Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದದಲ್ಲಿ ಕಬ್ಬಡ್ಡಿ ಪಂದ್ಯಾವಳಿ: ಗೆದ್ದವರು ಯಾರು ಯಾರು?

ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಜ.10 ರಂದು ಶ್ರೀಗವಿಮಠದ ಆವರಣದಲ್ಲಿ ಮಹಿಳಾ ಮತ್ತು ಪುರುಷರ ತಂಡಗಳಿಂದ, ಕಬಡ್ಡಿ ಪಂದ್ಯಾವಳಿಗಳು ಜರುಗಿದವು.

ಕೊಪ್ಪಳ ಗ್ರಾಮೀಣ ಪೋಲಿಸ್ ಠಾಣೆಯ ಸಿಪಿಐ ಮಹಾಂತೇಶ್ ಸಜ್ಜನ್ ಅವರು ಪಂದ್ಯಾವಳಿಗೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, "ಕಬ್ಬಡಿ ಇದು ಒಂದು ದೇಶಿ ಕ್ರೀಡೆಯಾಗಿದ್ದು, ಗಟ್ಟಿ ಆಟವಾಗಿದೆ. ದೈಹಿಕ ಮತ್ತುಮಾನಸಿಕ ಸಧೃಡತೆಗೆ ಮುಖ್ಯವಾದ ಕ್ರೀಡೆಯಾಗಿದೆ. ಯುವ ಜನಾಂಗ ಹೆಚ್ಚೆಚ್ಚು ಈ ಆಟವನ್ನು ಆಡಬೇಕು," ಎಂದು ಹೇಳಿದರು.

ಪಂದ್ಯಾವಳಿಗೆ ಮಹಿಳೆಯರ ವಿಭಾಗದಿಂದ 8, ಪುರುಷರ ವಿಭಾಗದಿಂದ 16 ತಂಡಗಳು ನೊಂದಣಿಯಾಗಿದ್ದವು. ಮಹಿಳೆಯರ ವಿಭಾಗದಲ್ಲಿ ಗದಗ ಜಲ್ಲಾ ತಂಡವು ಪ್ರಥಮ 10,000 ರೂಪಾಯಿ ಬಹುಮಾನ ಹಾಗೂ ಟ್ರೋಫಿ, ದ್ವಿತೀಯ ಬಹುಮಾನ ರಮೇಶ ಅಕಾಡೆಮಿ ಚಳಗೇರಿ 7500 ರೂಪಾಯಿ ಬಹುಮಾನ ಹಾಗೂ ಟ್ರೋಫಿ, ತೃತೀಯ ಬಹುಮಾನ ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಕಾಲೇಜು ಕೊಪ್ಪಳ 5000 ರೂಪಾಯಿ ಬಹುಮಾನ ಹಾಗೂ ಟ್ರೋಫಿ ಪಡೆದುಕೊಂಡವು.

ಪುರುಷರ ವಿಭಾಗದಲ್ಲಿ ಚಳಗೇರಿ ತಂಡವು ಪ್ರಥಮ 10,000 ರೂಪಾಯಿ ಬಹುಮಾನ ಹಾಗೂ ಟ್ರೋಫಿ, ದ್ವಿತೀಯ ಬಹುಉಮಾನ ಜೈಭೀಮ ಕೊಪ್ಪಳ ತಂಡ 7500 ರೂಪಾಯಿ ಬಹುಮಾನ ಹಾಗೂ ಟ್ರೋಫಿ, ತೃತೀಯ ಬಹುಮಾನ ಹಿರೇಮ್ಯಾಗೇರಿ ತಂಡ 5000 ರೂಪಾಯಿ ಬಹುಮಾನ ಹಾಗೂ ಟ್ರೋಫಿ ಪಡೆದುಕೊಂಡವು.



ಪ್ರಶಸ್ತಿ ಪಡೆದ ತಂಡಗಳಿಗೆ ಕೊಪ್ಪಳ ಸಂಚಾರಿ ಪೊಲಿಸ್ ಇನ್ಸಪೆಕ್ಟರ್ ಶಾರದಮ್ಮ ಬಹುಮಾನ ವಿತರಿಸಿದರು. ಆಯೋಜನೆ ಜವಾಬ್ದಾರಿಯನ್ನು ದೈಹಿಕ ನಿರ್ದೇಶಕರಾದ ವಿನೋದ ಸಿ.ಎಂ ಮತ್ತು ಈಶಪ್ಪ ದೊಡ್ಡಮನಿ ಹಾಗೂ ಇತರರು ವಹಿಸಿಕೊಂಡಿದ್ದರು.

ಕೊಪ್ಪಳ ಗ್ರಾಮೀಣ ಪೋಲಿಸ್ ಠಾಣೆಯ ಪಿ.ಎಸ್.ಐ, ಮುದ್ದುರಂಗ ಹಾಗೂ ಇತರರು ಉಪಸ್ಥಿತರಿದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ