ಸುದ್ದಿಮೂಲ ವಾರ್ತೆ ಬೆಳಗಾವಿ, ಡಿ.18:
ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತಹ ಅಧಿಕಾರಿಗಳ ಪೊಲೀಸರು ಮತ್ತು ಅಧಿಕಾರಿಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಿಕೊಂಡು ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ವಿಧಾನ ಪರಿಷತ್ತಿಿನಲ್ಲಿ ಗುರುವಾರ ಶಾಸಕ ಶರವಣ ಟಿ. ಎ. ಅವರ ಪ್ರಶ್ನೆೆಗೆ ಉತ್ತರಿಸಿದ ಸಚಿವರು, ಪ್ರಸ್ತುತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 88 ಪೊಲೀಸರು-ಅಧಿಕಾರಿಗಳ ವಿರುದ್ಧ ಕ್ರಿಿಮಿನಲ್ ಕೇಸ್ ದಾಖಲಿಸಿ, ಎ್ಐಆರ್ ದಾಖಲಿಸಿ, ಬಂಧನ ಮಾಡಿ, ಅಮಾನತು ಸಹ ಮಾಡಲಾಗಿದೆ. ಪ್ರಕರಣ ಸಾಬೀತಾದಲ್ಲಿ ಅವರನ್ನು ಸೇವೆಯಿಂದ ವಜಾ ಗೊಳಿಸಲಾಗುವುದು ಎಂದರು.
ರಾಜ್ಯದ ಪೊಲೀಸರು,ಅಧಿಕಾರಿಗಳು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದನ್ನು ತಡೆಗಟ್ಟಲು ರಾಜ್ಯದ ಎಲ್ಲಾ ಘಟಕದ ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳಿಗೆ ಕರ್ತವ್ಯ ಪಾಲನೆಯ ಕುರಿತು ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ. ಇಂತಹ ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿ-ಸಿಬ್ಬಂದಿ ಮೇಲೆ ಉನ್ನತಾಧಿಕಾರಿಗಳು ನಿಗಾವಹಿಸುವಂತೆ ಸೂಚನೆ ನೀಡಲಾಗಿದೆ ಎಂದರು.
ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ದುರ್ನಡತೆ, ಅಕ್ರಮ ಚಟುವಟಿಕೆಗಳು ಹಾಗೂ ಅಪರಾಧಿಕ ಕೃತ್ಯಗಳಲ್ಲಿ ತೊಡಗಿರುವ ಮಾಹಿತಿಗಳನ್ನು ಜಿಲ್ಲಾ ಮಟ್ಟದ ಉನ್ನತಾಧಿಕಾರಿಗಳು ತಕ್ಷಣವೇ ಪೊಲೀಸ್ ಪ್ರಧಾನ ಕಛೇರಿಗೆ ವರದಿ ಮಾಡುವಂತೆ ಸೂಚಿಸಲಾಗಿದೆ. ಎಲ್ಲಾ ಘಟಕದ ಅಧಿಕಾರಿಗಳಿಂದ ಅಧೀನದ ಪೊಲೀಸ್ ಅಧಿಕಾರಿ ಸಿಬ್ಬಂದಿಯ ಪೂರ್ವಾಪರಗಳ ಪರಿಶೀಲನೆ ಮತ್ತು ಸಮಗ್ರತೆಯ ಮೌಲ್ಯಮಾಪನಗಳನ್ನು ನಿಯತವಾಗಿ ನಡೆಸಲಾಗುತ್ತಿಿದೆ. ನೈತಿಕ ಮಾನದಂಡಗಳು, ಕಾನೂನು ಬದ್ಧ ಕರ್ತವ್ಯಗಳು, ಮತ್ತು ಭ್ರಷ್ಟಾಾಚಾರ- ಅಪರಾಧಗಳ ಕುರಿತು ಜಾಗೃತಿ ಮೂಡಿಸಲು ತರಬೇತಿ ಕಾರ್ಯಕ್ರಮಗಳ ಮೂಲಕ ಪೊಲೀಸ್ ಸಿಬ್ಬಂದಿಗೆ ತಿಳುವಳಿಕೆ ನೀಡಲಾಗುತ್ತಿಿದೆ ಎಂದು ತಿಳಿಸಿದರು.
ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಪೊಲೀಸರ ವಿರುದ್ಧ ಕಠಿಣ ಕ್ರಮ: ಪರಮೇಶ್ವರ್

