Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದ್ವೇಷದಿಂದ ಶಾಂತಿಯೆಡೆ ಪಯಣ ಆರಂಭ – ರಕ್ಷಾ ರಾಮಯ್ಯ

 

ಕಾಕಿನಾಡ,ಜೂ.19: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೈಗೊಂಡ ಭಾರತ್ ಜೋಡೋ ಯಾತ್ರೆ ದೇಶದಲ್ಲಿ ಗಮನಾರ್ಹ ಬದಲಾವಣೆಗೆ ಕಾರಣವಾಗಿದ್ದು, ಇದರಿಂದ ರಾಜಕೀಯ ವ್ಯವಸ್ಥೆಯಲ್ಲಿ ದ್ವೇಷದಿಂದ ಶಾಂತಿಯೆಡೆ ಪಯಣ ಆರಂಭವಾಗಿದೆ ಎಂದು ಆಂಧ್ರಪ್ರದೇಶ ಯುವ ಕಾಂಗ್ರೆಸ್ ಉಸ್ತುವಾರಿ ಮತ್ತು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ಆಂಧ್ರ ಪ್ರದೇಶದ ಕಾಕಿನಾಡದಲ್ಲಿಂದು ನೂರಾರು ಮಹಿಳೆಯರಿಗೆ ಸೀರೆ ವಿತರಿಸಿ ಅವರು ಮಾತನಾಡಿದರು.

ಭಾರತ್ ಜೋಡೋ ಯಾತ್ರೆ ನಂತರ ರಾಹುಲ್ ಗಾಂಧಿ ಅವರ ವರ್ಚಸ್ಸು, ನಾಯಕತ್ವದ ಬಗ್ಗೆ ಎಲ್ಲೆಡೆ ಉತ್ತಮ ಅಭಿಪ್ರಾಯ ಕೇಳಿ ಬರುತ್ತಿದ್ದು, ಅವರು ಎಲ್ಲರ ನಾಯಕರಾಗಿ ಹೊರ ಹೊಮ್ಮುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಹೊಸ ಉತ್ಸಾಹ ತುಂಬಲು "ಭಾರತ್ ಜೋಡೋ ಯಾತ್ರೆ' ಸಹಕಾರಿಯಾಗಿದ್ದು, ಕಾಂಗ್ರೆಸ್ ಮತ್ತೆ ತನ್ನ ಗತ ವೈಭವವನ್ನು ಮರಳಿ ಪಡೆಯಲು ಇದು ವೇದಿಕೆಯಾಗಿದೆ. ತಮ್ಮ ಯಾತ್ರೆಯುದ್ಧಕ್ಕೂ ಸಮಾಜದ ವಿವಿಧ ವರ್ಗಗಳ ಜನರನ್ನು ಭೇಟಿ ಮಾಡಿ ಅವರ ಮನದ ಮಾತು ಆಲಿಸಿದ್ದಾರೆ. ರಾಹುಲ್ ಗಾಂಧಿ ಅವರು ಕಣ್ಣಾರೆ ನೋಡಿದ ಹಲವಾರು ಸಮಸ್ಯೆಗಳಿಗೆ ಮುಂಬರುವ ದಿನಗಳಲ್ಲಿ ಸೂಕ್ತ ಪರಿಹಾರ ದೊರೆಯುವ ವಿಶ್ವಾಸವಿದೆ ಎಂದರು.

ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ಕಳೆದ ವರ್ಷದ ಸೆಪ್ಟೆಂಬರ್ 7 ರಿಂದ ಜನವರಿ 30 ರ ವರೆಗೆ ನಡೆದಿತ್ತು. 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳ ಮೂಲಕ ಯಾತ್ರೆ ಸಾಗಿದ್ದು, ಇದು ರಾಜಕೀಯ ಇತಿಹಾಸದಲ್ಲಿ ಹೊಸ ಮೈಲಿಗಲ್ಲಾಗಿದೆ ಎಂದು ಹೇಳಿದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ