Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಿದ್ದರಾಮಯ್ಯ ನಾಯಕತ್ವ ಬದಲಾವಣೆ ಕಷ್ಟ ಸಾಧ್ಯ: ಕೃಷ್ಣ ಬೈರೇಗೌಡ

ಸುದ್ದಿಮೂಲ ವಾರ್ತೆ ಬೆಂಗಳೂರು, ಜ.05:
ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆ ಕಷ್ಟಸಾಧ್ಯ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅಭಿಪ್ರಾಾಯಪಟ್ಟಿಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗಿರುವ ಮಾಹಿತಿ ಪ್ರಕಾರ, ಸಿದ್ದರಾಮಯ್ಯ ಅವರ ಪರ್ಯಾಯ ವ್ಯವಸ್ಥೆೆ ಕಷ್ಟಸಾಧ್ಯ. ಹಾಗೆಂದು ಬೇರೆಯವರಿಗೆ ಈ ಸಾಮರ್ಥ್ಯ ಇಲ್ಲ ಎಂದು ನಾನು ಹೇಳುವುದಿಲ್ಲ. ಅವರ ನಾಯಕತ್ವವೇ ಬೇರೆ, ಬೇರೆಯವರ ಸಾಮರ್ಥ್ಯವೇ ಬೇರೆ ಎಂದು ವಿಶ್ಲೇಷಿಸಿದರು.
ಉಪಮುಖ್ಯಮಂತ್ರಿಿ ಡಿ.ಕೆ. ಶಿವಕುಮಾರ್ ಅವರು ಪಕ್ಷ ಸಂಘಟನೆಯಲ್ಲಿ ಮುಂದಿದ್ದಾರೆ. ಒಂದು ಕಡೆ ಸಿದ್ದರಾಮಯ್ಯ ಅವರು ಸರ್ಕಾರವನ್ನು ಯಶಸ್ವಿಿಯಾಗಿ ಮುನ್ನಡೆಸುತ್ತಿಿದ್ದಾರೆ. ರಾಜಕಾರಣದಲ್ಲಿ ಇಂತಹ ಕಾಂಬಿನೇಷನ್ ತುಂಬಾ ಅಪರೂಪ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಅವರಂತಹ ನಾಯಕತ್ವ ಇನ್ನೆೆಲ್ಲೂ ಇಲ್ಲ. ನಮಗೆಲ್ಲಾ ಅವರಿಂದ ಗೌರವ ಹೆಚ್ಚಿಿದೆ. ನಾಯಕತ್ವ ಬದಲಾವಣೆ ಕುರಿತಂತೆ ನಾನು ಹೆಚ್ಚು ಮಾತನಾಡುವುದಿಲ್ಲ. ಅದರ ಬಗ್ಗೆೆ ಹೇಳಲು ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ಮಾಜಿ ಮುಖ್ಯಮಂತ್ರಿಿಗಳಾದ ದೇವರಾಜ ಅರಸು, ರಾಮಕೃಷ್ಣ ಹೆಗಡೆಯವರಂತಹ ದಿಗ್ಗಜರ ಸಾಲಿನಲ್ಲಿ ಸಿದ್ದರಾಮಯ್ಯ ನಿಲ್ಲುತ್ತಾಾರೆ. ಹೀಗಾಗಿ ನಾಯಕತ್ವದ ಬದಲಾವಣೆ ಕಷ್ಟಸಾಧ್ಯ ಎಂದು ಪುನರುಚ್ಚರಿಸಿದರು.
ಮುಖ್ಯಮಂತ್ರಿಿ ಸಿದ್ದರಾಮಯ್ಯ ಅವರು ರಾಜ್ಯದಲ್ಲೇ ಅತಿ ಹೆಚ್ಚು ದಿನಗಳ ಕಾಲ ಆಡಳಿತ ನಡೆಸಿದ ದಾಖಲೆಗೆ ಪಾತ್ರರಾಗಿರುವುದಕ್ಕೆೆ ಪ್ರತಿಕ್ರಿಿಯೆ ನೀಡಿದ ಅವರು, ಕರ್ನಾಟಕದ ಇತಿಹಾಸದಲ್ಲಿ ಇದೊಂದು ದಾಖಲೆಯೇ ಸರಿ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
22 ವರ್ಷಗಳಿಂದ ನಾನು ಅವರ ಕೆಲಸ ನೋಡಿದ್ದೇನೆ. ಯಾವಾಗಲೂ ಅವರು ತಾಯಿ ಹೃದಯದಿಂದ ಕೆಲಸ ನಿರ್ವಹಿಸುತ್ತಾಾರೆ. ಅವರ ನಡವಳಿಕೆ ನಮಗೆಲ್ಲರಿಗೂ ಸ್ಫೂರ್ತಿಯಾಗಿದೆ ಎಂದು ಅವರು ಪ್ರಶಂಸಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ