Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಟಿ-ಬಿಟಿ ಸಂಸ್ಥೆಗಳ ಜೊತೆ ಮತದಾನ ಜಾಗೃತಿ

ಸುದ್ದಿ ಮೂಲ ವಾರ್ತೆ

ಬೆಂಗಳೂರು,ಏ.13:ಎಲೆಕ್ಟ್ರಾನಿಕ್ ಸಿಟಿಯ ಟೆಕ್ ಮಹೀಂದ್ರದಲ್ಲಿ ಏರ್ಪಡಿಸಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅನೇಕ ಸಂಸ್ಥೆಗಳ ಸಿಇಒಗಳು ತಮ್ಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಉದ್ಯೋಗಿಗಳಿಗೆ ಮತದಾನ ಉತ್ಸವದಲ್ಲಿ ತಪ್ಪದೆ ಭಾಗವಹಿಸಿ ಮತದಾನ ಮಾಡಲು ತಿಳಿಸುವುದಾಗಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರಿಗೆ ಭರವಸೆ ನೀಡಿದರು.



ಎಲೆಕ್ಟ್ರಾನಿಕ್ ಸಿಟಿಯ ಟೆಕ್ ಮಹೀಂದ್ರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಮಾತನಾಡಿ, ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಳಿಗೆ ಮತದಾನ ಮಾಡುವ ಒಲವು ಹೆಚ್ಚಿರುವುದಿಲ್ಲ. ಈ ಸಂಬಂಧ ಅವರಲ್ಲಿರುವಂತಹ ತಪ್ಪು ಕಲ್ಪನೆ ಹಾಗೂ ಆಲೋಚನೆಗಳನ್ನು ಬದಲಿಸಿ ಎಲ್ಲರಿಂದಲೂ ಮತದಾನ ಮಾಡಿಸುವುದು ಚುನಾವಣಾ ಆಯೋಗದ ಉದ್ದೇಶವಾಗಿದೆ ಎಂದು ಹೇಳಿದರು.

ಬೆಂಗಳೂರು ವ್ಯಾಪ್ತಿಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರಗಳಲ್ಲೂ ಈ ಬಾರಿ ಹೆಚ್ಚು ಮತದಾನ ಮಾಡಿಸುವ ಉದ್ದೇಶವನ್ನಿಟ್ಟುಕೊಂಡು, ಎಲ್ಲಾ ಕಡೆ ಮತದಾನ ಜಾಗೃತಿ ಜಾಥ, ನಾಟಕ ಸೇರಿದಂತೆ ನಮ್ಮ ಬೆಂಗಳೂರು ಐಕಾನ್ಸ್ ಗಳ ಮೂಲಕ ಮತದಾರರು ತಪ್ಪದೆ ಮತಚಲಾಯಿಸುವಂತೆ ಪ್ರೇರೇಪಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಸಂಬಳ ಸಹಿತ ರಜೆ ನೀಡುವ ಭರವಸೆ:

ಎಲೆಕ್ಟ್ರಾನಿಕ್ ಸಿಟಿಯ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಿಗಳಿಗೆ ಮತದಾನ ದಿನಾವಾದ ಮೇ 10 ರಂದು ಎಲ್ಲರೂ ತಪ್ಪದೆ ಮತದಾನ ಮಾಡುವ ಸಲುವಾಗಿ ಸಂಬಳ ಸಹಿತ ರಜೆ ನೀಡಲಾಗುವುದೆಂದು ಭರವಸೆ ನೀಡಿದರು.

ಈ ವೇಳೆ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷಾದ ಸಂಗಪ್ಪ, ಜಂಟಿ ಆಯುಕ್ತರಾದ ಕೃಷ್ಣಮೂರ್ತಿ, ವಿವಿಧ ಸಂಸ್ಥೆಗಳ ಸಿಇಒಗಳು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ