Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆ ಹಾನಿ ತಡೆಯಲು ಮುಂಜಾಗ್ರತ ಕ್ರಮ ಕೈಗೊಳ್ಳಿ: ವೈ.ಎಸ್.ಪಾಟೀಲ್

ಸುದ್ದಿಮೂಲ ವಾರ್ತೆ

ತುಮಕೂರು, ಮೇ 29: ಮುಂಗಾರು ಮಳೆಯಿಂದ ಸಂಭವಿಸಬಹುದಾದ ಪ್ರಾಕೃತಿಕ ವಿಕೋಪ ಪರಿಸ್ಥಿತಿ ಎದುರಿಸಲು ಎಲ್ಲಾ ಇಲಾಖೆಗಳು ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳುವ ಮೂಲಕ ಯಾವುದೇ ಜೀವಹಾನಿಯಾಗದ ರೀತಿಯಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸಲು ಸನ್ನದ್ದರಾಗಿರಬೇಕು ಎಂದು ಜಿಲ್ಲಾಧಿಕಾರಿಗಳಾದ ವೈ.ಎಸ್.ಪಾಟೀಲ್ ಸೂಚನೆ ನೀಡಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಮುಂಗಾರು-2023 ಪೂರ್ವಸಿದ್ದತೆ’ ಕುರಿತ ವೀಡಿಯೋ ಕಾನ್ಫರೆನ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಷ್ಟೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಪ್ರಸಕ್ತ ಮುಂಗಾರು ಮಳೆ ಹಾಗೂ ಚಂಡಮಾರುತ ಪರಿಣಾಮಗಳನ್ನು ತಗ್ಗಿಸಲು ಕ್ಯೆಗೊಳ್ಳಬಹುದಾದ ಕ್ರಮಗಳ ಕುರಿತು ನೀಡಿರುವ ಸಲಹೆ ಸೂಚನೆಗಳ ರೀತ್ಯ ಮುನ್ನೆಚ್ಚರಿಕೆ ವಹಿಸಬೇಕು, ಈ ವರ್ಷ ಮುಂಗಾರು ಮುನ್ಸೂಚನೆಯ ಪ್ರಕಾರ ವಾಡಿಕೆ ಮಳೆ ಸಾಧ್ಯತೆ

ಇದ್ದು, ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುತ್ತದೆ, ಆದುದರಿಂದ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಬೇಕು. ನಿರ್ಲಕ್ಷ ವಹಿಸುವಂತಹ ಅಧಿಕಾರಿಗಳ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಈ ಹಿಂದಿನ ವರ್ಷಗಳಲ್ಲಿ ಉಂಟಾದ ಘಟನೆಗಳಿಗೆ ಅನುಗುಣವಾಗಿ ಮುಂಜಾಗ್ರತಾ ಕ್ರಮಗಳನ್ನು

ಕೈಗೊಳ್ಳಬೇಕು, ಏನೇ ತೊಂದರೆಯಾದಲ್ಲಿ ಕೂಡಲೇ ಘಟನಾ ಸ್ಥಳಕ್ಕೆ ಹೋಗಬೇಕು. ಜೀವ, ಆಸ್ತಿ ಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು. ರಸ್ತೆ, ಸೇತುವೆಗಳು ಹಾನಿಯಾದಲ್ಲಿ, ಕೂಡಲೆ ರಸ್ತೆ ಸಂಪರ್ಕ ಪುನರ್‌ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು. ಅಗ್ನಿ ಶಾಮಕದಳ ತುರ್ತು ಪರಿಸ್ಥಿತಿಯಲ್ಲಿ ಕಾರ್ಯ ನಿರ್ವಹಿಸಲು ಅಗತ್ಯ ಸುರಕ್ಷಾ ಉಪಕರಣಗಳೊಂದಿಗೆ ಸನ್ನದ್ದರಾಗಿರಬೇಕು ಹಾಗೂ ವಿದ್ಯುತ್ ವ್ಯತ್ಯಯ, ವಿದ್ಯುತ್ ತಂತಿಗಳು ಜೋತು ಬಿದ್ದಿರುವುದು ಕಂಡು ಬಂದಲ್ಲಿ ಕೂಡಲೇ ಸರಿಪಡಿಸಿ ವಿದ್ಯುತ್ ತಂತಿಯಿಂದ ಯಾವುದೇ

ಜೀವ ಹಾನಿಯಾಗದಂತೆ ಎಚ್ಚರವಹಿಸಬೇಕು ಎಂದು ಸೂಚನೆ ನೀಡಿದರು.

ವರುಣ ಮಿತ್ರ ಉಚಿತ ಸಹಾಯವಾಣಿ:

ವಾತಾವರಣದಲ್ಲಿನ ವೈಪರೀತ್ಯಗಳು ರೈತರ ಕೃಷಿಗೆ ಹಾನಿ ಉಂಟುಮಾಡಬಾರದು ಎಂಬ ಉದ್ದೇಶದಿಂದ ವರುಣ ಮಿತ್ರ ಸಹಾಯವಾಣಿಯನ್ನು ರೂಪಿಸಲಾಗಿದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮಾನಿಟರಿಂಗ್ ಸೆಲ್ ನ ಹವಾಮಾನ ಮೇಲ್ವಿಚಾರಣಾ ಕೇಂದ್ರಗಳ ವಿಸ್ತಾರವಾದ ಜಾಲ, ರೈತರು ಹೋಬಳಿ ಮಟ್ಟದಲ್ಲಿ ದತ್ತಾಂಶವನ್ನು ಸಂಗ್ರಹಿಸಿ ಈ ಮಾಹಿತಿಯನ್ನು ಉಚಿತವಾಗಿ ನೀಡುತ್ತದೆ, 24x7 ಅಥವಾ ದಿನದ ಇಪ್ಪತ್ನಾಲ್ಕೂ ಗಂಟೆಯೂ ಈ ಸಹಾಯವಾಣಿಯು ಲಭ್ಯವಿದೆ.

ರೈತರು ದಿನದ ಯಾವುದೇ ಸಮಯದಲ್ಲಿ ಬೇಕಾದರೂ ವರುಣ ಮಿತ್ರ ಸಹಾಯವಾಣಿ: 9243345433 ಸಂಪರ್ಕಸಿ ಮಳೆ. ಹವಾಮಾನ, ಗಾಳಿಯ ವೇಗ ಎಷ್ಟಿದೆ? ಗಾಳಿ ಯಾವ ದಿಕ್ಕಿಗೆ ಬೀಸುತ್ತಿದೆ? ಆಯಾ

ಪ್ರದೇಶದ ಉಷ್ಣಾಂಶ ಎಷ್ಟಿದೆ? ಎಂಬ ಮಾಹಿತಿಗಳನ್ನು ರೈತರು ಪಡೆದುಕೊಳ್ಳಬಹುದಾಗಿದೆ. ಈ ಮೂಲಕ ಮಳೆಯಿಂದ ತಮ್ಮ ಕೃಷಿ, ಬೆಳೆಗಳನ್ನು ರಕ್ಷಿಸಿಕೊಳ್ಳಬಹುದಾಗಿದೆ.

ಸಿಡಿಲು ಆ್ಯಪ್:

ರಾಜ್ಯದಲ್ಲಿ ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ನೆರವಾಗುವ ಉದ್ದೇಶದಿಂದ ಸಿಡಿಲು ಆ್ಯಪ್‌ ಪರಿಚಯಿಸಲಾಗಿದ್ದು, ಈ ಆ್ಯಪ್ ಬಳಕೆದಾರ ಇರುವ ಜಾಗದಿಂದ ಎಷ್ಟು ಕಿ.ಮೀ. ಅಥವಾ ಮೀಟರ್

ದೂರದಲ್ಲಿ ಸಿಡಿಲು, ಗುಡುಗು ಕಂಡು ಬರುತ್ತಿದೆ ಎಂಬ ಅಪಾಯಗಳನ್ನು ಹಲವು ಬಣ್ಣಗಳಲ್ಲಿ ತಿಳಿಸುತ್ತದೆ. ಈ ಮೂನ್ಸೂಚನೆ ಅರಿತು ಪ್ರಕೃತಿ ವಿಕೋಪಗಳಿಂದ ಆಗುವ ನಷ್ಟವನ್ನು ತಡೆಯಲು ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗಿದೆ. ಸಿಡಿಲು ಬಡಿಯುವ ಸಾಧ್ಯತೆಯನ್ನು ಶೇ. 95ರಷ್ಟು ನಿಖರವಾಗಿ ಈ ಆ್ಯಪ್ ತಿಳಿಸುತ್ತದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಡಿ.ಡಿ.ಎಲ್.ಆರ್ ಸುಜಯ್ ಕುಮಾರ್, ಕೃಷಿ ಇಲಾಖೆಯ ಜಂಟಿ ನಿದೇಶಕರಾದ ರವಿ ಕೆ.ಹೆಚ್, ತುಮಕೂರು ತಾಲೂಕು ತಹಸೀಲ್ದಾರ್ ಸಿದ್ದೇಶ್, ಚಿಕ್ಕನಾಯಕನಹಳ್ಳಿ ತಾಲೂಕು ತಹಸೀಲ್ದಾರ್ ಅರ್ಚನಾ ತಹಸೀಲ್ದಾರ್ ಮೋಹನ್, ಸೇರಿದಂತೆ ಜಿಲ್ಲೆಯ ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್‌ಗಳು, ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ