Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಆಡಳಿತ ಅಧಿಕಾರಿಗಳಿಗೆ ವೃತ್ತಿ ಬುನಾದಿ ತರಬೇತಿ: ಸಮಾರೋಪ

ಸುದ್ದಿಮೂಲವಾರ್ತೆ

ಕೊಪ್ಪಳ ಜುಲೈ 20; ಕೊಪ್ಪಳ ಜಿಲ್ಲಾ ತರಬೇತಿ ಸಂಸ್ಥೆಯಿಂದ ಆಡಳಿತ ಅಧಿಕಾರಿಗಳ ವೃತ್ತಿ ಬುನಾದಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭವು ನಗರದ ತಹಶೀಲ್ದಾರರ ಕಚೇರಿ ಆವರಣದ ವಿಜ್ಞಾನ ಭವನದಲ್ಲಿ ಜುಲೈ 19ರಂದು ನಡೆಯಿತು.

ಜಿಲ್ಲಾ ತರಬೇತಿ ಸಂಸ್ಥೆಯ ವ್ಯವಸ್ಥಾಪಕ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸಿದ್ದರು. ಬಳಿಕ ಮಾತನಾಡಿದ ಅವರು, ಗ್ರಾಮ ಆಡಳಿತ ಅಧಿಕಾರಿಗಳು ಹೆಚ್ಚಿನ ಸೇವಾ ಅವಧಿಯನ್ನು ಕಂದಾಯ ಇಲಾಖೆಯಲ್ಲಿಯೇ ಸಲ್ಲಿಸುತ್ತಾರೆ. ಹೀಗಾಗಿ ಸಾರ್ವಜನಿಕರೊಂದಿಗೆ ನಿಕಟವಾದ ಸಂಬಂಧ ಇಟ್ಟುಕೊಳ್ಳಲು ಕಂದಾಯ ಇಲಾಖೆಯು ಅವಕಾಶ ಒದಗಿಸಿಕೊಡುತ್ತದೆ. ಇಲಾಖೆಯಲ್ಲಿನ ವಿವಿಧ ಸೇವೆಗಳ ಬಗ್ಗೆ, ನೀತಿ ನಿಯಮಗಳ ಬಗ್ಗೆ ಸರಿಯಾದ ರೀತಿಯಲ್ಲಿ ಅಧ್ಯಯನ ನಡೆಸಿ ಅರ್ಥೈಸಿಕೊಂಡಲ್ಲಿ ಉತ್ತಮ ಆಡಳಿತಗಾರರಾಗಿ ಹೊರಹೊಮ್ಮಲು ಸಾಧ್ಯವಾಗಲಿದೆ ಎಂದು ಪ್ರಶಿಕ್ಷಣಾರ್ಥಿಗಳಿಗೆ ಸಲಹೆ ಮಾಡಿದರು.

ಪ್ರತಿಯೊಂದು ಗ್ರಾಮದ ಭೌಗೋಳಿಕ, ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸೇರಿದಂತೆ ಎಲ್ಲಾ ಕ್ಷೇತ್ರಗಳ ಬಗ್ಗೆ ಮೊದಲನೆಯದಾಗಿ ಸರಿಯಾಗಿ ತಿಳಿದುಕೊಳ್ಳಬೇಕು. ಸಮಯ ಪರಿಪಾಲನೆ ಮಾಡಬೇಕು. ಲೋಪವಾಗದ ಹಾಗೆ ಕಚೇರಿಯ ಕಾರ್ಯಗಳನ್ನು ನಡೆಸಬೇಕು. ಕಚೇರಿಯ ಕಾರ್ಯದ ಜೊತೆಜೊತೆಗೆ ಆರೋಗ್ಯದ ಬಗ್ಗೆ ಕೂಡ ಗಮನ ಹರಿಸಬೇಕು. ಕುಟುಂಬದವರಿಗು ಸಹ ಸಮಯ ಕೊಡಬೇಕು ಎಂದು ಅವರು ಸಲಹೆ ಮಾಡಿದರು.

ಗ್ರಾಮಾಭಿವೃದ್ಧಿಯಲ್ಲಿ ಗ್ರಾಮಮಟ್ಟದ ಅಧಿಕಾರಿಗಳ ಪಾತ್ರ ಸಹ ಮಹತ್ವದ್ಧಾಗಿದೆ. ಈ ಹಿನ್ನೆಲೆಯಲ್ಲಿ ಹೊಸದಾಗಿ ನೇಮಕಗೊಂಡ ಗ್ರಾಮ ಆಡಳಿತ ಅಧಿಕಾರಿಗಳಿಗೆ ತರಬೇತಿ ಏರ್ಪಾಡು ಮಾಡಿದ ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಅವರ ಕಾರ್ಯವು ಪ್ರಶಂಸಾರ್ಹವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎಂ.ಎ ರೆಡ್ಡೆರ್, ಕೊಪ್ಪಳ ಗ್ರೇಡ್-2 ತಹಶೀಲ್ದಾರರಾದ ಗವಿಸಿದ್ದಪ್ಪ ಮಣ್ಣೂರು, ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಕಂದಾಯ ಇಲಾಖೆ ನೌಕರರ ಸಂಘದ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷರಾದ ಮಂಜುನಾಥ ಮ್ಯಾಗಳಮನಿ, ನಿವೃತ್ತ ಶಿರಸ್ತೆದಾರರು ಹಾಗೂ ಸಂಪನ್ಮೂಲ ವ್ಯಕ್ತಿಗಳಾದ ಅಡಿವೆಪ್ಪ ಮತ್ತೂರು ಮತ್ತು ಲಾಯಕ್ ಅಲಿ, ಜಿಲ್ಲಾ ತರಬೇತಿ ಸಂಸ್ಥೆಯ ನಿವೃತ್ತ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ, ಯುನೆಸೆಫ್ ಸಂಯೋಜಕರಾದ ಹರಿಶ್ ಜೋಗಿ ಉಪಸ್ಥಿತರಿದ್ದರು.

ವೃತ್ತಿ ಬುನಾದಿ ತರಬೇತಿಗೆ ಆಯ್ಕೆಯಾಗಿ ಸಕ್ರಿಯ ತರಬೇತಿ ಪಡೆದ ಪ್ರಶಿಕ್ಷಣಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ಇದೆ ವೇಳೆ ಪ್ರಮಾಣ ಪತ್ರ ವಿತರಿಸಿದರು. ಬಳಿಕ ಪ್ರಶಿಕ್ಷಣಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.

ಗ್ರಾಮ ಆಡಳಿತ ಅಧಿಕಾರಿಗಳಾದ ಕರಿಬಸಮ್ಮ, ಅಭಿಷೇಕಗೌಡ, ನಾಗರಾಜ ಅವರು ಅನಿಸಿಕೆ ವ್ಯಕ್ತಪಡಿಸಿದರು.

ಹಾಲೇಶ ಮತ್ತು ಪೂಜಾ ಅವರು ನಿರೂಪಿಸಿದರು. ಗಿರೀಶ ಅವರು ವಂದಿಸಿದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ