Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚುನಾವಣ ನಾಮಪತ್ರ ಸಲ್ಲಿಕೆ: ಡಾ.ಸುಧಾಕರ್

ಸುದ್ದಿಮೂಲ ವಾರ್ತೆ


ಬೆಂಗಳೂರು,ಏ.13: ಮಾನ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಚಿಕ್ಕಬಳ್ಳಾಪುರದ ತಾಲ್ಲೂಕು ಕಚೇರಿಯಲ್ಲಿ ಇಂದು ಮಧ್ಯಾಹ್ನ ನಾಮಪತ್ರ ಸಲ್ಲಿಸಿದರು.


ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮರು ಆಯ್ಕೆ ಬಯಸಿ ನಾನು ಇಂದು ಕಟುಂಬದವರೊಂದಿಗೆ ಚುನಾವಣಾ ಅಧಿಕಾರಿಗಳ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾಗಿ ಸಚಿವ ಡಾ. ಸುಧಾಕರ್ ಅವರು ತಿಳಿಸಿದ್ದಾರೆ.


ಚಿಕ್ಕಬಳ್ಳಾಪುರ ಕ್ಷೇತ್ರದ ಅಭಿವೃದ್ಧಿಗೆ ಬಿಜೆಪಿಯೇ ಭರವಸೆಯಾಗಿದ್ದು, ಈ ಬಾರಿಯ ಚುನಾವಣೆಯಲ್ಲಿ ನಿಶ್ಚಿತವಾಗಿ ಕಮಲ ಅರಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.



ಚಿಕ್ಕಬಳ್ಳಾಪುರ ಕ್ಷೇತ್ರದ ಜನತೆಯ ಸೇವೆ ಮಾಡುವ ಉದ್ದೇಶದಿಂದ ಚುನಾವಣಾ ರಾಜಕೀಯಕ್ಕೆ ಧುಮುಕಿದ ನನ್ನನ್ನು ಮೂರು ಬಾರಿ ಶಾಸಕನನ್ನಾಗಿ ಆಯ್ಕೆ ಮಾಡಿದ್ದಲ್ಲದೆ, ರಾಜ್ಯ ರಾಜಕಾರಣದ ವರೆಗೆ ಬೆಳೆಸಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಜನರ ಪ್ರೀತಿ, ವಿಶ್ವಾಸಗಳಿಗೆ ನಾನು ಎಂದೆಂದೂ ಚಿರಋಣಿ ಎಂದು ತಿಳಿಸಿದ್ದಾರೆ.



ಈಗ ನಾಲ್ಕನೇ ಬಾರಿ ಜನರ ಆಶೀರ್ವಾದ ಪಡೆಯಲು ನಾನು ಬಯಸಿದ್ದು, ಚಿಕ್ಕಬಳ್ಳಾಪುರ ಕ್ಷೇತ್ರವನ್ನು ರಾಜ್ಯದ ಮಾದರಿ ಕ್ಷೇತ್ರವನ್ನಾಗಿಸುವ ಸಂಕಲ್ಪವನ್ನು ಹೊಂದಿದ್ದೇನೆ. ನವ ಚಿಕ್ಕಬಳ್ಳಾಪುರ ಕಟ್ಟುವ ನನ್ನ ಸಂಕಲ್ಪಕ್ಕೆ ಕ್ಷೇತ್ರದ ಜನರು ಕೈಜೋಡಿಸುತ್ತಾರೆ ಹಾಗೂ ನನ್ನನ್ನು ಮತ್ತೊಮ್ಮೆ ಆಶೀರ್ವದಿಸುತ್ತಾರೆ ಎಂಬ ಅಚಲ ವಿಶ್ವಾಸ ನನ್ನದು ಎಂದು ತಿಳಿಸಿದ್ದಾರೆ.

Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ