Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದಿನಿಂದ ಬೆಂಗಳೂರು ಕರಗ: ಅದ್ದೂರಿ ತಯಾರಿ

ಸುದ್ದಿಮೂಲ ವಾರ್ತೆ

ಬೆಂಗಳೂರು, ಮಾ 29: ಇಂದಿನಿಂದ ಏಪ್ರಿಲ್ 06ರ ವರೆಗೆ ಬೆಂಗಳೂರು ಕರಗಕ್ಕೆ ಅದ್ದೂರಿ ತಯಾರಿ ನಡೆದಿದೆ. ಇಂದು ರಾತ್ರಿ 10 ಗಂಟೆಗೆ ರಥೋತ್ಸವ ಮತ್ತು ಮುಂಜಾನೆ 3 ಗಂಟೆಗೆ ಧ್ವಜರೋಹಣ ನಡೆಸುವುದರ ಮೂಲಕ ಕರಗಕ್ಕೆ ಚಾಲನೆ ನೀಡಲಾಗುವುದು.

ಇಂದಿನಿಂದ ಏಪ್ರಿಲ್ 06ರ ವೆರೆಗೆ 11 ದಿನಗಳ ಕಾಲ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ರಾತ್ರಿ 12.30 ಕ್ಕೆ ದ್ರೌಪದಮ್ಮನ ಕರಗ ಕುಂಬಾರಪೇಟೆ, ನಗರ್ತಪೇಟೆ, ಗೊಲ್ಲರಪೇಟೆಗಳಲ್ಲಿ ಸಂಚರಿಸಲಿದೆ.

ಸಂಪ್ರದಾಯದಂತೆ ಮಸ್ತಾನ್ ಸಾಬ್ ದರ್ಗಾಕ್ಕೆ ಕೂಡ ಕರಗ ಭೇಟಿ ನೀಡಲಿದೆ. ಏಪ್ರಿಲ್ 7 ರ ಬೆಳಗ್ಗೆ ಧರ್ಮರಾಯಸ್ವಾಮಿ ದೇವಾಲಯ ತಲುಪಲಿದೆ. ಏಪ್ರಿಲ್ 8 ರ ಸಂಜೆ 4 ಗಂಟೆಗೆ ವಸಂತೋತ್ಸವ ಹಾಗೂ ರಾತ್ರಿ 12ಕ್ಕೆ ಧ್ವಜರೋಹಣ ಮೂಲಕ ನೆರವೇರಲಿದೆ.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸತೀಶ್ ಮಾತನಾಡಿ, ಚುನಾವಣೆಯ ಹಿನ್ನೆಲೆ ವೇದಿಕೆ ಕಾರ್ಯಕ್ರಮವಿರುವುದಿಲ್ಲ, ಅಹ್ವಾನಿತ ಗಣ್ಯರಿರು ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಯಾವುದೇ ರೀತಿ ವೇದಿಕೆ ಕಾರ್ಯಕ್ರಮಗಳು ಇರುವುದಿಲ್ಲ . ಸಾಮಾನ್ಯ ಜನರಂತೆ ದೇವಲಾಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯಬಹುದು ಎಂದರು.

ಪ್ರತಿ ವರ್ಷವು ಚೈತ್ರ ಮಾಸದಂದು ನೆರವೇರುವ ಈ ಹಬ್ಬ ಕರಗವು ಹೂವಿನಿಂದ ಅಲಂಕರಿಸಿದ ಮಣ್ಣಿನ ಮಡಕೆ ಆಗಿದೆ. ಇದನ್ನು ಮಹಿಳೆಯಂತೆ ಅಲಂಕರಿಸುವ ತಿಗಳರ ಪುರುಷರು ತಲೆ ಮೇಲೆ ಹೊತ್ತುಕೊಳ್ಳುವುದು ಇದರ ಪದ್ದತಿಯಾಗಿದೆ. ಇದನ್ನು ತಮಿಳುನಾಡಿನಲ್ಲಿ ತಿಗಳರ ಹಬ್ಬ ಎಂದು ಆಚರಿಸಲ್ಪಡುತ್ತದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ