Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಪ್ಪಳ ಕುಡಿಯುವ ನೀರಿಗಾಗಿ ಚುನಾವಣೆ ಬಹಿಷ್ಕರಿಸಿದ ಗ್ರಾಮಸ್ಥರು

ಸುದ್ದಿಮೂಲವಾರ್ತೆ
ಕೊಪ್ಪಳ ಏ ೧೦: ಸುಮಾರು ೬ ಸಾವಿರ ಜನಸಂಖ್ಯೆ ಹೊಂದಿರುವ ಗ್ರಾಮ. ಈ ಗ್ರಾಮಕ್ಕೆ ಕುಡಿಯುವ ನೀರನದೆ ದೊಡ್ಡ ಸಮಸ್ಯೆ. ನೀರಿಗಾಗಿ ಇಲ್ಲಿಯ ಪರದಾಡುತ್ತಿದ್ದಾರೆ. ತುಂಗಭದ್ರಾ ನದಿಯಿಂದ ನೀರು ತರಲು ಯೋಜನೆ ಕಾಮಗಾರಿ ಆಮೆವೇಗದಲ್ಲಿ ನಡೆದಿದೆ. ಕೇವಲ ವಿದ್ಯುತ್ ಸಂಪರ್ಕ ಕಲ್ಪಿಸಿದರೆ ಈ ಗ್ರಾಮಕ್ಕೆ ನೀರು ಬರುತ್ತದೆ. ಅಧಿಕಾರಿಗಳು, ಗುತ್ತಿಗೆದಾರರ ನಿರ್ಲಕ್ಷ್ಯದಿಂದಾಗಿ ಗ್ರಾಮಕ್ಕೆ ನೀರು ಬರುತ್ತಿಲ್ಲ. ಇದರಿಂದ ಬೇಸತ್ತ ಜನ ಈಗ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ ಮಾಡಿದ್ದಾರೆ.

ಕೊಪ್ಪಳ ತಾಲೂಕಿನ ಬಿಸರಳ್ಳಿ ದೊಡ್ಡ ಗ್ರಾಮ. ಬಿಸರಳ್ಳಿಯಲ್ಲಿ ಅಂತರ್ಜಲ ಸಂಪೂರ್ಣವಾಗಿ ಫ್ಲೋರೈಡ್ ಯುಕ್ತವಾಗಿದೆ. ಈ ನೀರು ಬಳಕೆಗೂ ಸಹ ಬರುತ್ತಿಲ್ಲ. ಕುಡಿವ ನೀರಿಗಾಗಿ ಜನ ನಿತ್ಯ ಪರದಾಡುವಂತಾಗಿದೆ. ಕುಡಿಯುವ ನೀರಿಗಾಗಿ ಮಹಿಳೆ ಆಗಾಗ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುತ್ತಿರುತ್ತಾರೆ. ಎಷ್ಟೆ ಹೋರಾಟ ಮಾಡಿದರೂ ಅಧಿಕಾರಿಗಳು ಇತ್ತ ನೋಡಿಲ್ಲ. ಇದರಿಂದ ಬೇಸತ್ತು ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ನಿರ್ಧಾರ ಮಾಡಿದ್ದಾರೆ.

ಮತ ಕೇಳಲು ಬರುವ ರಾಜಕಾರಣಿಗಳು ಬೇಗನೆ ನೀರು ಕೊಡುತ್ತೇವೆ ಎಂದು ಭರವಸೆ ನೀಡುತ್ತಾ ಬಂದಿದ್ದಾರೆ. ಈ ಭರವಸೆ ಕೇಳಿ ಕೇಳಿ ಸಾಕಾಗಿರುವ ಗ್ರಾಮಸ್ಥರು ನೀವು ಯಾವಾಗ ನೀರು ಕೊಡ್ತೀರಿ ಆಗ ನಾವು ವೋಟು ಹಾಕುತ್ತೀವಿ ಎಂದು ಪಟ್ಟು ಹಿಡಿದಿದ್ದಾರೆ.

ಬಿಸರಳ್ಳಿ, ಬಿಕನಳ್ಳಿ ಹಾಗು ಮೈನಳ್ಳಿ ಗ್ರಾಮಗಳಿಗೆ ೧.೫೦ ಕೋಟಿ ರೂಪಾಯಿಯಲ್ಲಿ ಕುಡಿವ ನೀರಿನ ಯೋಜನೆ ಮಂಜೂರಾಗಿ ೬ ವರ್ಷವಾಗಿದೆ. ಆರು ವರ್ಷವಾದರೂ ಈ ಮೂರು ಹಳ್ಳಿಗೆ ಕುಡಿವ ನೀರು ಬಂದಿಲ್ಲ. ಗ್ರಾಮದಲ್ಲಿ ಟ್ಯಾಂಕ್, ಪೈಪ್ ಲೈನ್ ಸಂಪೂರ್ಣವಾಗಿದೆ. ಈಗ ನೀರು ಸಂಗ್ರಹವಾಗಿರುವ ಸಂಪ್ ಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ಅದಕ್ಕೆ ೨೬ ಲಕ್ಷ ರೂಪಾಯಿ ಠೆವಣಿಯನ್ನು ಗುತ್ತಿಗೆದಾರರು ಮಾಡಬೇಕಿದೆ. ಗುತ್ತಿಗೆದಾರ ಹಾಗು ಅಧಿಕಾರಿಗಳ ನಿರ್ಲಕ್ಷ್ಯ ದಿಂದಾಗಿ ವಿದ್ಯುತ್ ಸಂಪರ್ಕವಿಲ್ಲದೆ ಕುಡಿವ ನೀರು ಸಿಗುತ್ತಿಲ್ಲ. ಕುಡಿವ ನೀರು ಕೊಡದೆ ಹೊರತು ಬಿಸರಳ್ಳಿ ಗ್ರಾಮಸ್ಥರು ಮತದಾನ ಮಾಡದೆ ಇರಲು ನಿರ್ಧರಿಸಿದ್ದಾರೆ. ಇದಕ್ಕೆ ಗ್ರಾಮ ಪಂಚಾಯತ್ ಸದಸ್ಯರು ಸಹ ಸಹಮತ ನೀಡಿದ್ದು. ನೀರು ಕೊಡುವವರಿಗೂ ಮತ ಕೇಳಲು ಯಾವ ರಾಜಕಾರಣಿಗಳು ನಮ್ಮೂರಿಗೆ ಬರಬೇಡಿ ಎನ್ನುತ್ತಿದ್ದಾರೆ.

ಜನರ ಬೇಡಿಕೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಜನಪ್ರತಿನಿಧಿಗಳಿಗೆ ಈಗ ಪಾಠ ಕಲಿಸಲು ಮತದಾರ ಸಿದ್ದವಾಗಿದ್ದಾನೆ. ಈ ಮಧ್ಯೆ ಇಂದು ತಹಸೀಲ್ದಾರ ನೇತ್ರತ್ವದಲ್ಲಿ ಗ್ರಾಮ ಪಂಚಾಯತ್ ಸದಸ್ಯರು ಗ್ರಾಮಸ್ಥರ ಸಭೆಯನ್ನು ನಡೆಸಲಾಯಿತು. ಈಗಲೇ ವಿದ್ಯುತ್ ಸಂಪರ್ಕ ಕಾಮಗಾರಿ ಆರಂಭಿಸಿ ಕುಡಿವ ನೀರು ನೀಡುವ ಭರವಸೆ ನೀಡಿದರು. ಆದರೆ ಗ್ರಾಮಸ್ಥರು ನಮ್ಮ ಗ್ರಾಮಕ್ಕೆ ನೀರು ಬರುವವರೆಗೂ ನಾವು ಮತದಾನ ಬಹಿಷ್ಕಾರದಿಂದ ದೂರು ಇರುತ್ತೇವೆ. ಒಂದು ವೇಳೆ ಚುನಾವಣೆಯ ಮುನ್ನ ನೀರು ಬಂದರೆ ಬಹಿಷ್ಕಾರ ಹಿಂಪಡೆಯುತ್ತೇವೆ ಎಂದು ಪಟ್ಟು ಹಿಡಿದು ಸಭೆಯಿಂದ ಹೊರ ಬಂದಿದ್ದಾರೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ