Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿದ್ಯಾರ್ಥಿಗಳ ಉತ್ತಮ ಭವಿಷ್ಯಕ್ಕೆ ಶಿಕ್ಷಕರ ಪಾತ್ರ ಅನನ್ಯ 

ಸುದ್ದಿಮೂಲ ವಾರ್ತೆ

ಹೊಸಕೋಟೆ,ಸೆ.2: ಯಶಸ್ಸು ಮತ್ತು ವೈಫಲ್ಯಕ್ಕೆ ಶಿಕ್ಷಕರೇ ಜವಾಬ್ದಾರರೇ ಹೊರತು ಬೇರೆಯವರಲ್ಲ. ನಮ್ಮ ಸಾಮರ್ಥ್ಯ ಸಾಬೀತುಪಡಿಸುವ ಅಥವಾ ನಮ್ಮ ಬೆಳವಣಿಗೆಯನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಶಕ್ತಿ ಶಿಕ್ಷಕ ವೃತ್ತಿಯಿಂದ ಮಾತ್ರ ಸಾಧ್ಯ ಎಂದು ಜಿಪಂನ ಮಾಜಿ ಸದಸ್ಯ ಕಲ್ಲಪ್ಪ ತಿಳಿಸಿದರು.

ಹೊಸಕೋಟೆ ತಾಲೂಕು ನಂದಗುಡಿ ಹೋಬಳಿಯ ಶಿವನಾಪುರ ಗ್ರಾಪಂ. ವ್ಯಾಪ್ತಿಯ ಕೊರಡಹಳ್ಳಿ ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭ ಕುರಿತು ಮಾತನಾಡಿದರು.

ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಕರ್ತವ್ಯ ನಿಷ್ಠೆ ಹಾಗೂ ಸಮಯ ಪರಿಪಾಲನೆ ಮುಖ್ಯ.ವಿದ್ಯಾರ್ಥಿಗಳಿಗೆ ತಮ್ಮ ಜ್ಞಾನದ ಗಂಗೆ ಹರಿಸುವ ಮೂಲಕ ವಿದ್ಯಾರ್ಥಿಗಳನ್ನು ಪ್ರಜ್ಞಾವಂತರಾಗಿ ಬೆಳೆಸುವಲ್ಲಿ ಶಿಕ್ಷಕರು ಸಾಕಷ್ಟು ಶ್ರಮಿಸುತ್ತಾರೆ. ಇತರೆ ವೃತ್ತಿಗಳಿಗಿಂತ ಶಿಕ್ಷಕರ ವೃತ್ತಿ ಸಮಾಜದಲ್ಲಿ ಅತ್ಯಂತ ಪವಿತ್ರವಾದುದು. ಅದನ್ನು ಅರಿತು ಕಾರ್ಯನಿರ್ವಹಿಸಬೇಕಿದೆ.

ಮುಖ್ಯ ಶಿಕ್ಷಕ ಸಿದ್ದಪ್ಪ ಸದಾ ಹಸನ್ಮುಖಿ ಎಲ್ಲರ ಜೊತೆಯಲ್ಲಿಯೂ ಉತ್ತಮ ಭಾಂದವ್ಯ ಹೊಂದಿದ್ದರು. ಕಿರಿಯರಿಗೆ ಮಾರ್ಗದರ್ಶನ ನೀಡುತ್ತಿದ್ದರು. ತಮ್ಮ 27 ವರ್ಷಗಳ ಸುದೀರ್ಘ ಸೇವಾವಧಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ಇವರ ಸೇವಾನಿಷ್ಠೆ ಎಲ್ಲಾ ಶಿಕ್ಷಕರಿಗೂ ಮಾರ್ಗದರ್ಶನವಾಗಬೇಕು ಎಂದರು.

ನಿವೃತ್ತ ಮುಖ್ಯ ಶಿಕ್ಷಕ ಸಿದ್ದಪ್ಪ ಮಾತನಾಡಿ, ನನ್ನ ಗುರಿ ವಿದ್ಯಾರ್ಥಿಗಳನ್ನು ಒಳ್ಳೆಯ ವ್ಯಕ್ತಿಗಳಾನ್ನಾಗಿ ಮಾಡುವುದಾಗಿತ್ತು. ನನ್ನ ವೃತ್ತಿಯಲ್ಲಿ ಬಹು ಮುಖ್ಯ ತಿರುವು ನೀಡಿದ್ದು, ವಿದ್ಯಾರ್ಥಿಗಳ ಜೊತೆಯಲ್ಲಿ ಕಲಿಯಬೇಕಾಗಿರುವುದು ಸಾಕಷ್ಟಿದೆ.

ವೃತ್ತಿಯಿಂದ ನಿವೃತ್ತಿಯಾದರೂ ಜ್ಞಾನ ದಾಸೋಹ ಮಾತ್ರ ನಿರಂತರವಾಗಿರಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ನಿವೃತ್ತ ಮುಖ್ಯ ಶಿಕ್ಷಕ ಸಿದ್ದಪ್ಪ ಹಾಗೂ 14 ವರ್ಷ ಸೇವೆ ಸಲ್ಲಿಸಿ ಬೇರೆ ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕ ಲಕ್ಷ್ಮಿಕಾಂಗ್ ದಂಪತಿಗಳನ್ನು ಸನ್ಮಾನಿಸಿ ಬೀಳ್ಕೊಡಲಾಯಿತು.

ಈ ಸಂದರ್ಭದಲ್ಲಿ ಗ್ರಾಪಂನ ಸದಸ್ಯರಾದ ನಂದಿನಿ ಚನ್ನಕೇಶವ, ಶ್ರೀನಾಥ್, ಮಾಜಿ ಸದಸ್ಯ ಮುನಿನಾಗಪ್ಪ, ಎಂಪಿಸಿಎಸ್ ನಿರ್ದೇಶಕ ಮುನಿಯಪ್ಪ, ಮುಖಂಡರಾದ ನಾಗರಾಜಪ್ಪ,ಮುನಿರಾಜು, ರಾಮಚಂದ್ರ, ಮುನೇಗೌಡ, ಶ್ರೀನಿವಾಸ್, ಹಳೇ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ