Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ಪಕ್ಷವನ್ನು ಹಿರಣ್ಯಕಶಿಪುಗೆ ಹೋಲಿಸಿದ ಮಾಜಿ ಮುಖ್ಯಮಂತ್ರಿ

ಬೆಂಗಳೂರು: ಘಟಬಂಧನ್ ಸಭೆಗೆ ಆಗಮಿಸಿರುವ ಹೊರರಾಜ್ಯದ ರಾಜಕೀಯ ನಾಯಕರ ಆತಿಥ್ಯಕ್ಕೆ ಐಎಎಸ್ ನಿಯೋಜನೆ ಮಾಡಿರುವ ರಾಜ್ಯ ಸರ್ಕಾರ ಹಾಗೂ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಟೀಕಾಪ್ರಹಾರ ನಡೆಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಐಎಎಸ್ ಜೀತ ಪದ್ಧತಿಯನ್ನು ಜಾರಿಗೆ ತಂದು ಕರ್ನಾಟಕದ ಹೆಮ್ಮೆ, ಪರಂಪರೆಗೆ ಘಟಶ್ರಾದ್ಧ ಮಾಡಿದೆ ಎಂದು ಕಿಡಿಕಾರಿದೆ.

ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದ್ದಾರೆ.

ಯಾವುದೇ ಒಂದು ರಾಜ್ಯದ ಅಭಿವೃದ್ಧಿ, ಆಡಳಿತ, ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳು ಕೇವಲ ಅಧಿಕಾರಿಗಳಷ್ಟೇ ಅಲ್ಲ; ಆಯಾ ರಾಜ್ಯಗಳ ಕ್ಷಮತೆ, ದಕ್ಷತೆಯ ಪ್ರತೀಕ. ಅಂಥವರನ್ನು ಇನ್ನೊಬ್ಬರ ಆಜ್ಞಾಪಾಲಕರನ್ನಾಗಿ ಮಾಡಿ, ಬಾಗಿಲು ಕಾಯುವ ಕೆಲಸ ಹಚ್ಚಿದ್ದು ಆಡಳಿತ ಪಕ್ಷದ ಅಹಂಕಾರದ ಪರಮಾವಧಿ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ನಿಶ್ಚಿತವಾಗಿಯೂ ಐಎಎಸ್ ಸೇವಾ ನೀತಿ ಸಂಹಿತೆಯ ಉಲ್ಲಂಘನೆ. ಇದು ತಮ್ಮ ಸ್ವಾಭಿಮಾನ, ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಗೊತ್ತಿದ್ದರೂ ಅಧಿಕಾರಿಗಳು ಈ ಕೆಲಸಕ್ಕೆ ಒಪ್ಪಿದ್ದು ನನಗೆ ಅತೀವ ಅಚ್ಚರಿ, ಆಘಾತ ಉಂಟು ಮಾಡಿದೆ. ಇಂಥ ವಿವಾದಾಸ್ಪದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು ಜನತೆಗೆ ಉತ್ತರ ಕೊಡಲೇಬೇಕಿದೆ ಎಂದು ಅವರು ಒತ್ತಾಯ ಮಾಡಿದ್ದಾರೆ.

ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ 'ಐಎಎಸ್ ಜೀತ ಪದ್ಧತಿ'ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ 'ರಾಜಕೀಯ, ಆಡಳಿತ ವಸಾಹತುಶಾಹಿ'ಯನ್ನು ದೇಶಕ್ಕೆ ಪರಿಚಯ ಮಾಡಿದೆ. ಹೌದು; ಕಾಂಗ್ರೆಸ್ ಯಾವಾಗಲೂ ಕುಖ್ಯಾತಿಗಳಿಗೇ ಕುಖ್ಯಾತಿ. ಅಂಥ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ ಎಂದು ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ಕುಟುಕಿದ್ದಾರೆ.

135 ಸೀಟು ಕೊಟ್ಟ ತಪ್ಪಿಗೆ ಕನ್ನಡಿಗರಿಗೆ ವಿಪರೀತ ದರ್ಪ ತೋರಿದೆ ಕಾಂಗ್ರೆಸ್. ಸತ್ಯಯುಗದಲ್ಲಿ ಹಿರಣ್ಯಕಶಿಪು ಅಷ್ಟದಿಕ್ಪಾಲಕರನ್ನು ಸೆರೆಹಿಡಿದು ಮೆಟ್ಟಿಲು ಮಾಡಿಕೊಂಡ ಪಾಪಕ್ಕೆ ಸರ್ವನಾಶವಾದ. ಕಾಂಗ್ರೆಸ್ ಕೂಡ 30 ಐಎಎಸ್ ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ಮಾಡುವ ಮೂಲಕ ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ ಎಂದು ಅವರು ಹೇಳಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ