Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೊಸಕೋಟೆಯ 38 ಕೆರಗಳಿಗೆ ನೀರು ಪೂರೈಕೆ

ಸುದ್ದಿಮೂಲ ವಾರ್ತೆ

ಹೊಸಕೋಟೆ, ಆ. 18: ತಾಲೂಕಿನ ಜಡಗೇನಹಳ್ಳಿ, ಅನುಗೊಂಡನಹಳ್ಳಿ ಹಾಗೂ ಕಸಬಾ ಹೋಬಳಿಯ ರೈತರಿಗೆ ಈ ಏತ ನೀರಾವರಿ ಯೋಜನೆಯು ವರದಾನವಾಗಲಿದ್ದು, ಸೂಲಿಬೆಲೆ ಹಾಗೂ ನಂದಗುಡಿ ಹೋಬಳಿಗಳ ಕೆರೆಗಳಿಗೆ 2ನೇ ಹಂತದ ವೃಷಭಾವತಿ ವ್ಯಾಲಿ ಯೋಜನೆ ಮೂಲಕ ನೀರು ಪೂರೈಕೆ ಮಾಡುವ ಕಾರ್ಯ ಶೀಘ್ರದಲ್ಲೇ ಮಾಡಲಾಗುವುದು ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ ತಿಳಿಸಿದರು.

ಹೊಸಕೋಟೆ ತಾಲೂಕಿನ 38 ಕೆರೆಗಳಿಗೆ ನೀರು ಹರಿಸುವ ಮಹತ್ವಕಾಂಕ್ಷೆಯ ಏತ ನೀರಾವರಿ

ಯೋಜನೆಯ ಪ್ರಗತಿ ಕಾಮಗಾರಿಯನ್ನು ಶಾಸಕ ಶರತ್ ಬಚ್ಚೇಗೌಡ ಅವರೊಂದಿಗೆ ವೀಕ್ಷಿಸಿ ಮಾತನಾಡಿದ ಅವರು, ಹೊಸಕೋಟೆ ತಾಲೂಕಿನ 3 ಹೋಬಳಿಯ 38 ಕೆರಗಳಿಗೆ ಈ ಯೋಜನೆ ಮೂಲಕ ನೀರು ಪೂರೈಕೆ ಮಾಡುವ ಕಾರ್ಯ ಅಂತಿಮ ಹಂತದಲ್ಲಿದ್ದು ನಂದಗುಡಿ ಹಾಗೂ ಸೂಲಿಬೆಲೆ ಹೋಬಳಿಗೆ ಎರಡನೇ ಹಂತದ ವೃಷಭಾವತಿ ವ್ಯಾಲಿ ನೀರು ಸರಬರಾಜು ಮಾಡಲು ತಕ್ಷಣವೇ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಾಡುವಂತೆ ಸಣ್ಣ ನೀರಾವರಿ ಸಚಿವರೊಂದಿಗೆ ಚರ್ಚಿಸಿ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ವೆಂಗಯ್ಯನ ಕೆರೆ ಏತ ನೀರಾವರಿ ಯೋಜನೆಯ ಮೂಲಕ ಹೊಸಕೋಟೆ ತಾಲೂಕಿನ 38 ಕೆರೆಗಳಿಗೆ 43 ಎಂ.ಎಲ್.ಡಿ ಸಂಸ್ಕರಿಸಿದ ನೀರನ್ನು ತುಂಬಿಸುವ 132 ಕೋಟಿ ರೂಪಾಯಿ ವೆಚ್ಚದ ಮಹತ್ತರ ಯೋಜನೆಯ ಕಾಮಗಾರಿಯ ಪ್ರಗತಿ ವೀಕ್ಷಣೆ ಹಾಗೂ ಶುದ್ಧೀಕರಿಸಿದ ನೀರಿನ ಗುಣಮಟ್ಟವನ್ನು ಸಹ ಪರಿಶೀಲನೆ ಮಾಡಿದ್ದೇವೆ. ಮೇಡಹಳ್ಳಿಯಿಂದ ಎಲ್ಲಾ 38 ಕೆರೆಗಳಿಗೆ ಪೈಪ್ ಲೈನ್ ವ್ಯವಸ್ಥೆ ಹಾಗೂ ಮೇಡಹಳ್ಳಿ ಮತ್ತು ಕಾಡುಗೋಡಿಯಲ್ಲಿ ಪಂಪಿಂಗ್ ವ್ಯವಸ್ಥೆ ಪೂರ್ಣಗೊಂಡಿದೆ. ಬಾಕಿ ಉಳಿದಿರುವ ಟಿ.ಸಿ ಪಾಳ್ಯ

ಜಂಕ್ಷನ್ ನಿಂದ ಮೇಡಹಳ್ಳಿಯವರಗೆ ಹೈವೇ ಮಾರ್ಗದಲ್ಲಿ ಪೈಪ್ ಲೈನ್ ಅಳವಡಿಕೆ ಕಾರ್ಯಪೂರ್ಣಗೊಂಡರೆ ಮುಂದಿನ ತಿಂಗಳ ಸೆಪ್ಟೆಂಬರ್ ಅಂತ್ಯದೊಳಗೆ ಈ ಯೋಜನೆ ಪೂರ್ಣಗೊಳ್ಳಲಿದೆ. ಈ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆ ಸಚಿವರಾದ ಎನ್.ಎಸ್.ಭೋಸರಾಜು ಅವರೊಂದಿಗೆ ಚರ್ಚಿಸಿ ತುರ್ತಾಗಿ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಸದಸ್ಯೆ ಕಮಲಾಕ್ಷಿ, ರಾಜಣ್ಣ , ಟಿಎಪಿಸಿಎಂಎಸ್ ಅಧ್ಯಕ್ಷ ಬಾಬುರೆಡ್ಡಿ, ಕೆಪಿಸಿಸಿ ಕಾರ್ಯದರ್ಶಿ ಚೀಮಂಡಹಳ್ಳಿ ಮುನಿಶಾಮಣ್ಣ, ಮಾನವ ಹಕ್ಕುಗಳ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಸಮೇತನಹಳ್ಳಿ ಲಕ್ಷ್ಮಣ್ ಸಿಂಗ್, ಮುಖಂಡರಾದ ಸಮೇತನಹಳ್ಳಿ ಸೊಣ್ಣಪ್ಪ, ಬೋಧನಹೊಸಹಳ್ಳಿ ಪ್ರಕಾಶ್, ಶಿವಕುಮಾರ್, ಕೊರಳೂರು ಸುರೇಶ್ ಇನ್ನು ಹಲವಾರು ಮುಖಂಡರು ಹಾಜರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ