Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಈ ಬಜೆಟ್ ನಮ್ಮ ಬದ್ಧತೆಯ ಪ್ರತೀಕ- ಸಚಿವ ಪ್ರಿಯಾಂಕ್ ಖರ್ಗೆ

ಈ ಬಜೆಟ್ ನಮ್ಮ ಬದ್ಧತೆಯ ಪ್ರತೀಕ- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ, ಜು.7: ಹಿಂದಿನ ನಾಲ್ಕು ವರ್ಷಗಳ ಕಾಲ ಸತತವಾಗಿ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಕಲಬುರಗಿ ಜಿಲ್ಲೆಗೆ ಕಾಂಗ್ರೆಸ್ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಹಲವು ದೊಡ್ಡ ಕೊಡುಗೆಗಳನ್ನು ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಐಟಿಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಬಣ್ಣಿಸಿದ್ದಾರೆ.

ಬಜೆಟ್ ಕುರಿತು ಪ್ರತಿಕ್ರಿಸಿರುವ ಅವರು,

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಒಂದು ವರ್ಷಕ್ಕೆ ರೂ 5,000 ಕೋಟಿ ಹಣ ಒದಗಿಸುವ ಮೂಲಕ ಇತಿಹಾಸ ಸೃಷ್ಟಿಸಲಾಗುತ್ತಿದೆ. ಇದು ನಮ್ಮ ಭಾಗದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರದ ಬದ್ಧತೆಯ ದ್ಯೋತಕ ಎಂದು ಅವರು ಹೇಳಿದ್ದಾರೆ.

ಇನ್ನು ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಗ್ರಾಮ ಪಂಚಾಯತಿ ಕೇಂದ್ರಗಳ ಲೈಬ್ರರಿಗಳನ್ನು "ಅರಿವು ಕೇಂದ್ರ"ಗಳಾಗಿ ಮೇಲ್ದರ್ಜೆಗೆ ಏರಿಸಲಾಗುತ್ತಿದೆ. ನಮ್ಮ ಭಾಗದ ಹೆಣ್ಣು ಮಕ್ಕಳ ಘನತೆ ಕಾಪಾಡುವ ನಿಟ್ಟಿನಲ್ಲಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಇನ್ನು ಪ್ರತಿ ಸಂಕೀರ್ಣಕ್ಕೆ 25 ಲಕ್ಷದಂತೆ 400 ಮಹಿಳಾ ಸಮುದಾಯ ಶೌಚಾಲಯ ಸಂಕೀರ್ಣಗಳ ನಿರ್ಮಾಣಕ್ಕೆ ರೂ 100 ಕೋಟಿ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿರಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.

ನಮ್ಮ ಭಾಗದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಘನ ತ್ಯಾಜ್ಯ ವಿಲೇವಾರಿಗೆ ಪ್ರತಿ ಘಟಕಕ್ಕೆ 2 ಕೋಟಿ ರೂಪಾಯಿ ವೆಚ್ಚದಲ್ಲಿ ಸಮರ್ಥನೀಯ ಹಾಗೂ ಸ್ವಾವಲಂಬಿ ವ್ಯವಸ್ಥೆ ಸ್ಥಾಪಿಸಲು 'ಮೆಟೀರಿಯಲ್ ರಿಕವರಿ ಫೆಸಿಲಿಟಿ'ಗಳ ಸ್ಥಾಪನೆಗೆ ಅನುದಾನ ಒದಗಿಸಲಾಗಿದೆ.

ಇನ್ನು ಕಲಬುರ್ಗಿ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಜನರ ಬಯಕೆಯಾಗಿದ್ದ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಸ್ಥಾಪನೆಯನ್ನು ನಮ್ಮ ಸರ್ಕಾರ ಘೋಷಿಸಿದೆ. ರೂ 70 ಕೋಟಿ ವೆಚ್ಚದಲ್ಲಿ 200 ಹಾಸಿಗೆ ಸಾಮರ್ಥ್ಯದ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಲಿದೆ. ಜಿಲ್ಲೆಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಕಾರ್ಯಾರಂಭ ಹಾಗೂ ಸುಟ್ಟ ಗಾಯಗಳ ಘಟಕ ಸ್ಥಾಪನೆಗೆ ರೂ 155 ಕೋಟಿ ಅನುದಾನವನ್ನೂ ಒದಗಿಸಲಾಗಿದ್ದು ನೂತನ ಟ್ರಾಮಾ ಕೇರ್ ಸೆಂಟರ್‌ ಕಾರ್ಯಾಚರಣೆಗೆ ರೂ 30 ಕೋಟಿ ಅನುದಾನವನ್ನೂ ಒದಗಿಸಲಾಗಿದೆ. ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಕಲಬುರಗಿ ಪ್ರಾದೇಶಿಕ ಘಟಕದ ಸೌಲಭ್ಯಗಳ ಸುಧಾರಣೆಗೆ ರೂ 10 ಕೋಟಿ ಅನುದಾನ ನೀಡಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ವಿವರಿಸಿದ್ದಾರೆ.

ಸನ್ನತಿ ಏತ ನೀರಾವರಿ ಯೋಜನೆಗೆ ರಾಜ್ಯ ಸರ್ಕಾರ ಬದ್ದವಾಗಿದ್ದು, ಈ ನಿಟ್ಟಿನಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಯ ಯೋಜನೆಯಡಿ ಕೇಂದ್ರದ ನೆರವಿಗಾಗಿ ಎಲ್ಲಾ ಕ್ರಮ ಕೈಗೊಳ್ಳಲಾಗುವುದು. ಇನ್ನೂ ಸನ್ನತಿ ಗ್ರಾಮ, ಮಳಖೇಡ ಕೋಟೆ ಹಾಗೂ ಕಲಬುರ್ಗಿ ಕೋಟೆಗಳನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ವಿಶೇಷ ಅನುದಾನವನ್ನು ಒದಗಿಸಲಾಗಿದೆ. ಜೊತೆಗೆ ಕಲಬುರ್ಗಿ ವಸ್ತು ಸಂಗ್ರಹಾಲಯವನ್ನು ಮೇಲ್ದರ್ಜೆಗೆ ಏರಿಸಲು ಅನುದಾನ ಒದಗಿಸಲಾಗಿದೆ.

ಜಿಲ್ಲೆಯ ಯುವಜನರ ಸಬಲೀಕರಣಕ್ಕಾಗಿ ಕಲಬುರಗಿಯಲ್ಲಿ ರಾಜೀವ್ ಗಾಂಧಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯ, ಸಂಶೋಧನಾ ಕೇಂದ್ರ ಮತ್ತು ಒಳಾಂಗಣ ಕ್ರೀಡಾ ಸೌಲಭ್ಯ ಮತ್ತು ಅಲೈಡ್ ಹೆಲ್ತ್ ಸೈನ್ಸ್ ಕಾಲೇಜುಗಳು ಸ್ಥಾಪನೆಯಾಗಲಿದೆ. ಜೊತೆಗೆ ಸಮರೋಪಾದಿಯಲ್ಲಿ ಜಿಲ್ಲೆಯಲ್ಲಿ ಕೆರೆ ತುಂಬುವ ಕಾರ್ಯವನ್ನು ಪ್ರಾರಂಭಿಸಲಾಗುವುದು. ಕಲಬುರ್ಗಿಯ ಸಿಖ್ ಸಮುದಾಯದ ಪೂಜಾಕೇಂದ್ರ ಗುರುದ್ವಾರದ ಅಭಿವೃದ್ಧಿಗಾಗಿ ಅನುದಾನ ಒದಗಿಸಲಾಗಿದೆ.

ವಿಶೇಷವಾಗಿ ಜಿಲ್ಲೆಯ ಸಣ್ಣ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಸಲುವಾಗಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ (ಕೆಎಸ್‌ಎಸ್‌ಐಡಿಸಿ) ಆಶ್ರಯದಲ್ಲಿ ಚಿತ್ತಾಪುರದಲ್ಲಿ ಹೊಸ ಕೈಗಾರಿಕಾ ವಸಾಹತು ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು.

ಈ ಬಜೆಟ್ ಕಲ್ಯಾಣ ಕರ್ನಾಟಕ ಹಾಗೂ ಕಲಬುರ್ಗಿ ಪಾಲಿಗೆ ಆಶಾದಾಯಕವಾಗಿದ್ದು, ಹಿಂದಿನ ಅನ್ಯಾಯಗಳನ್ನು ಸರಿಪಡಿಸಿ, ನಮ್ಮ ಜಿಲ್ಲೆಯನ್ನು ಮತ್ತೆ ಅಭಿವೃದ್ಧಿಯ ಹಾದಿಯಲ್ಲಿ ಮುನ್ನಡೆಸಲು ಮೊದಲ ಹೆಜ್ಜೆಯನ್ನು ಇಡಲಾಗಿದೆ ಎಂದು ಸಚಿವರು ಹೇಳಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ