ಸುದ್ದಿಮೂಲ ವಾರ್ತೆ ನವದೆಹಲಿ, ಡಿ.26:
ಭಾರತೀಯ ಆಡಳಿತ ಸೇವೆಯ (ಐಎಎಸ್) ಅಧಿಕಾರಿಗಳು ಸಕಾಲದಲ್ಲಿ ತಮ್ಮ ಆಸ್ತಿಿ ವಿವರಗಳನ್ನು ಸಲ್ಲಿಸದಿದ್ದರೆ ಬಡ್ತಿಿ ನಿರಾಕರಣೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ.
ಎಲ್ಲ ಐಎಎಸ್ ಅಧಿಕಾರಿಗಳು ಮುಂದಿನ ಜನವರಿ 31ರೊಳಗೆ ತಮ್ಮ ಆಸ್ತಿಿಯ ಸಂಪೂರ್ಣ ವಿವರಗಳನ್ನು ಸಲ್ಲಿಸಬೇಕು. ಇಲ್ಲದಿದ್ದರೆ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಕೇಂದ್ರ ಸಿಬ್ಬಂದಿ ಸಚಿವಾಲಯ ಪ್ರಕಟಣೆ ಹೊರಡಿಸಿದೆ.
ಮುಂದಿನ ವೇತನ ಶ್ರೇೇಣಿಗೆ ನೌಕರರನ್ನು ಪರಿಗಣಿಸಬೇಕಾದರೆ ಸ್ಥಿಿರಾಸ್ತಿಿಗಳ ವಿವರ ಸಲ್ಲಿಸುವುದನ್ನು ಕಡ್ಡಾಾಯಗೊಳಿಸಿ ನಿಯಮಗಳಿಗೆ ತಿದ್ದುಪಡಿ ಮಾಡಲಾಗಿದೆ.

