Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುಟ್ಟರಂಗಶೆಟ್ಟಿಗೆ ಸಚಿವ ಸಂಪುಟದಲ್ಲಿಸ್ಥಾನ ನೀಡಲು ಸಿದ್ದೇಶ್ ಊಳೂರು ಒತ್ತಾಯ

ಸುದ್ದಿಮೂಲ ವಾರ್ತೆ

ಬಳ್ಳಾರಿ,ಮೇ17: ರಾಜ್ಯದ 2023ರ ವಿಧಾನಸಭಾ ಚುನಾಣೆಯಲ್ಲಿ ಚಾಮರಾಜನಗರದಿಂದ ಉಪ್ಪಾರ ಸಮಾಜದಿಂದ ಏಕೈಕ ಶಾಸಕರಾಗಿ ನಾಲ್ಕನೇ ಬಾರಿಗೆ ಸಿ ಪುಟ್ಟರಂಗಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ಕಳೆದ ಸಮ್ಮಿಶ್ರ ಸರ್ಕಾರದಲ್ಲಿ ಕೆಲದಿನಗಳಷ್ಟೆ ಮಂತ್ರಿಯಾಗಿ ವಿರೋಧಿಗಳ ಷಡ್ಯಂತ್ರದ ಪದಚ್ಯುತಿಗೊಂಡಿದ್ದರು. ಕಾರಣ ಈ ಭಾರಿ ಬಿಜೆಪಿ ಪ್ರಭಾವಿ ಸಚಿವ ವಿ ಸೋಮಣ್ಣನವರನ್ನು ಸೋಲಿಸಿ ಭಾರಿ ಅಂತರದಿಂದ ಆಯ್ಕೆಯಾಗಿದ್ದಾರೆ. ಅತ್ಯಂತ ಹಿಂದುಳಿದ ಸಮಾಜವಾದ ಉಪ್ಪಾರ ಸಮಾಜಕ್ಕೆ ಸೇರಿರುವ ಪುಟ್ಟರಂಗ ಶೆಟ್ಟಿಯವರಿಗೆ ಈ ಭಾರಿಯ ಸಚಿವ ಸಂಪುಟದಲ್ಲಿ ಸಾಮಾಜಿಕ ನ್ಯಾಯಾದಡಿಯಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಬೇಕೆಂದು ಸಮಸ್ತ ಕರ್ನಾಟಕ ಉಪ್ಪಾರ ಜನಾಂಗದ ಪರವಾಗಿ ಕೆ.ಪಿ.ಸಿ.ಸಿ ಅಧ್ಯಕ್ಷರಿಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಮತ್ತು ವಿಧಾನಸಭಾ ಚುನಾವಣೆಯಲ್ಲಿ ರಾಜ್ಯ ಉಪ್ಪಾರು ಜನಾಂಗದವರು ಕಾಂಗ್ರೇಸ್ ಪಕ್ಷಕ್ಕೆ ಬೆಂಬಲವನ್ನು ಸೂಚಿಸಿರುತ್ತಾರೆ. ಕಾರಣ ಶೆಟ್ಟಿಯುವರಿಗೆ ತಮ್ಮ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾ (ರಿ) ರಾಜ್ಯ ಉಪಾಧ್ಯಕ್ಷರು ಸಿದ್ದೇಶ್ ಊಳೂರು ಮತ್ತು ಬಳ್ಳಾರಿ ಜಿಲ್ಲಾ ಉಪ್ಪಾರ ಸಮಾಜದ ಮುಂಖಡರುಗಳಾದ ಕೂರಿಗನೂರು ಗಾದಿಲಿಂಗಪ್ಪ, ಊಳೂರು ವೆಂಕೋಬ, ಹಾಗೂ ಇತರರು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯನವರನವರಲ್ಲಿ ಒತ್ತಾಯಸಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ