Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಂದೇ ದಿನ ಮೂರು ದೇವಸ್ಥಾನಗಳಲ್ಲಿ ಕಳ್ಳತನ

ಸುದ್ದಿಮೂಲ ವಾರ್ತೆ

ನೆಲಮಂಗಲ, ಅ. 11: ಸೋಂಪು ರ ಹೋಬಳಿ ನರಸೀಪುರ ಗ್ರಾಮ ಪಂಚಾಯಿತಿ ಸುತ್ತಮು ತ್ತಲಿನ ಗ್ರಾಮಗಳಲ್ಲಿ ಒಂದೇ ದಿನ ರಾತ್ರಿ ಮೂರು ದೇ ವಸ್ಥಾನಗಳಲ್ಲಿ ಕಳ್ಳತನ ನಡೆದಿದೆ.

ದೇವಸ್ಥಾನಗಳಲ್ಲಿ ಹುಂಡಿ ಎತ್ತಿಕೊಂಡು ಹೋಗಿರುವ ಕಳ್ಳರು ಲಕ್ಷ್ಮಿಪುರ ಮುಳ್ಕಟ್ಟಮ್ಮ ದೇವಸ್ಥಾನದಲ್ಲಿ ದೇವರ ತಾಳಿ ಬೆಳ್ಳಿ ಡಾಬು ಹಾಗೂ ಹುಂಡಿ ಎತ್ತಿಕೊಂಡು ಹೋಗಿದ್ದಾರೆ.

ಮಾಕೇನಹಳ್ಳಿ ಗ್ರಾಮದಲ್ಲಿ ಶನಿಮಹಾತ್ಮ ದೇವಸ್ಥಾನವಿದ್ದು, ದೇವಸ್ಥಾನ ಜೀರ್ಣೋದ್ಧಾರದ ದುಡ್ಡನ್ನು ಗ್ರಾಮಸ್ಥರು ಹುಂಡಿಯಲ್ಲಿ ಇಟ್ಟಿರುವುದರಿಂದ ಕಳ್ಳರು ಹುಂ ಡಿಯನ್ನು ಎತ್ತಿಕೊಂಡು ಹೋಗಿ ಸುಮಾರು 200 ಅಡಿ ದೂರದಲ್ಲಿ ಹೋಗಿ ಹುಂಡಿ ಹೊ ಡೆದು ಹುಂಡಿಯಲ್ಲಿದ್ದ ಸಾವಿರಾರು ರೂಪಾಯಿ ಹಣವ0ನ್ನು ದೋಚಿಕೊಂಡು ಹೋಗಿದ್ದಾರೆ. ಹುಂಡಿ ಪಕ್ಕದಲ್ಲಿ ಕುಳಿತು ಮದ್ಯಪಾನ ಮಾಡಿ ಹಲವು ಸಮಯ ಕಳೆದು ಮುಂದಿನ ಊರಿಗೆ ಕಾಲಿಟ್ಟಿದ್ದಾರೆ. ಅಲ್ಲೂ ಕೂಡ ಕಳ್ಳರು ಶನಿಮಹಾತ್ಮ ದೇವಸ್ಥಾನದಲ್ಲಿ ಬೆಳ್ಳಿಯ ಹಲವಾರು ಮೂರ್ತಿಗಳಿದ್ದು ಯಾವುದನ್ನು ಮುಟ್ಟದೆ ಅಲ್ಲಿಂದ ಮುಂದೆ ನಡೆದಿದ್ದಾರೆ.

ಸಣ್ಣಪ್ಪನಪಾಳ್ಯ ಗ್ರಾಮದಲ್ಲೂ ಸಹ ಮುಳ್ಳಕಟ್ಟಮ್ಮ ದೇವಸ್ಥಾನವಿದ್ದು, ಯಥಾ ರೀತಿ ದೇವಸ್ಥಾನದ ಹುಂಡಿ ಕಳ್ಳತನ ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಕಳ್ಳರ ಕಾಟ ಗ್ರಾಮಗಳಲ್ಲಿ ಜಾಸ್ತಿ ಆಗುತ್ತಿರುವುದರಿಂದ ಗ್ರಾಮದಲ್ಲಿ ಹಾಗೂ ತೋಟದಲ್ಲಿ ವಾಸವಾಗಿರುವವರಿಗೆ ಕಳ್ಳರ ಬಯ ಶುರುವಾಗಿದೆ.

ನರಸೀಪುರ ಗ್ರಾಮಸ್ಥರ ಬೇಡಿಕೆ ನರಸೀಪುರ ಪಂಚಾಯಿತಿ ವ್ಯಾಪ್ತಿಯಲ್ಲಿ ಪೊಲೀಸ್ ಚೌಕ ಸ್ಥಾಪಿಸಬೇಕು. ಸುತ್ತಮುತ್ತಲಿನ ಗ್ರಾಮಗಳಿಗೆ ಸ್ವಲ್ಪನಾದರೂ ಭದ್ರತೆ ಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

 

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ