Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯಲಹಂಕ: 70 ಕೋಟಿ ರೂ. ಮೌಲ್ಯದ ಸರ್ಕಾರಿ ಜಮೀನು ವಶ

ಸುದ್ದಿಮೂಲ ವಾರ್ತೆ

ಬೆಂಗಳೂರು, ಅ.9: ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿರುವ ಕಂದಾಯ ಇಲಾಖೆ ಅಧಿಕಾರಿಗಳು, ಯಲಹಂಕ ತಾಲೂಕು, ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರಲ್ಲಿ ಖಾಸಗಿಯವರಿಂದ ಒತ್ತುವರಿಯಾಗಿದ್ದ ಸುಮಾರು 70 ಕೋಟಿ ರೂ. ಮೌಲ್ಯದ 6.05 ಎಕರೆ ಸರ್ಕಾರಿ ಜಮೀನನ್ನು ಸೋಮವಾರ ವಶಕ್ಕೆ ಪಡೆದಿದ್ದಾರೆ.

ಕಳೆದ ಮೂರು ವಾರದಲ್ಲಿ ಕಂದಾಯ ಇಲಾಖೆ ನಡೆಸುತ್ತಿರುವ ನಾಲ್ಕನೇ ಒತ್ತುವರಿ ಕಾರ್ಯಾಚರಣೆ ಇದಾಗಿದೆ. ಈ ಮೂಲಕ ಭೂ ಒತ್ತುವರಿದಾರರು ಹಾಗೂ ಭೂ ಮಾಫಿಯಾಗೆ ಸರ್ಕಾರ ಬಿಸಿ ಮುಟ್ಟಿಸಿದೆ.

ಕಂದಾಯ ಇಲಾಖೆ ಜವಾಬ್ದಾರಿ ವಹಿಸುತ್ತಿದ್ದಂತೆ ಬೆಂಗಳೂರಿನಾದ್ಯಂತ ಭೂ ಒತ್ತುವರಿ ತೆರವು ಮಾಡುವಂತೆ ಸಚಿವರಾದ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅದರಂತೆ ಕಳೆದ ಒಂದು ತಿಂಗಳಿನಿಂದ ಬೆಂಗಳೂರಿನ ನಾನಾ ಕಡೆಗಳಲ್ಲಿ ತೆರವು ಕಾರ್ಯಾಚರಣೆ ಬಿರುಸಿನಿಂದ ನಡೆಯುತ್ತಿದೆ.

ಅಧಿಕಾರಿಗಳು ಒತ್ತುವರಿದಾರರ ಪಟ್ಟಿ ತಯಾರಿಸಿ ಪ್ರತಿ ವಾರಾಂತ್ಯದಲ್ಲಿ ಬೆಂಗಳೂರಿನಲ್ಲಿ ತೆರವು ಕಾರ್ಯಾಚರಣೆಗೆ ಮುಂದಾಗುತ್ತಿದ್ದಾರೆ. ಬೆಂಗಳೂರಿನ ನಂತರ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲೂ ಒತ್ತುವರಿ ತೆರವು ಮಾಡಲಾಗುವುದು ಎಂದು ಈಗಾಗಲೇ ಎಚ್ಚರಿಕೆ ನೀಡಿದ್ದ ಸಚಿವರು, ಜಿಲ್ಲಾವಾರು ಒತ್ತುವರಿ ಪಟ್ಟಿ ತಯಾರಿಸುವಂತೆ ಜಿಲ್ಲಾಧಿಕಾರಿಗಳಿಗೂ ಸೂಚನೆ ನೀಡಿದ್ದಾರೆ.

ಯಲಹಂಕ ತಾಲೂಕಿನ ಒತ್ತುವರಿಗೆ ಸಂಬಂಧಿಸಿದಂತೆ ಕಳೆದ ವಾರವಷ್ಟೇ ಯಲಹಂಕದ ಬಾಗಲೂರಿನ ಬಳಿ 66 ಕೋಟಿ ರೂ. ಮೌಲ್ಯದ 6.07 ಎಕರೆ ಸರ್ಕಾರಿ ಭೂ ಒತ್ತುವರಿ ತೆರವುಗೊಳಿಸಲಾಗಿತ್ತು. ಇದರ ಬೆನ್ನಿಗೆ ಕಟ್ಟಿಗೇನಹಳ್ಳಿಯಲ್ಲೂ 70 ಕೋಟಿ ರೂ. ಮೌಲ್ಯದ 6.05 ಎಕರೆ ಮೌಲ್ಯದ ಜಮೀನನ್ನು ಸರ್ಕಾರದ ವಶಕ್ಕೆ ಪಡೆಯಲಾಗಿದೆ.

ಯಲಹಂಕ ತಾಲ್ಲೂಕು ಜಾಲ ಹೋಬಳಿ, ಕಟ್ಟಿಗೇನಹಳ್ಳಿ ಗ್ರಾಮದ ಸರ್ವೆ ನಂ.28 ರ ಜಮೀನಿಗೆ ಸಂಬಂಧಿಸಿದಂತೆ, ಗೋಮಾಳದ ಜಮೀನಿಗೆ ವಿವರವಾದ ವರದಿಯನ್ನು ದಾಖಲೆಗಳೊಂದಿಗೆ ಸಲ್ಲಿಸಲು ಮತ್ತು ಜಮೀನಿನಲ್ಲಿ ಯಾವುದೇ ಖಾತೆ ಅನುಭವವಿಲ್ಲದೇ ಇರುವ ಒತ್ತುವರಿದಾರರನ್ನು ಖುಲ್ಲಾಪಡಿಸಿ ಕ್ರಮವಹಿಸುವಂತೆ ಈ ಹಿಂದೆಯೇ ಅಧಿಕಾರಿಗಳಿಗೆ ನಿರ್ದೇಶಿಸಲಾಗಿತ್ತು.

ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಕಲಂ 104 ರ ಅಡಿ ವಿಚಾರಣೆ ನಡೆಸಲು ನಿರ್ಧರಿಸಿ ಪ್ರತಿವಾದಿಗಳಿಗೆ ನೋಟೀಸ್ ಕೂಡ ನೀಡಲಾಗಿತ್ತು. ಅದರಂತೆ ಕಟ್ಟಿಗೇನಹಳ್ಳಿಯ ಸರ್ವೆ ನಂ.28 ರ ಜಮೀನಿನಲ್ಲಿ ತಾಲೂಕು ಮೋಜಿಣಿದಾರರು ಒತ್ತುವರಿ ಎಂದು ಗುರುತಿಸಿದ 6.05 ಎಕರೆ ಜಮೀನನ್ನು ಇಂದು (ಸೋಮವಾರ) ಸರ್ಕಾರದ ವಶಕ್ಕೆ ಪಡೆಯಲಾಗಿದೆ.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ