Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಡ್ಲಘಟ್ಟದಲ್ಲಿ ಧಾರಾಕಾರ ಮಳೆ ಜನಜೀವನ ಅಸ್ತವ್ಯಸ್ತ


ಸುದ್ದಿಮೂಲ ವಾರ್ತೆ





ಶಿಡ್ಲಘಟ್ಟ, ಸೆ.2: ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ ನಗರ ಎಂದು ಖ್ಯಾತಿ ಹೊಂದಿರುವ ಶಿಡ್ಲಘಟ್ಟ ನಗರದಲ್ಲಿ ಇಂದು ಸಂಜೆ ಸುರಿದ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು.

ಸುಮಾರು ತಿಂಗಳ ನಂತರ ಸುರಿದ ಮಳೆಯಿಂದ ರೈತರಿಗೆ ಸ್ವಲ್ಪ ಮಟ್ಟಿಗೆ ಸಮಾಧಾನ ತೊಂದರೆ ಇನ್ನೂ ಬರಗಾಲದ ಭೀತಿಯಲ್ಲಿದ್ದ ಜನರಿಗೆ ಸಮಾಧಾನ ತಂದಿದೆ ಇನ್ನೂ ಶಿಡ್ಲಘಟ್ಟ ನಗರಕ್ಕೆ ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಅಮಾನಿ ಕೆರೆ ಬತ್ತಿ ಹೋಗುವ ಹಂತಕ್ಕೆ ತಲುಪಿತು ಇಂದು ಸುರಿದ ಮಳೆಯಿಂದ ಕೆರೆಯಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ನೀರು ಶೇಖರಣೆಯಾಗಿದೆ.

ನಗರದಲ್ಲಿ ಸುರಿದ ಮಳೆಯಿಂದಾಗಿ ತಗ್ಗುಪ್ರದೇಶಗಳು ಎಂದಿನಂತೆ ಜಲಾವೃತಗೊಂಡು ಮಳೆನೀರು ಸರಾಗವಾಗಿ ಹರಿಯದೆ ಕೊಳಚೆ ನೀರು ರಸ್ತೆಗೆ ಹರಿದಿದ್ದು ದೃಶ್ಯ ಗಳು ಸರ್ವೇ ಸಾಮಾನ್ಯವಾಗಿ ಕಂಡುಬಂದಿತ್ತು.

ಮಳೆಯ ಆರ್ಭಟಕ್ಕೆ ನಗರದ ಸರ್ಕಾರಿ ಪ್ರೌಢಶಾಲೆ ಆವರಣ ಮಿನಿ ದ್ವೀಪವಾಗಿ ಪರಿವರ್ತನೆಗೊಂಡಿತು ಮಳೆಯ ನೀರು ಹರಿಯಲು ಸಮರ್ಪಕವಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಇಡೀ ಸರ್ಕಾರಿ ಪ್ರೌಢ ಶಾಲಾ ಆವರಣ ಜಲಾವೃತಗೊಂಡಿತು.

ಮಳೆಯ ಪ್ರಭಾವದಿಂದ ನಗರದ ಕಾರ್ಮಿಕ ನಗರಗಳಸ್ಥಿತಿ ಶೋಚನೀಯವಾಗಿತ್ತು ಮಳೆಯ ನೀರು ಚರಂಡಿಯಲ್ಲಿ ಸಮರ್ಪಕವಾಗಿ ಹರಿಯದೆ ಕಲುಷಿತ ನೀರು ರಸ್ತೆಯಲ್ಲಿ ಹರಿದು ನಾಗರಿಕರು ರಸ್ತೆಯಲ್ಲಿ ಸಂಚರಿಸಲು ಪರದಾಡುವ ಪರಿಸ್ಥಿತಿ ನಿರ್ಮಾಣಗೊಂಡಿತ್ತು.

ಮಳೆಯ ಆರ್ಭಟಕ್ಕೆ ತಗ್ಗು ಪ್ರದೇಶಗಳು ಜಲಾವೃತ ಗೊಂಡರೆ ಮತ್ತೊಂದೆಡೆ ನಗರದ ರೈಲ್ವೆ ಕೆಳ ಸೇತುವೆಯಲ್ಲಿ ಬಳಿ ಮಳೆಯ ನೀರು ನಿಂತು ವಾಹನ ಸವಾರರು ಸಂಚರಿಸಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಕೂಡಲೇ ತಾಲೂಕ ದಂಡಾಧಿಕಾರಿ ಬಿ ಏನ್ ಸ್ವಾಮಿ ನಗರಸಭೆಯ ಪ್ರಭಾರ ಆರೋಗ್ಯ ನಿರೀಕ್ಷಕ ಮುರಳಿ ಭೇಟಿ ನೀಡಿ ಮಳೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಿದರು.

ಒಟ್ಟಾರೆ ಶಿಡ್ಲಘಟ್ಟ ನಗರದಲ್ಲಿ ಸುರಿದ ಮಳೆಯಿಂದಾಗಿ ಬಿಸಿಲಿನ ತಾಪದಿಂದ ಒಂದು ಕಡೆ ತಂಪೆರೆದರೆ ರೈತರಿಗೆ ಸ್ವಲ್ಪ ಸಮಾಧಾನ ತಂದಿದೆ.




Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ