Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೀಸಲಾತಿ ಕುರಿತ ಗೊಂದಲ ನಿವಾರಣೆಗೆ ಪ್ರತ್ಯೇಕ ಸಭೆ: ಸಿದ್ದರಾಮಯ್ಯ ಭರವಸೆ

ಬೆಂಗಳೂರು, ಜುಲೈ 05 : ಮೀಸಲಾತಿ ವಿಚಾರದಲ್ಲಿ ಬಿಜೆಪಿ ಸರ್ಕಾರ ಸೃಷ್ಟಿಸಿರುವ ಗೊಂದಲಗಳ ನಿವಾರಣೆಗೆ ಬಜೆಟ್ ಅಧಿವೇಶನ ಮುಗಿದ ನಂತರ ಅಡ್ವೊಕೇಟ್ ಜನರಲ್, ಕಾನೂನು ಇಲಾಖೆ ಹಾಗೂ ಸಮುದಾಯದ ಸಚಿವರೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸುತ್ತೇನೆ. ನಾನು ಸಾಮಾಜಿಕ ನ್ಯಾಯದ ಪರವಾಗಿದ್ದು ವಾಲ್ಮೀಕಿ ಸಮಾಜದ ಹಿತ ಕಾಪಾಡಲು ಬದ್ದವಾಗಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ರಾಜನಹಳ್ಳಿಯ ವಾಲ್ಮೀಕಿ ಪೀಠದ ಪೀಠಾಧ್ಯಕ್ಷ ಶ್ರೀ ಪ್ರಸನ್ನಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ಸಚಿವರು ಹಾಗೂ ಶಾಸಕರ ನಿಯೋಗ ತಮ್ಮನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ಹಿಂದಿನ ಸರ್ಕಾರ ಮೀಸಲಾತಿ ಕುರಿತು ಆತುರಾತುರವಾಗಿ ತೀರ್ಮಾನ ಮಾಡಿದ್ದು, ಗೊಂದಲ ಸೃಷ್ಟಿಸಿದೆ. ಮುಸ್ಲಿಮರಿಗೆ ಶೇ 4 ರಷ್ಟಿದ್ದ ಮೀಸಲಾತಿ ರದ್ದು ಮಾಡಿ ಒಕ್ಕಲಿಗರು ಹಾಗೂ ಲಿಂಗಾಯತರಿಗೆ ತಲಾ ಶೇ 2 ರಷ್ಟು ಮೀಸಲಾತಿ ನೀಡಿದೆ. 2 ಸಿ, 2 ಡಿ ಸಹ ಮಾಡಿದ್ದಾರೆ. ಇದರ ಬಗ್ಗೆ ಗೊಂದಲಗಳಿವೆ. ಸಂವಿಧಾನಾತ್ಮಕ ವಾಗಿ ಇಲ್ಲದಿರುವ ಕಾರಣ ಸುದೀರ್ಘ ಚರ್ಚೆಯ ಅಗತ್ಯವಿದೆ. ಒಟ್ಟಾರೆ ಮೀಸಲಾತಿಯ ಪರಿಮಿತಿಯನ್ನು ಸಡಿಲಗೊಳಿಸದಿದ್ದರೆ ಪರಿಹಾರ ಸಿಗುವುದಿಲ್ಲ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯ ಪಟ್ಟರು.

ನಕಲಿ ಜಾತಿ ಪ್ರಮಾಣ ಪತ್ರಕ್ಕೆ ಕಡಿವಾಣ

ಪರಿಶಿಷ್ಟ ಜಾತಿ ಹಾಗೂ ಪಂಗಡದ ಪ್ರಮಾಣಪತ್ರ ವಿತರಣೆಯಾಗುತ್ತಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳು ಸಿ.ಆರ್.ಇ ಸೆಲ್ ನಲ್ಲಿ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ರಾಯಚೂರು, ಬಿಜಾಪುರ, ಭಾಗದಲ್ಲಿ ಕೋಲಿ, ಕಬ್ಬಲಿಗ, ತಳವಾರರ ಸಮುದಾಯಗಳನ್ನು ಎಸ್.ಟಿ ಗೆ ಸೇರಿಸಬೇಕು ಎನ್ನುವ ಬೇಡಿಕೆ ಇದೆ. ಕೋಲಿ ಸಮಾಜದವರು ತಳವಾರರು ಎಂದೇ ಹೇಳುತ್ತಾರೆ. ಈ ಗೊಂದಲಗಳ ಬಗ್ಗೆಯೂ ತೀರ್ಮಾನವಾಗಬೇಕು. ನಾಯಕ ಸಮುದಾಯದ ತಳವಾಲರರನ್ನು ಮಾತ್ರ ಎಸ್.ಟಿ ಗೆ ಸೇರಿಸಲಾಗಿದ್ದು ಇವೆಲ್ಲಾ ಅತ್ಯಂತ ಸೂಕ್ಷ್ಮ ವಿಚಾರವಾಗಿರುವುದರಿಂದ ಸಂವಿಧಾನ ಮತ್ತು ಕಾನೂನು ತಜ್ಞರ ಜತೆ ಚರ್ಚೆ ಮಾಡಲಾಗುವುದು ಎಂದು ಭರವಸೆಯಿತ್ತರು.

ಪರಿಶಿಷ್ಟ ಪಂಗಡಕ್ಕೆ ಸ್ಥಾಪನೆಯಾಗಿರುವ ಪ್ರತ್ಯೇಕ ಸಚಿವಾಲಯಕ್ಕೆ ಕಾರ್ಯದರ್ಶಿ ನೇಮಕಾತಿ ಮಾಡಲಾಗುವುದು. ಬುಡಕಟ್ಟು ಸಲಹಾ ಮಂಡಳಿ ಸ್ಥಾಪನೆ ಬಗ್ಗೆ ವರದಿ ನೀಡಿದಲ್ಲಿ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮೀಸಲಾತಿಯನ್ನು ಸಂವಿಧಾನದ 9 ನೇ ಪರಿಚ್ಛೇಧಕ್ಕೆ ಸೇರಿಸಲು ನಮ್ಮ ಸರ್ಕಾರ ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುತ್ತದೆ. ಅದಕ್ಕೆ ಮೊದಲು ಬಿಜೆಪಿ ಸರ್ಕಾರ ಸೃಷ್ಟಿಸಿದ ಎಲ್ಲಾ ಗೊಂದಲಗಳನ್ನು ನಿವಾರಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದರು.

ಸಹಕಾರ ಸಚಿವ ರಾಜಣ್ಣ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ವಾಲ್ಮೀಕಿ ಸಮುದಾಯದ 14 ಶಾಸಕರು, ಮುಖಂಡರು ಹಾಗೂ ಜನಪ್ರತಿನಿಧಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ