ಸುದ್ದಿಮೂಲ ವಾರ್ತೆ ಬೆಂಗಳೂರು, ಡಿ.15:
ಪ್ರಧಾನ ಮಂತ್ರಿಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು ಎಂಬುದರ ಬಗ್ಗೆೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಅರಣ್ಯ ಜೀವಿಶಾಸ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆೆ ಸವಾಲು ಹಾಕಿದ್ದಾರೆ.
ಸದನದಲ್ಲಿ ತಾವು ಸಲು ಬಿಮಾ ಯೋಜನೆ ಬಗ್ಗೆೆ ಸುಳ್ಳು ಮಾಹಿತಿ ನೀಡಿದ್ದಾಗಿ ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಮಾಡಿರುವ ಆರೋಪದ ಬಗ್ಗೆೆ ಪ್ರತಿಕ್ರಿಿಯಿಸಿದ ಅವರು, ಈವರೆಗೆ ಯೋಜನೆ ಅಡಿ ರೈತರಿಗೆ ನೀಡಿರುವ ಪರಿಹಾರ ಎಷ್ಟು. ವಿಮೆ ಯೋಜನೆ ಬಗ್ಗೆೆ ಶ್ವೇತಪತ್ರ ಹೊರಡಿಸಿದರೆ ಖಾಸಗಿ ವಿಮಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಹೇಗೆ ಲಾಭ ಮಾಡಿಕೊಡುತ್ತಿಿದೆ ಎಂಬುದು ಬಟಾ ಬಯಲಾಗಲಿದೆ ಎಂದರು.
ದೇಶಾದ್ಯಂತ ಬೆಳೆ ವಿಮೆ ಯೋಜನೆ ಜಾರಿಯಾದ ದಿನದಿಂದ ಈವರೆಗೆ ವಿಮಾ ಕಂಪನಿಗಳು ಉದ್ದಾರ ಆಗಿದೆಯೇ ಹೊರತು ರೈತರಲ್ಲ. ಇದೊಂದು ಬಿಜೆಪಿ ಪ್ರಾಾಯೋಜಿತ ಪಕ್ಕಾಾ ಗೋಲ್ಮಾಾಲ್ ಯೋಜನೆ ಎಂದು ಈಶ್ವರ ಖಂಡ್ರೆೆ ಪುನರುಚ್ಚರಿಸಿದರು.
ಕೋವಿಡ್ ಸಮಯದಲ್ಲಿ ಜನರು ಆಕ್ಸಿಿಜನ್ ಸಿಗದೇ ರೆಮಿಡಿ ಸಿವೀರ್ ಚುಚ್ಚುಮದ್ದು ಸಿಗದೇ, ಉದ್ಯೋೋಗವೂ ಇಲ್ಲದೆ ಹಸಿವಿನಿಂದ ಬಳಲುತ್ತಿಿದ್ದಾಗ ಮನೆಯಲ್ಲಿ ಬಾಗಿಲು ಮುಚ್ಚಿಿ ಕುಳಿತಿದ್ದ ಖೂಬಾ ಈಗ ಬೀದಿಯಲ್ಲಿ ನಿಂತು ವೀರಾವೇಷದಿಂದ ಮಾತನಾಡಿದರೆ ಜನ ನಂಬುವುದಿಲ್ಲ ಅವರಿಗೆ ಸತ್ಯದ ಅರಿವಿದೆ ಎಂದರು.
ಖೂಬಾಗೆ ಮಾಡಲು ಕೆಲಸವಿಲ್ಲ; ಈಗ ನಿರುದ್ಯೋೋಗಿಯಾಗಿದ್ದಾರೆ ಹೀಗಾಗಿ ಮಾಧ್ಯಮ ಹೇಳಿಕೆ ನೀಡುತ್ತಾಾ, ಕಾಲ ತಳ್ಳುತ್ತಿಿದ್ದಾರೆ ಎಂದು ತಿರುಗೇಟು ನೀಡಿದರು.
ಸಲು ಬಿಮಾ ಬಿಜೆಪಿ ಪ್ರಾಯೋಜಿತ ಗೋಲ್ಮಾಲ್ ಯೋಜನೆ: ಈಶ್ವರ ಖಂಡ್ರೆ

