Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

54 ಲಕ್ಷ ಮಕ್ಕಳಿಗೆ ಕ್ಷೀರಭಾಗ್ಯದಿಂದ ನೆರವು: ಸಿದ್ದರಾಮಯ್ಯ

ಸುದ್ದಿಮೂಲ ವಾರ್ತೆ

ಬೆಂಗಳೂರು,ಆ,6: ನಾಡಿನ ಮಕ್ಕಳ ಮಾನಸಿಕ ಮತ್ತು ದೈಹಿಕ ಸದೃಢತೆಗಾಗಿ ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೆ ತಂದು 54 ಲಕ್ಷಕ್ಕೂ ಅಧಿಕ ಮಕ್ಕಳು ಪೌಷ್ಠಿಕ ಆಹಾರವನ್ನು ಪ್ರತಿ ದಿನ ಸೇವಿಸುವಂತಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅಪಾರ ಮೆಚ್ಚುಗೆ ಗಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಮಧುಗಿರಿಯಲ್ಲಿ ಆಯೋಜಿಸಿದ್ದ ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳು‌ ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢರಾಗಿದ್ದರೆ ಮಾತ್ರ ಆರೋಗ್ಯವಂತರಾಗಿ ಉತ್ತಮ ಶಿಕ್ಷಣ ಪಡೆಯಲು ಸಾಧ್ಯ. ಎಲ್ಲಾ ಜಾತಿಯ ಎಲ್ಲಾ ಧರ್ಮದ ಬಡವರು ಮತ್ತು ಮಧ್ಯಮ ವರ್ಗದವರ ಮಕ್ಕಳ ಹಿತವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಕ್ಷೀರ ಭಾಗ್ಯ ಯೋಜನೆಯನ್ನು ಜಾರಿಗೊಳಿಸಿದೆವು. ಹತ್ತು ವರ್ಷಗಳಿಂದ ಪ್ರತೀ ದಿನ ಲಕ್ಷಾಂತರ ಮಕ್ಕಳಿಗೆ ಪೌಷ್ಠಿಕ ಆಹಾರ ಸಿಗುವಂತೆ ಮಾಡಿದ್ದೇವೆ. ಹೀಗಾಗಿ ನಮ್ಮ ಹೆಮ್ಮೆಯ ಈ ಯೋಜನೆ ಅಂತರಾಷ್ಟ್ರೀಯ ಮಟ್ಟದಲ್ಲಿ ಮೆಚ್ಚುಗೆ ಗಳಿಸಿದೆ ಎಂದು ವಿವರಿಸಿದರು.

ಬಡವರು, ಮಧ್ಯಮ ವರ್ಗದವರ ಬದುಕಿಗೆ ಅನುಕೂಲ ಆಗುವ ಕಾರ್ಯಕ್ರಮವನ್ನು ನಾವು ರೂಪಿಸಿದರೆ ಬಿಜೆಪಿ ಯವರು ಅಡ್ಡಗಾಲು ಹಾಕಿ ಕಾರ್ಯಕ್ರಮ‌ ವಿಫಲಗೊಳಿಸಲು ಯತ್ನಿಸಿದರು. ಸ್ವತಃ ಪ್ರಧಾನಿ ಮೋದಿಯವರು ಬಡವರ ಪರ ಕಾರ್ಯಕ್ರಮ ನೀಡಿದ್ದರಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಅಪ್ಪಟ ಸುಳ್ಳು ಹೇಳಿದರು ಎಂದು ಟೀಕಿಸಿದರು.

ಅಂಬಾನಿ, ಅದಾನಿಗೆ ಕೊಟ್ಟರೆ ದೇಶದ ಆರ್ಥಿಕತೆಗೆ ನಷ್ಟ ಆಗುವುದಿಲ್ಲವೇ ಪ್ರಧಾನಿ ಮೋದಿಯವರೇ ಎಂದು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿಗಳು ಬಡವರು ಮಧ್ಯಮ ವರ್ಗದವರು ಸಮಾಧಾನದಿಂದ ಎರಡು ಹೊತ್ತು ಊಟ ಮಾಡಿದರೆ ವಿರೋಧಿಸಬೇಡಿ ಎಂದರು.

ಮಧುಗಿರಿಯನ್ನು ಜಿಲ್ಲೆ ಮಾಡುವ ಕುರಿತು ಸಚಿವ ಕೆ.ಎನ್.ರಾಜಣ್ಣ ಅವರ ಬೇಡಿಕೆ ಮಂಡಿಸಿದ್ದಾರೆ. ನಾನು ಇದನ್ನು ಖಂಡಿತ ಪರಿಶೀಲಿಸುತ್ತೇನೆ ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಅವರು ಮಾತನಾಡಿ, ಮಧುಗಿರಿ ತಾಲ್ಲೂಕನ್ನು ಜಿಲ್ಲೆಯನ್ನಾಗಿ ನೋಡಬೇಕೆಂಬುದು ಕೆ.ಎನ್.ರಾಜಣ್ಣನವರ ಹಾಗೂ ಇಲ್ಲಿನ ಜನರ ಬಹಳ ವರ್ಷದ ಕನಸಾಗಿದ್ದು, ಮುಖ್ಯಮಂತ್ರಿಗಳು ಮಧುಗಿರಿ ತಾಲ್ಲೂಕನ್ನು ಜಿಲ್ಲೆಯನ್ನಾಗಿ ಘೋಷಿಸುವ ಮೂಲಕ ಇಲ್ಲಿನ ಜನರ ಬಹುದಿನದ ಕನಸನ್ನು ನನಸು ಮಾಡಬೇಕೆಂದು ಮನವಿ ಮಾಡಿದರು.

ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕ್ಷೀರಭಾಗ್ಯ ಯೋಜನೆಯ ಜಾರಿಯಿಂದಾಗಿ 27ಲಕ್ಷ ಹಾಲು ಉತ್ಪಾದಕರು ಹಾಗೂ 14 ಹಾಲು ಒಕ್ಕೂಟಗಳಿಗೆ ಲಾಭವಾಗಿದೆ. ಕ್ಷೀರಭಾಗ್ಯ ಯೋಜನೆಯ ಮೂಲಕ ಕೆಎಂಎಫ್‌ಗೆ ಶಕ್ತಿ ತುಂಬುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದ ಅವರು, ಹಾಲಿನ ಪುಡಿಯ ದರವನ್ನು ಹೆಚ್ಚಳ ಮಾಡುವಂತೆ ಈ ಸಂದರ್ಭ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಯ 10 ಮಕ್ಕಳಿಗೆ ಸಾಂಕೇತಿಕವಾಗಿ ಕ್ಷೀರ ಭಾಗ್ಯ ಯೋಜನೆಯ ದಶಮಾನೋತ್ಸವದ ಸಂಭ್ರಮಾಚರಣೆ ಅಂಗವಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಾಲನ್ನು ವಿತರಿಸಿದರು ಮತ್ತು ಮಕ್ಕಳು ಸಂತಸದಿಂದ ಹಾಲನ್ನು ಸೇವಿಸಿದರು.

ಕ್ಷೀರಭಾಗ್ಯ ಕಾರ್ಯಕ್ರಮವನ್ನು ಅಂದು ಯಶಸ್ವಿಯಾಗಿ ಅನುಷ್ಟಾನಗೊಳಿಸಿದ ಹಿರಿಯ ನಿವೃತ್ತ ಮುಖ್ಯಕಾರ್ಯದರ್ಶಿ ಎಸ್.ವಿ.ರಂಗನಾಥ್ ಹಾಗೂ ಕರ್ನಾಟಕ ಹಾಲು ಮಂಡಳ ನಿವೃತ್ತ ವ್ಯವಸ್ಥಾಪಕ ನಿರ್ದೇಶಕರಾದ ಎ.ಎಸ್ ಪ್ರೇಮನಾಥ್ ಅವರುಗಳಿಗೆ ಈ ಸಂದರ್ಭ ಮುಖ್ಯಮಂತ್ರಿಗಳು ಸನ್ಮಾನಿಸಿದರು.

ಸಹಕಾರ ಸಚಿವ ಕೆ.ಎನ್.ರಾಜಣ್ಣ, ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಶಾಸಕರುಗಳಾದ ರಂಗನಾಥ್, ಷಡಕ್ಷರಿ ಸೇರಿಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ