ಸುದ್ದಿಮೂಲ ವಾರ್ತೆ ಬೆಂಗಳೂರು, ಅ.16:
ಜೆಡಿಎಸ್ ಕೋರ್ ಕಮಿಟಿ ಪುನಾರಚನೆಗೆ ಮುಂದಾಗಿದ್ದು, ಕಮಿಟಿ ಪುನಾರಚನೆಯ ಸಂಪೂರ್ಣ ಅಧಿಕಾರವನ್ನು ಪಕ್ಷದ ರಾಜ್ಯಾಾಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಾಮಿ ಅವರಿಗೆ ನೀಡಲಾಗಿದೆ.
ಪಕ್ಷ ಸಂಘಟನೆ ಹಾಗೂ ಮುಂಬರುವ ವಿವಿಧ ಚುನಾವಣೆಗಳಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಾಮಿ ನೇತೃತ್ವದಲ್ಲಿ ಅವರ ನಿವಾಸದಲ್ಲಿ ಗುರುವಾರ ನಡೆದ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಿತು. ಈ ವೇಳೆ ಕೋರ್ ಕಮಿಟಿ ಪುನಾರಚಿಸುವ ತೀರ್ಮಾನ ಕೈಗೊಳ್ಳಲಾಗಿದೆ.
ಇಂದಿನ ಸಭೆಯಲ್ಲಿ ಕೋರ್ ಕಮಿಟಿ ಪುನಾರಚನೆ ಬಗ್ಗೆೆ ಸಮಗ್ರವಾಗಿ ಚರ್ಚಿಸಲಾಯಿತು ಹಾಗೂ ಪುನಾರಚನೆ ಅಧಿಕಾರವನ್ನು ಕೇಂದ್ರ ಸಚಿವರಿಗೆ ನೀಡಲಾಯಿತು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು ಮಾಧ್ಯಮಗಳಿಗೆ ತಿಳಿಸಿದರು.
ಅಲ್ಲದೆ, ಮುಂಬರುವ 2026ರಲ್ಲಿ ವಿಧಾನ ಪರಿಷತ್ಗೆ ನಡೆಯಲಿರುವ ಪಶ್ಚಿಿಮ ಪದವೀಧರ ಕ್ಷೇತ್ರ, ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಪದವೀಧರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಜೆಡಿಎಸ್ ಪಕ್ಷದ ಉಸ್ತುವಾರಿ ಸಮಿತಿ ರಚನೆ ಮಾಡಲಾಯಿತು. ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಬೋಜೇಗೌಡ, ವಿವೇಕಾನಂದ, ಎಸ್.ಎನ್. ಮಂಜೇಗೌಡ, ಮಾಜಿ ಶಾಸಕ ಶಿವಶಂಕರ್ ಈ ಸಮಿತಿ ಸದಸ್ಯರಾಗಿರುತ್ತಾಾರೆ ಎಂದು ಅವರು ಮಾಹಿತಿ ನೀಡಿದರು.
ಗ್ರೇೇಟರ್ ಬೆಂಗಳೂರು ಪ್ರಾಾಧಿಕಾರದ ಮುಂಬರುವ ಚುನಾವಣೆಗೆ ಸಂಬಂಧಿಸಿ ಚುನಾವಣೆಗೆ ಸಂಬಂಧಿಸಿ ಉಸ್ತುವಾರಿ ಸಮಿತಿ ರಚಿಸಲಾಯಿತು. ಮಾಜಿ ಸಂಸದ ಕುಪೇಂದ್ರ ರೆಡ್ಡಿಿ, ಯುವ ಜನತಾದಳ ರಾಜ್ಯಾಾಧ್ಯಕ್ಷ ನಿಖಿಲ್ ಕುಮಾರಸ್ವಾಾಮಿ, ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಟಿ. ಜವರಾಯಿ ಗೌಡ ಅವರು ಈ ಸಮಿತಿ ಸದಸ್ಯರಾಗಿರುತ್ತಾಾರೆ.
ಹಾಗೆಯೇ ನವೆಂಬರ್ ತಿಂಗಳ ಮೊದಲ ವಾರದಲ್ಲಿ ಪಕ್ಷದ ರಾಷ್ಟ್ರೀಯ ಸಮಾವೇಶ ನಡೆಸಲು ಸಭೆ ನಿರ್ಧರಿಸಿದ್ದು, ಆ ಬಗ್ಗೆೆ ನಡೆಸಬೇಕಾದ ಸಿದ್ಧತೆಗಳ ಬಗ್ಗೆೆ ಸಮಾಲೋಚನೆ ನಡೆಸಲಾಯಿತು. ನವೆಂಬರ್ 22ರಂದು ಜೆಡಿಎಸ್ ಪಕ್ಷ ಸ್ಥಾಾಪನೆಯಾಗಿ 25 ವರ್ಷ ತುಂಬಲಿದ್ದು, ಪಕ್ಷದ ಬೆಳ್ಳಿಿಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸುವ ನಿರ್ಧಾರವನ್ನು ಸಭೆ ಕೈಗೊಂಡಿತು ಎಂದು ಸುರೇಶ್ ಬಾಬು ಮಾಹಿತಿ ನೀಡಿದರು.
ಇದರ ಜತೆಗೆ, ರಾಜ್ಯ ಸರಕಾರ ಎಸಗುತ್ತಿಿರುವ ತಪ್ಪುುಗಳು, ಬೆಂಗಳೂರಿನ ಗುಂಡಿಗಳ ಸಮಸ್ಯೆೆ, ಎ ಖಾತಾ ನೆಪದಲ್ಲಿ ಜನರ ಸುಲಿಗೆ ಮಾಡಲು ರಾಜ್ಯ ಸರ್ಕಾರ ಹೊರಟಿರುವುದು, ಬಿಡದಿಯಲ್ಲಿ ರೈತರ ವಿರೋಧದ ನಡುವೆ ನಡೆದಿರುವ ಭೂಸ್ವಾಾಧೀನ ಸೇರಿದಂತೆ ವಿವಿಧ ಮಹತ್ವದ ವಿಷಯಗಳ ಬಗ್ಗೆೆ ಚರ್ಚೆ ನಡೆಸಲಾಯಿತು ಎಂದು ಅವರು ಹೇಳಿದರು.
ಹಿರಿಯ ಶಾಸಕರು ಆಗಿರುವ ಎ. ಮಂಜು, ಲೋಕಸಭೆ ಸದಸ್ಯ ಮಲ್ಲೇಶ್ ಬಾಬು, ಬೆಂಗಳೂರು ನಗರ ಘಟಕದ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ, ವಿಧಾನ ಪರಿಷತ್ ಸದಸ್ಯ ಇಂಚರ ನಾರಾಯಣಸ್ವಾಾಮಿ ಮುಂತಾದವರು ಸುರೇಶ್ ಬಾಬು ಅವರ ಜತೆಯಲ್ಲಿ ಇದ್ದರು.