Web Stories
Suddimoola News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವಜನೋತ್ಸವ ವಿದ್ಯಾರ್ಥಿಗಳ ಆತ್ಮವಿಶ್ವಾಸ ನಾಯಕತ್ವ ಸೃಜನಶೀಲತೆ ಹೆಚ್ಚಿಸುತ್ತದೆ :ಡಾ. ಎಂ. ಹನುಮಂತಪ್ಪ

ಸುದ್ದಿಮೂಲ ವಾರ್ತೆ ಕಲಬುರಗಿ, ಡಿ.26:
ಯುವಜನೋತ್ಸವವು ವಿದ್ಯಾಾರ್ಥಿಗಳ ಅಡಗಿರುವ ಪ್ರತಿಭೆಯನ್ನು ಹೊರತರುವ ಮಹತ್ವದ ವೇದಿಕೆಯಾಗಿದೆ. ಪಠ್ಯಾಾಭ್ಯಾಾಸದ ಜೊತೆಗೆ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗಲೇ ಸಂಪೂರ್ಣ ವ್ಯಕ್ತಿಿತ್ವ ವಿಕಸನ ಸಾಧ್ಯ ಎಂದು ರಾಯಚೂರು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಾಲಯದ ಕುಲಪತಿ ಡಾ. ಎಂ. ಹನುಮಂತಪ್ಪ ಹೇಳಿದರು.
ಇಲ್ಲಿನ ಕೃಷಿ ಮಹಾವಿದ್ಯಾಾಲಯದಲ್ಲಿ ಆಯೋಜಿಸಲಾಗಿರುವ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಾಲಯದ, ಕೃಷಿ ವಿಜ್ಞಾನಗಳ ವಿಶ್ವವಿದ್ಯಾಾಲಯದ 16ನೇ ಅಂತರ ಮಹಾವಿದ್ಯಾಾಲಯಗಳ ಯುವಜನೋತ್ಸವ 2025-26 ಕಲಾ ಸಂಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಯುವಜನೋತ್ಸವದಂತಹ ಕಾರ್ಯಕ್ರಮಗಳು ವಿದ್ಯಾಾರ್ಥಿಗಳ ಆತ್ಮವಿಶ್ವಾಾಸ, ನಾಯಕತ್ವ ಮತ್ತು ಸೃಜನಶೀಲತೆ ಹೆಚ್ಚಿಿಸುತ್ತವೆ ಎಂದರು.
ಈ ಯುವಜನೋತ್ಸವದಲ್ಲಿ ಏಳು ಮಹಾವಿದ್ಯಾಾಲಯಗಳ ವಿದ್ಯಾಾರ್ಥಿಗಳು ಭಾಗವಹಿಸಿದ್ದು, ದೇಶಭಕ್ತಿಿ ಗೀತೆ, ಸುಗಮ ಸಂಗೀತ, ಸಮೂಹ ಗಾಯನ, ಏಕಾಂಕ ನಾಟಕ, ಭಿತ್ತಿಿ ಚಿತ್ರ, ವ್ಯಂಗ್ಯಚಿತ್ರ ರಚನೆ, ಚರ್ಚಾ ಸ್ಪರ್ಧೆ, ಆಶುಭಾಷಣ, ಏಕಪಾತ್ರಾಾಭಿನಯ, ಸ್ಥಳದಲ್ಲೇ ಚಿತ್ರ ಬಿಡಿಸುವುದು ಹಾಗೂ ಮಣ್ಣಿಿನಿಂದ ಆಕೃತಿ ರಚನೆ ಸೇರಿದಂತೆ ವೈವಿಧ್ಯಮಯ ಸ್ಪರ್ಧೆಗಳು ನಡೆಯಲಿವೆ.
ತೀರ್ಪುಗಾರರು ನಿಜವಾದ ಪ್ರತಿಭೆಗಳನ್ನು ಗುರುತಿಸಿ ಪ್ರೋೋತ್ಸಾಾಹ ನೀಡಬೇಕು.
ಯುವಜನೋತ್ಸವ ಕಾರ್ಯಕ್ರಮಕ್ಕೆೆ ರಾಜ್ಯ ಪ್ರಶಸ್ತಿಿ ಪುರಸ್ಕೃತ ಹಾಗೂ ಖ್ಯಾಾತ ಹಾಸ್ಯ ಕಲಾವಿದ ವೈಜನಾಥ ಬಿರಾದರ ಅವರು ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು. ಕರ್ನಾಟಕ ನಾಟಕ ಅಕಾಡೆಮಿಯ ಮಾಜಿ ಸದಸ್ಯ ಡಾ. ಸಂದೀಪ್ ಬಿ. ಮಾಳಗಿ, ಡಾ. ಯು.ಸತೀಶಕುಮಾರ ಮಾತನಾಡಿದರು. ವಿವಿಧ ಮಹಾವಿದ್ಯಾಾಲಯಗಳ ವಿದ್ಯಾಾರ್ಥಿಗಳಿಂದ ಸಾಂಸ್ಕೃತಿಕ ಮೆರವಣಿಗೆ ನಡೆಯಿತು.
ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಡಿ., ಮಲ್ಲೇಶ ಕೊಲಿಮಿ, ಡಾ.ಗುರುರಾಜ ಸುಂಕದ, ಡಾ. ಎ.ಅಮರೇಗೌಡ, ಡಾ.ಶ್ಯಾಾಮರಾವ ಜಹಾಗೀರದಾರ, ಡಾ.ರವಿಶಂಕರ, ಡಾ. ಜಾಗೃತಿ ಬಿ. ದೇಶಮಾನ್ಯ, ಡಾ. ಶಿವಶರಣಪ್ಪ ಬಿ. ಗೌಡಪ್ಪ, ಸೇರಿದಂತೆ ಉಪನ್ಯಾಾಸಕರು, ಶಿಕ್ಷಕೇತರ ಸಿಬ್ಬಂದಿಗಳು, ವಿಶ್ವವಿದ್ಯಾಾಲಯದ ವಿದ್ಯಾಾರ್ಥಿಗಳು ಹಾಗೂ ಶಿಕ್ಷಕೇತರ ಸಿಬ್ಬಂದಿ ಇದ್ದರು.
Author
Suddi Moola
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ