Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

5 ಸಾವಿರ ತಾಂಡಾಗಳು ಕಂದಾಯ ಗ್ರಾಮಗಳಾಗಿ ಪರಿವರ್ತನೆ: ಸಿದ್ದರಾಮಯ್ಯ ಭರವಸೆ

ಸುದ್ದಿಮೂಲ ವಾರ್ತೆ

ಬೆಂಗಳೂರು ಅ.4: ಸೇವಾಲಾಲ್ ಮಠಕ್ಕೆ ನೆರವು ನೀಡಿದ್ದು ನಮ್ಮ ಸರ್ಕಾರ. ಸೇವಾಲಾಲ್ ಜಯಂತಿ ಆಚರಿಸಿದ್ದು ನಮ್ಮ ಸರ್ಕಾರ. ತಾಂಡ್ಯಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಮ್ಮ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಸಂಘದ ಸುವರ್ಣ ಮಹೋತ್ಸವದ ಅಂಗವಾಗಿ ನಿರ್ಮಿಸಿದ್ದ ಬಂಜಾರ ಭವನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬಂಜಾರ ಸಮುದಾಯದ ಏಳಿಗೆಗೆ ಅಭಿವೃದ್ದಿಗೆ ಕಾಂಗ್ರೆಸ್ ಸರ್ಕಾರ ನೀಡಿದ ಕೊಡುಗೆಗಳ ಪಟ್ಟಿ ನೀಡಿದ ಮುಖ್ಯಮಂತ್ರಿಗಳು, ಸೇವಾಲಾಲ್ ಮಠಕ್ಕೆ ನೆರವು ನೀಡಿದ್ದು ನಮ್ಮ ಸರ್ಕಾರ. ಸೇವಾಲಾಲ್ ಜಯಂತಿ ಆಚರಿಸಿದ್ದು ನಮ್ಮ ಸರ್ಕಾರ. ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಿದ್ದು ನಮ್ಮ ಸರ್ಕಾರ. ಇನ್ನೂ 5 ಸಾವಿರ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಾವಿರಾರು ವರ್ಷಗಳಿಂದ ನಾವೆಲ್ಲಾ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದೆವು. ಬ್ರಿಟಿಷರು ಬಂದ ಮೇಲೆ ಶಿಕ್ಷಣದ ಅವಕಾಶಗಳು ತೆರೆದುಕೊಂಡವು. ಡಾ.ಬಿ.ಆರ್.ಅಂಬೇಡ್ಕರ್ ಅವರ ಕಾರಣದಿಂದ ವಂಚಿತರೆಲ್ಲರಿಗೂ ಶಿಕ್ಷಣ ಮೂಲಭೂತ ಹಕ್ಕು ದೊರೆಯಿತು. ಈ ಕಾರಣಕ್ಕೇ ನಾವೆಲ್ಲರೂ ಶಿಕ್ಷಿತರಾಗಬೇಕು. ಶಿಕ್ಷಣ ನಮ್ಮನ್ನು ಸ್ವಾಭಿಮಾನಿಯನ್ನಾಗಿಸುತ್ತದೆ. ಸ್ವಾಭಿಮಾನಿಯಾದರೆ ಶೋಷಣೆಯಿಂದ ತಪ್ಪಿಸಿಕೊಳ್ಳಬಹುದು ಎಂದರು.

ಶಿಕ್ಷಣ ನಮ್ಮನ್ನು ಸ್ವಾಭಿಯನ್ನಾಗಿಸಿ ಶೋಷಣೆಯಿಂದ ಮುಕ್ತಗೊಳಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಾವು ತಾಂಡ್ಯಾ ಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಲು ಮುನ್ನುಡಿ ಬರೆದೆವು. ಆದರೆ ಬಿಜೆಪಿಯವರು ನಮ್ಮ ಕೆಲಸವನ್ನು ಅವರು ಮಾಡಿದ್ದು ಎಂದು ಹೇಳಿಕೊಳ್ಳುತ್ತಿದ್ದಾರೆ. ಇದು ಹೇಗಿದೆ ಅಂದರೆ, "ಅಟ್ಟಿಕ್ಕಿದವರಿಗಿಂತ ಬೊಟ್ಟಿಕ್ಕಿದವರು ಮೇಲು" ಎನ್ನುವ ಗಾಧೆ ಮಾತಿನಂತಾಗಿದೆ ಬಿಜೆಪಿ ಸ್ಥಿತಿ ಎಂದು ವ್ಯಂಗ್ಯವಾಡಿದರು.

ಬಂಜಾರ ಸಮುದಾಯದ ಅಭಿವೃದ್ಧಿಗೆ ಬಜೆಟ್ ನಲ್ಲಿ 275 ಕೋಟಿ ನೀಡಲಾಗಿತ್ತು. ಸೇವಾಲಾಲ್ ವಸತಿ ಶಾಲೆ ಸೇರಿದಂತೆ ಇನ್ನಿತರೆ ಬೇಡಿಕೆಗಳಿಗೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹಣ ನೀಡುತ್ತೇನೆ ಎನ್ನುವ ಭರವಸೆ ನೀಡಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ವಿಧಾನಸಭೆ ಉಪ ಸಭಾಪತಿಗಳಾದ ರುದ್ರಪ್ಪ ಮಾನಪ್ಪ ಲಮಾಣಿ ಅವರು ಸೇವಾಲಾಲ್ ಪ್ರತಿಮೆ ಅನಾವರಣಗೊಳಿಸಿದರು. ಬಂಜಾರ ಕರಕುಷಲ ವಸ್ತು ಪ್ರದರ್ಶನವನ್ನು ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅವರು ಉದ್ಘಾಟಿಸಿದರು.

ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್, ಶಾಸಕರಾದ ನೇಮಿರಾಜನಾಯ್ಕ್, ಅವಿನಾಶ್ ಜಾದವ್, ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಸಿದ್ಯಾನಾಯ್ಕ್, ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Author
Suddi Moola News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ