ಸುದ್ದಿಮೂಲ ವಾರ್ತೆ ಜೇವರ್ಗಿ, ಜ.24:
ಲಂಚ ಪಡೆಯುವಾಗ ಕಂದಾಯ ಇಲಾಖೆ ಸಿಬ್ಬಂದಿ ಸತೀಶಕುಮಾರ್ ರಾಠೋಡ್ ಲೋಕಾಯುಕ್ತ ಬಲೆಗೆ ಬಿದಿದ್ದಾನೆ.
ಕಂದಾಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿಿರುವ ಸತೀಶ್ ಕುಮಾರ್ ರಾಠೋಡ್ ೆನ್ ಪೇ ಮೂಲಕ 10,000 ಲಂಚ ಪಡೆದಿರುವ ಹಿನ್ನೆೆಲೆಯಲ್ಲಿ ಲೋಕಾಯುಕ್ತ ಎಸ್ಪಿಿ ಸಿದ್ದರಾಜು ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಇನ್ಸ್ಪೆಕ್ಟರ್ ಅರುಣ್ ಕುಮಾರ್ ಅವರ ತಂಡ ಪಟ್ಟಣದ ಮಿನಿ ವಿಧಾನಸೌಧದ ಎದುರುಗಡೆ ಸತೀಶ್ ಕುಮಾರ್ ರಾಠೋಡ್ ವಶಕ್ಕೆೆ ಪಡೆದುಕೊಂಡಿದ್ದಾರೆ.
ಬಂಧಿತ ಸತೀಶ್ ಕುಮಾರ್ ರಾಠೋಡನನ್ನು ಹೆಚ್ಚಿಿನ ವಿಚಾರಣೆಗಾಗಿ ಕಲಬುರಗಿಗೆ ಕರೆದೊಯ್ಯಲಾಗಿದ್ದು, ವಿಚಾರಣೆ ನಡೆಸಲಾಗುತ್ತಿಿದೆ ಎಂದು ತಿಳಿದು ಬಂದಿದೆ.
ದಾಳಿಯಲ್ಲಿ ಸಿಬ್ಬಂದಿಗಳಾದ ಮಾಜೀದ್, ಅಸ್ಲಾಾಂ ಕೊಡಚಿ, ಪ್ರಮೋದ್, ರಾಣೋಜಿ ಇದ್ದರು.
ಕಂದಾಯ ಇಲಾಖೆ ಸಿಬ್ಬಂದಿ ಲೋಕಾ ಬಲೆಗೆ

