Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾಜದ ಬದ್ಧತೆ ಮೈಗೂಡಿಸಿಕೊಳ್ಳಲು ಸಂವಿಧಾನ ಓದಬೇಕು

ಸುದ್ದಿಮೂಲ ವಾರ್ತೆ

ಮೈಸೂರು, ಜು.30: ವ್ಯಕ್ತಿಗೆ ಅಗತ್ಯವಾಗಿ ಬೇಕಾದ ಸಾಮಾಜಿಕ ಬದ್ಧತೆಯನ್ನು ಮೈಗೂಡಿಸಿಕೊಳ್ಳಲು ಸಂವಿಧಾನ ಓದಬೇಕು ಎಂದು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಹೇಳಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ದಲಿತ ಸಂಘರ್ಷ ಸಮಿತಿ (ದಸಂಸ) ಆಶ್ರಯದಲ್ಲಿ ನಡೆದ ಸಂವಿಧಾನ ಮತ್ತು ಪ್ರಜಾಪ್ರಭುತ್ವ’ ಕುರಿತು ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂವಿಧಾನ ಯಾವುದೇ ಭಾಷೆಯಲ್ಲಿ ಓದಿದರೂ ಸುಲಭವಾಗಿ ಅರ್ಥವಾಗುವಂತದ್ದಲ್ಲ. ಭಾರತವನ್ನು ಅರಿಯಬೇಕಾದರೆ, ಸಂವಿಧಾನ ಓದಲೇಬೇಕು. ಎಲ್ಲರೂ ಸಮುದಾಯ, ಬದುಕು, ಬವಣೆಗಳ ಬಗ್ಗೆ ತಿಳಿಯಬೇಕು ಎಂದು ಎಂದರು.

ಶಾಸಕ ದರ್ಶನ್ ಧ್ರುವ ನಾರಾಯಣ್ ಮಾತನಾಡಿ, ನಾನು ಕಿರಿಯ ವಯಸ್ಸಿನಲ್ಲಿ ಶಾಸಕ ಆಗಿದ್ದೀನಿ ಅಂದ್ರೆ, ಅದಕ್ಕೆ ಸಂವಿಧಾನ ಕಾರಣ. ಸಂವಿಧಾನದಿಂದಲೇ ನಮ್ಮೆಲ್ಲರ ಅಸ್ತಿತ್ವ .ನನ್ನ ತಂದೆ (ಧ್ರುವ ನಾರಾಯಣ್) ಸಂತೆಮರಳ್ಳಿ ಕ್ಷೇತ್ರದಲ್ಲಿ ಒಂದು ಮತದಿಂದ ಗೆದ್ದು ಸಂಸದರಾದರು. ಅದು ಕೂಡ ಸಂವಿಧಾನ ಕೊಟ್ಟಿದ್ದು. ಸಂವಿಧಾನ ನಮಗೆ ಬದುಕಲು, ಸಮಾಜದಲ್ಲಿ ಉನ್ನತವಾದ ಸ್ಥಾನಗಳಿಸಲು ಅವಕಾಶ ನೀಡಿದೆ ಎಂದರು.

ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಮಾತನಾಡಿ, “ಮಣಿಪುರದಲ್ಲಿ ನಡೆಯುತ್ತಿರುವ ದೌರ್ಜನ್ಯ ರಾಜಕೀಯ ಪ್ರೇರಿತವಾಗಿ ಸೃಷ್ಟಿಯಾಗಿರುವುದು. ಸುಮಾರು 90 ದಿನಗಳೇ ಕಳೆಯುತ್ತಾ ಬಂದಿವೆ. ಆದರೆ, ಪ್ರಧಾನಿ ಇಂದಿಗೂ ತುಟಿ ಬಿಚ್ಚಿಲ್ಲ. ಹೆಣ್ಣಿನ ಬೆತ್ತಲೆ ಮೆರವಣಿಗೆ ನಾಗರೀಕ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಇಂತಹ ಕ್ರೌರ್ಯ ನಿಜಕ್ಕೂ ಹೇಯ ಕೃತ್ಯ ಎಂದು ಖಂಡಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ