Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟಿ.ಇ.ಟಿ ಪೂರ್ವ ಸಿದ್ಧತಾ ತರಬೇತಿ ಕಾರ್ಯಾಗಾರ

ಸುದ್ದಿಮೂಲವಾರ್ತೆ

ಕೊಪ್ಪಳ ಆ 02: ನಗರದ ಶ್ರೀ ಗವಿಸಿದ್ಧೇಶ್ವರ ಶಿಕ್ಷಣ ಮಹಾವಿದ್ಯಾಲಯ ಹಾಗೂ ಮಾರ್ಗದರ್ಶಿ ಸ್ಟಡಿ ಸರ್ಕಲ್ ಇವರ ಸಹಯೋಗದಲ್ಲಿ ಎರಡು ದಿನಗಳ ಕಾಲ ಟಿ ಇ ಟಿ ತರಬೇತಿ ಕಾರ್ಯಾಗಾರದ ಉದ್ಘಾಟನಾ ಸಮಾರಂಭವು ಬುಧವಾರದಂದು ಶ್ರೀ ಗವಿಸಿದ್ಧೇಶ್ವರ ಶಿಕ್ಷಣ ಮಹಾವಿದ್ಯಾಲಯದ ಸಭಾಭವನದಲ್ಲಿ ಜರುಗಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೇರವೆರಿಸಿದ ಗ ವಿ ವ ಟ್ರಸ್ಟ ಕಾರ್ಯದರ್ಶಿ ಡಾ. ಆರ್.ಮರೇಗೌಡ ಮಾತನಾಡಿ ಯಾವ ವ್ಯಕ್ತಿಗಳು ಪರಿಪೂರ್ಣರಲ್ಲ. ನಿರಂತರ ಅಧ್ಯಯನ ಸತತ ಪ್ರಯತ್ನ ಮಾಡಿ ಜ್ಞಾನ ಗಳಿಸುವುದರ ಮೂಲಕ ಜೀವನದಲ್ಲಿ ಪರಿಪೂರ್ಣತೆ ಗಳಿಸಲು ಸಾಧ್ಯ. ಪ್ರಶಿಕ್ಷಣಾರ್ಥಿಗಳಲ್ಲಿ ಉತ್ತಮ ಮನೋಭಾವನೆಯನ್ನು ಬೆಳೆಸುವಲ್ಲಿ ಇಂತಹ ಪೂರ್ವ ಸಿದ್ಧತಾ ಕಾರ್ಯಗಾರಗಳು ಅತ್ಯಂತ ಮಹತ್ವಪೂರ್ಣ ವಹಿಸಲಿವೆ ಎಲ್ಲಾ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಸಕ್ರೀಯವಾಗಿ ಭಾಗವಹಿಸಿ ಎಂದು ಹೇಳಿದರು.

ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಗ ವಿ ವ ಟ್ರಸ್ಟ ಆಡಳಿತಾಧಿಕಾರಿ ಪ್ರೊ. ಎಸ್.ಎ.ಪಾಟೀಲ್ ಮಾತನಾಡಿ ಶಿಕ್ಷಣ ಮಹಾವಿದ್ಯಾಲಯವು ಉತ್ತಮ ಕಾರ್ಯಚಟುವಟಿಕೆ ಹಮ್ಮಿಕೊಂಡಿದ್ದು ಇದರ ಸದುಪಯೋಗ ಪಡೆದು ಹೆಚ್ಚು ವಿದ್ಯಾರ್ಥಿಗಳು ಟಿಇಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಎಂದು ಹೇಳಿದರು.

ಇರಕಲ್ಲಗಡದ ಸ.ಪ್ರ.ದ.ಕಾ. ಸಹಾಯಕ ಪ್ರಾಧ್ಯಾಪಕರಾದ ಶಂಕ್ರಯ್ಯ ಅಬ್ಬಿಗೇರಿಮಠ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಸಂಸ್ಥೆಯ ಪ್ರಾಚಾರ್ಯರಾದ ಡಾ ಎಸ್.ಬಿ.ಕಂಬಾರ ಅವರು ಒಂದು ತಿಂಗಳ ಕಾಲ ನಡೆಯುವ ಕಾರ್ಯಾಗಾರದ ಸದುದ್ಧೇಶದ ಕುರಿತು ಮಾತನಾಡಿದರು.

ಸಮಾರಂಭದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಗಂಗಾಧರ ಸೊಪ್ಪಿಮಠ ಆನಂದರಾವ್ ದೇಸಾಯಿ, ಶೈಲಜಾ ಅರಳಲೇಮಠ, ನೀಲಾಂಭಿಕೆ ಹುದ್ಧಾರ,ಶ್ರೀಧರ ಪೂಜಾರಿ, ಕಾಂಚನಗಂಗಾ,ಶಿವಕುಮಾರ,ಜಂಭಯ್ಯ,ಅನಿತಾ,ದೇವೆAದ್ರ,ದೇವರಾಜ ಸೇರಿದಂತೆ ಪ್ರಥಮ ಹಾಗೂ ದ್ವಿತಿಯ ವರ್ಷದ ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು.ದೇವಿಕಾ ನಿರೂಪಿಸಿದರು.ಪೂಜಮ್ಮ ಪ್ರಾರ್ಥಿಸಿದರು.ಅಂದೇಶ ಸ್ವಾಗತಿಸಿದರು, ಪರಿಚಯಿಸಿದರು.ಶರಣಪ್ಪ ವಂದಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ