್ಕಂತಿ ಇಲಾಖೆಯ ನಿರ್ದೇಶಕರಾದ ಡಾ. ಕೆ. ಧರಣಿದೇವಿ ಮಾಲಗತ್ತಿ, ಪ್ರಾಧಿಕಾರದ ಆಡಳಿತಾಧಿಕಾರಿ ಕಿರಣ್ ಸಿಂಗ್ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ