Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯಿರಿ: ಸಿಎಂಗೆ ವಿಜಯೇಂದ್ರ ಯಡಿಯೂರಪ್ಪ ಆಗ್ರಹ

 

ಬೆಂಗಳೂರು,ನ.20:ಬಿಜೆಪಿ ಕಾರ್ಯಕರ್ತ, ಕಳೆದ ಚುನಾವಣೆಯಲ್ಲಿ ಸ್ಪಲ್ಪ ಮತಗಳಿಂದ ಸೋತ ಮಣಿಕಂಠ ರಾಠೋಡ್ ಅವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಪಡೆಯುವಂತೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಆಗ್ರಹಿಸಿದರು.

ಮೈಸೂರು ಪ್ರವಾಸದಲ್ಲಿರುವ ಅವರು ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಪ್ರಿಯಾಂಕ್, ಮಧ್ಯರಾತ್ರಿ ರಾಠೋಡ್ ಮೇಲೆ ರಾಜಕೀಯ ಪುಡಾರಿಗಳ ಮೂಲಕ ಹಲ್ಲೆ ಮಾಡಿಸಿದ್ದಾರೆ. ಪ್ರಿಯಾಂಕ್ ಖರ್ಗೆಯವರು ಶಾಶ್ವತ ಅಧಿಕಾರದ ಭ್ರಮೆಯಲ್ಲಿದ್ದಾರೆ. ಅವರ ಸ್ವಕ್ಷೇತ್ರ, ಗುಲ್ಬರ್ಗ ಜಿಲ್ಲೆ, ಕಲ್ಯಾಣ ಕರ್ನಾಟಕದ ಘಟನೆಗಳನ್ನು ನೋಡಿದರೆ ಗೂಂಡಾಗರ್ದಿಗೂ ಇವರಿಗೂ ಏನೂ ವ್ಯತ್ಯಾಸ ಇಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಅದು ಅಕ್ಕಪಕ್ಕದ ಜಿಲ್ಲೆಗಳಿಗೂ ವ್ಯಾಪಿಸಲಿದೆ ಎಂದು ತಿಳಿಸಿದರು.

ಸಿಎಂ ಜನತೆಗೆ ಯಾವ ಸಂದೇಶ ನೀಡುತ್ತಿದ್ದಾರೆ ಎಂದು ಪ್ರಶ್ನಿಸಿದರು. ಕೋಲಿ ಸಮಾಜದ ಯುವಕ ಆತ್ಮಹತ್ಯೆ ಮಾಡಿಕೊಂಡಾಗ ಎಫ್‍ಐಆರ್ ಮಾಡಲು ಮೀನಮೇಷ ಎಣಿಸುತ್ತಾರೆ. ಎಫ್‍ಐಆರ್‍ನಲ್ಲಿ ಬೇನಾಮಿ ಹೆಸರುಗಳನ್ನು ಸೇರಿಸಿದ್ದಾರೆ ಎಂದು ಆಕ್ಷೇಪಿಸಿದರು. ಒಟ್ಟಾರೆಯಾಗಿ ರೈತರ ವಿಚಾರದಲ್ಲಿ ರಾಜ್ಯ ಸರಕಾರದ ನಡವಳಿಕೆ, ದಲಿತ ವಿರೋಧಿ ಕಾರ್ಯವೈಖರಿ ಖಂಡನೀಯ ಎಂದು ತಿಳಿಸಿದರು.

ಸರಕಾರ ಮತ್ತು ಸಚಿವರು ಅಧಿಕಾರ ದರ್ಪದಿಂದ ಆಡಳಿತ ಮತ್ತು ಅಭಿವೃದ್ಧಿಯನ್ನು ಮರೆತಿದ್ದಾರೆ. ಇಂಥ ಸರಕಾರವನ್ನು ಅಧಿಕಾರಕ್ಕೆ ತಂದ ಜನರು ತಮ್ಮನ್ನು ತಾವು ಪ್ರಶ್ನೆ ಮಾಡಿಕೊಳ್ಳುವ ಪರಿಸ್ಥಿತಿ ಬಂದಿದೆ. ರಾಜ್ಯ ಸರಕಾರ ಇವೆಲ್ಲ ವಿಷಯಗಳನ್ನು ಗಂಭೀರವಾಗಿ ಪರಿಗಣಿಸಿ ಅಭಿವೃದ್ಧಿಯತ್ತ ಗಮನ ಕೊಡಬೇಕೆಂದು ಆಗ್ರಹಿಸಿದರು.

ಮುಂದಿನ ಲೋಕಸಭಾ ಚುನಾವಣೆ ಮತ್ತು ಇತರ ಎಲ್ಲ ಚುನಾವಣೆಗಳನ್ನು ಬಿಜೆಪಿಯ ಎಲ್ಲ ಹಿರಿಯರು ಮತ್ತು ನಾಯಕರು ಒಗ್ಗಟ್ಟಾಗಿ ಎದುರಿಸುತ್ತೇವೆ. ಕಾಂಗ್ರೆಸ್ ಬಗ್ಗೆ ಜನರಿಗೆ ನಿರಾಶೆ ಉಂಟಾಗಿದೆ. ಇದಕ್ಕೆ ಪರ್ಯಾಯ ಎಂದರೆ ಬಿಜೆಪಿ ಮಾತ್ರ ಎಂಬುದು ಗೊತ್ತಾಗಿದೆ. ಬಿಜೆಪಿ ಮಾತ್ರ ಬಡಜನತೆ ಮತ್ತು ರೈತರ ಪರವಾಗಿ ಕೆಲಸ ಮಾಡಲು ಸಾಧ್ಯ ಎಂಬುದನ್ನು ಜನರಿಗೆ ಮನವರಿಕೆ ಮಾಡಿಕೊಟ್ಟು ಈ ದೇಶದ ಭವಿಷ್ಯದ ದೃಷ್ಟಿಯಿಂದ ಮತ್ತೊಮ್ಮೆ ನರೇಂದ್ರ ಮೋದಿಜೀ ಅವರಿಗೆ ಸಂಪೂರ್ಣ ಬೆಂಬಲ ಕೊಡಬೇಕು. ರಾಜ್ಯದಲ್ಲಿ 28ಕ್ಕೆ 28 ಸ್ಥಾನಗಳನ್ನು ಗೆಲ್ಲುವಂತೆ ಶ್ರಮಿಸಬೇಕು ಎಂದು ಮನವಿ ಮಾಡಿದರು. ಈ ಭಾಗದಲ್ಲೂ ಬಿಜೆಪಿ ಪತಾಕೆಯನ್ನು ಹಾರಿಸುವ ವಿಶ್ವಾಸ ಇದೆ ಎಂದು ತಿಳಿಸಿದರು.

ಪಕ್ಷದ ಸಂಘಟನೆ ಬಲಪಡಿಸುವ ವಿಚಾರಕ್ಕೆ ಆದ್ಯತೆ ನೀಡಲಿದ್ದೇನೆ. 28ಕ್ಕೆ 28 ಲೋಕಸಭಾ ಸ್ಥಾನಗಳನ್ನು ಗೆಲ್ಲಿಸಿ ಮೋದಿಜಿ ಅವರ ಕೈಯನ್ನು ಬಲಪಡಿಸಲಿದ್ದೇವೆ. ದಕ್ಷಿಣ ಭಾರತದ ಬಿಜೆಪಿ ಭದ್ರಕೋಟೆಯಾಗಿ ಕರ್ನಾಟಕವನ್ನು ಮತ್ತೆ ರೂಪಿಸುತ್ತೇವೆ ಎಂದು ವಿಶ್ವಾಸದಿಂದ ನುಡಿದರು. ಯಾವುದೇ ಚುನಾವಣೆ ಬಂದರೂ ಬಿಜೆಪಿಗೆ ಕರ್ನಾಟಕವು ಸುಭದ್ರ ಕೋಟೆ ಆಗುವಂತೆ ನೋಡಿಕೊಳ್ಳುವುದಾಗಿ ತಿಳಿಸಿದರು.

ಲೋಕಸಭೆ, ವಿಧಾನಸಭೆ, ವಿಧಾನ ಪರಿಷತ್ ಚುನಾವಣೆಗೆ ಕೊಟ್ಟಷ್ಟೇ ಮಹತ್ವವನ್ನು ಮುಂದಿನ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆಗೂ ಕೊಡಲಿದ್ದೇವೆ. ಅದು ನಮ್ಮ ಕಾರ್ಯಕರ್ತರ ಚುನಾವಣೆ. ಅದನ್ನೂ ಈಗಿನಿಂದಲೇ ಗಂಭೀರವಾಗಿ ಪರಿಗಣಿಸುತ್ತೇವೆ ಎಂದು ಪ್ರಕಟಿಸಿದರು.

136 ಶಾಸಕರೊಂದಿಗೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ. ಆದರೆ, ಅವರು ಜನರ ಆಸೆಯನ್ನು ನಿರಾಸೆಗೊಳಿಸಿದ್ದಾರೆ. ರಾಜ್ಯದಲ್ಲಿ ಜನಾಕ್ರೋಶ ಹೆಚ್ಚಾಗಿದೆ. ಚುನಾವಣೆಗೆ ಮೊದಲು ಜೋಡೆತ್ತುಗಳಂತಿದ್ದ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ಅವರ ವಿಚಾರ ಜನರ ನಡುವೆ ಚರ್ಚೆಗೆ ಗ್ರಾಸವಾಗಿದೆ. ಸಿಎಂ ಕುರ್ಚಿ ಸಂಬಂಧ ಡಿ.ಕೆ.ಶಿವಕುಮಾರ್ ಕಾತರದಿಂದ ಕಾಯುತ್ತಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಅಧಿಕಾರ ಕಡಿಮೆ ಮಾಡಲು ಎಷ್ಟು ಡಿಸಿಎಂ ಹುದ್ದೆ ಸೃಷ್ಟಿಸಬಹುದೆಂದು ರಾಜಕೀಯ ಹುನ್ನಾರ ನಡೆದಿದೆ ಎಂದು ವಿಶ್ಲೇಷಿಸಿದರು. ಇವೆಲ್ಲದರ ಬಗ್ಗೆ ನಮಗೆ ಆಸಕ್ತಿ ಇಲ್ಲ ಎಂದರು.

ಕಳೆದ 6 ತಿಂಗಳಲ್ಲಿ ಕಾಂಗ್ರೆಸ್ಸಿಗರು ಮಾಡಿದ್ದೇನು? ಹೊಸ ಯೋಜನೆಗಳೇನು? ಎಂದು ಕೇಳಿದರು. ನಿಮ್ಮ ಪಕ್ಷದ ಶಾಸಕರು ಕೂಡ ತಲೆ ಎತ್ತಿಕೊಂಡು ಕ್ಷೇತ್ರದಲ್ಲಿ ಓಡಾಡಲಾಗದ ಪರಿಸ್ಥಿತಿ ನಿರ್ಮಿಸಿದ್ದೀರಿ. ಭೀಕರ ಬರಗಾಲ ಇದ್ದರೂ, ಕೆಲಸ ಮಾಡದೆ ದಿನನಿತ್ಯ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಸಾಧನೆಯನ್ನಷ್ಟೇ ಕಾಂಗ್ರೆಸ್ ಸರಕಾರ ಮಾಡಿದೆ ಎಂದು ಟೀಕಿಸಿದರು.

ಬರಗಾಲ ಸಂಬಂಧ ಒಬ್ಬರೇ ಒಬ್ಬ ಸಚಿವರು ಪ್ರವಾಸ, ಸಭೆ ಮಾಡಿಲ್ಲ. ರೈತರ ಸಂಕಷ್ಟಕ್ಕೆ ಸ್ಪಂದಿಸಿಲ್ಲ. ಮಧ್ಯಂತರ ಪರಿಹಾರ, ಬೆಳೆವಿಮೆಯ ಕುರಿತು ಚರ್ಚಿಸಿಲ್ಲ. ಮೇವು ಸ್ಟಾಕ್ ಮಾಡಿಲ್ಲ. ವಿದ್ಯುತ್ ಕೊರತೆ ಮಿತಿಮೀರಿದೆ ಎಂದರು. ಹಿಂದೆ ಗರಿಷ್ಠ ಸಂಕಷ್ಟಗಳಿದ್ದರೂ ಯಡಿಯೂರಪ್ಪನವರ ಸರಕಾರವು 7 ಗಂಟೆ ವಿದ್ಯುತ್ ಅನ್ನು ರೈತರಿಗೆ ಕೊಟ್ಟಿತ್ತು ಎಂದು ನೆನಪಿಸಿದರು.

ಕಾಂಗ್ರೆಸ್ ಸರಕಾರ ರೈತವಿರೋಧಿ, ಬಡವರ ವಿರೋಧಿ. ಕಿಸಾನ್ ಸಮ್ಮಾನ್ ಯೋಜನೆಯಡಿ ಯಡಿಯೂರಪ್ಪನವರು ನೀಡುತ್ತಿದ್ದ ಹೆಚ್ಚುವರಿ 4 ಸಾವಿರವನ್ನು ರದ್ದು ಮಾಡಿದ ಸರಕಾರವಿದು ಎಂದು ಆಕ್ಷೇಪಿಸಿದರು. ಉದ್ಯೋಗ ಸೃಷ್ಟಿ ಆಗುತ್ತಿಲ್ಲ. ಬಂಡವಾಳ ಹೂಡಿಕೆದಾರರು ಇಲ್ಲಿಗೆ ಬರುತ್ತಿಲ್ಲ. ಅಧಿಕಾರದ ಅಮಲಿನಲ್ಲಿ ಸರಕಾರ, ಸಚಿವರು ತೇಲುತ್ತಿದ್ದಾರೆ ಎಂದು ಟೀಕಿಸಿದರು.

ಕಬ್ಬು ಬೆಳೆಗಾರರ ಭೇಟಿಗೆ ಸಿಎಂ ಸಿದ್ದರಾಮಯ್ಯನವರು ಅವಕಾಶ ಕೊಟ್ಟಿಲ್ಲ. ಬದಲಾಗಿ ಅವರನ್ನು ಬಂಧಿಸಲಾಗಿದೆ. ಅಭಿವೃದ್ಧಿ ಸಂಪೂರ್ಣ ಕುಂಠಿತವಾಗಿದೆ. ಈ ಸರಕಾರ ದಲಿತ ವಿರೋಧಿ ಎಂದು ಆಕ್ಷೇಪಿಸಿದ ಅವರು, ಸಂವಿಧಾನವಿರೋಧಿ ಹೇಳಿಕೆ ನೀಡಿದ ಜಮೀರ್ ಅಹ್ಮದ್ ಅವರ ರಾಜೀನಾಮೆ ಪಡೆಯಲು ಸಿಎಂ ಅವರನ್ನು ಆಗ್ರಹಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಸಂಸದ ಪ್ರತಾಪಸಿಂಹ, ರಾಜ್ಯ ಉಪಾಧ್ಯಕ್ಷ ಎಂ. ರಾಜೇಂದ್ರ, ಮೈಸೂರು ನಗರ ಜಿಲ್ಲಾಧ್ಯಕ್ಷ ಮತ್ತು ಶಾಸಕ ಟಿ.ಎಸ್. ಶ್ರೀವತ್ಸ, ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷೆ ಮಂಗಳಾ ಸೋಮಶೇಖರ್, ಮಾಜಿ ಸಚಿವ ಶಿವಣ್ಣ, ವಿಜಯಶಂಕರ್, ಮಾಜಿ ಶಾಸಕರಾದ ನಾಗೇಂದ್ರ, ಎನ್.ಮಹೇಶ್, ಬಾಲರಾಜ್, ಹರ್ಷವರ್ಧನ್, ನಿರಂಜನ್ ಕುಮಾರ್ ಅವರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ