Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜೈಲ್‌ ಬರೋ ಚಳವಳಿ ಎಚ್ಚರಿಕೆ ನೀಡಿದ ವಾಟಾಳ್

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ. 16 : ಕಾವೇರಿಗಾಗಿ ಜೈಲ್ ಬರೋ ಚಳವಳಿ ಮಾಡಬೇಕಾಗಬಹುದು ಎಂದು ಕನ್ನಡಪರ ಹೋರಾಟಗಾರ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದ್ದಾರೆ.

ಸೋಮವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕನ್ನಡ ಒಕ್ಕೂಟ ಕಾವೇರಿ ವಿಷಯದ ಕರ್ನಾಟಕ ರಾಜ್ಯಕ್ಕೆ ಆದ ಅನ್ಯಾಯದ ವಿರುದ್ಧ ಕಪ್ಪು ಬಾವುಟ ಪ್ರದರ್ಶನದ ಹೋರಾಟದ ಪ್ರತಿಭಟನೆ ಸಂದರ್ಭದಲ್ಲಿ ಮಾತನಾಡಿ, ಕರ್ನಾಟಕದಲ್ಲಿ ಕುಡಿಯುವ ನೀರಿಲ್ಲ, ರೈತರ ಹೊಲ ಗದ್ದೆಗಳಿಗೆ ನೀರಿಲ್ಲ, ನೀರಿಲ್ಲದೆ ವಿದ್ಯುತ್ ಇಲ್ಲ. ಕರ್ನಾಟಕ ಕತ್ತಲಲ್ಲಿ ಮುಳಗಿದೆ. ಬೆಂಗಳೂರಿನ ಜನತೆಗೆ ಕುಡಿಯುವುದಕ್ಕೂ ನೀರಿಲ್ಲ ಹಾಗಾಗಿ, ತಮಿಳುನಾಡಿಗೆ ನೀರು ಬಿಡಬಾರದು ಎಂದು ಒತ್ತಾಯಿಸಿದರು.

ತಮಿಳುನಾಡಿಗೆ ನೀರು ಬಿಡುವುದರ ವಿರುದ್ಧ ಮತ್ತು ಕಾವೇರಿ ಪ್ರಾಧಾಕಾರವನ್ನೇ ಮುಚ್ಚಬೇಕು ಎಂಬ ವಿಷಯದ ಮೇಲೆ ನಾಳೆ ವಿಧಾನಸೌಧ ಚಲೋ ಮಾಡುತ್ತೇವೆ. ನಾಡಿದ್ದು ಕರ್ನಾಟಕ ತಮಿಳುನಾಡಿನ ಗಡಿ ಭಾಗಕ್ಕೆ ನುಗ್ಗುತ್ತೇವೆ. ಅಲ್ಲಿಗೂ ಸರಕಾರ ಬಗ್ಗದಿದ್ದರೆ ಮುಂದೆ ಜೈಲ್ ಬಾರೋ ಚಳುವಳಿ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗುವುದಕ್ಕೂ ಮೊದಲು ಹುಲಿ ಆಗಿದ್ದರು. ಮುಖ್ಯಮಂತ್ರಿ ಆದಮೇಲೆ ಪಂಜರದ ಗಿಳಿ ಆಗಿದ್ದಾರೆ. ಪಂಜರದಿಂದ ಈಚೆ ಬರುವುದು ಒಂದು ಭವಿಷ್ಯದ ಕಾರ್ಡ್ ತೆಗೆದು ಯಜಮಾನನಿಗೆ ಕೊಟ್ಟು ಮತ್ತೆ ಪಂಜರ ಸೇರುವುದು ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು .

ರಾಜ್ಯದಲ್ಲಿ ಮುಖ್ಯಮಂತ್ರಿ, ಉಪಮುಖ್ಯ ಮಂತ್ರಿ ಇಬ್ಬಿಬ್ಬರು ಇದ್ದರೂ ರಾಜ್ಯಕ್ಕೆ ಇಷ್ಟು ಅನ್ಯಾಯವಾಗುತ್ತಿದೆ. ಆದಕಾರಣ ತತ್ ತಕ್ಷಣ ವಿಧಾನ ಮಂಡಳ ಅಧಿವೇಶನ ಕರೆದು ಪ್ರಾಧಿಕಾರ ರದ್ದತಿಗೆ ಆದೇಶ ಮಾಡಿ ರಾಜ್ಯದ ಜನತೆಗೆ ತಿಳಿಸಬೇಕು. ಇದೇ ಮಾದರಿ ತಮಿಳುನಾಡು ತನ್ನ ರಾಜ್ಯದ ಪರವಾಗಿ ಮಾಡುತ್ತದೆ. ಕರ್ನಾಟಕಕ್ಕೆ ಯಾಕೆ ಆಗುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಂಸದರು ಎಲ್ಲಿ ಮರೆಯಾಗಿದ್ದರೋ ಗೊತ್ತಿಲ್ಲ. ಆ ಭಾಗದ ಸಂಸದರೇ ಪತ್ತೆಯಿಲ್ಲ. ಈ ರೀತಿ ಅನ್ಯಾಯ ಸಹಿಸಲು ಸಾಧ್ಯವಿಲ್ಲ. ಇನ್ನು ನಮ್ಮ ಸಂಘಟನೆ ತೀವ್ರ ಪ್ರತಿಭಟನೆಗೆ ತೊಡಗಿಕೊಳ್ಳಬೇಕಾಗಬಹುದು ಎಂದು ಎಚ್ಚರಿಸಿದರು.

 
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ