ಸುದ್ದಿಮೂಲ ವಾರ್ತೆ ಸಂಡೂರು, ಡಿ.03:
ಮುಖ್ಯಮಂತ್ರಿಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದ ಕಟ್ಟ ಕಡೆಯ ಶೋಷಿತ ವರ್ಗಗಳ ಅಭಿವೃದ್ಧಿಿಗಾಗಿ ಸೇವೆ ಮಾಡುವುದೇ ಮುಖ್ಯ ಧ್ಯೇಯವಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರು ತಿಳಿಸಿದ್ದಾಾರೆ.
ಸಂಡೂರು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯತ್ ಇವರ ಸಂಯುಕ್ತಾಾಶ್ರಯದಲ್ಲಿ ವಿಠಲಾಪುರದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಬುಧವಾರ ನಡೆದ ‘ಸಂಡೂರು ಸಂಕಲ್ಪ ಸಮರ್ಪಣಾ ಸಮಾವೇಶ-2025ರನ್ನು ಉದ್ಘಾಾಟಿಸಿ ಅವರು ಮಾತನಾಡಿದರು.
ನನ್ನ ರಾಜಕೀಯ ಜೀವನ ಪ್ರಾಾರಂಭವಾಗಿದ್ದು, ಇದೇ ವಿಠಲಾಪುರ ಗ್ರಾಾಮದಿಂದ. ನನ್ನನ್ನು ಆಯ್ಕೆೆ ಮಾಡಿ ವಿಧಾನಸಭೆಗೆ ಕಳುಹಿಸಿದ್ದು ಇದೇ ಸಂಡೂರು ಜನತೆ. 2004 ರಲ್ಲಿ ಈ ಭಾಗದಲ್ಲಿ ವಿದ್ಯುತ್ ಕಂಬದಲ್ಲಿ 40 ವ್ಯಾಾಟ್ ಬಲ್ಬ್ ನಿಂದ ಬೆಳಕು ಸಹ ನೆಲಕಚ್ಚುತ್ತಿಿರಲಿಲ್ಲ ಎಂದರು.
ವಿಠಲಾಪುರ ಗ್ರಾಾಮದಲ್ಲಿಯೇ ವಿದ್ಯುತ್ ಉಪಕೇಂದ್ರ ಸ್ಥಾಾಪಿಸುವ ಮೂಲಕ ಗ್ರಾಾಮಗಳಲ್ಲಿ ಬೆಳಕು ಚೆಲ್ಲುವ ಕೆಲಸ ಮಾಡಲಾಯಿತು ಎಂದು ಸ್ಮರಿಸಿದ ಅವರು, ಹಂತ-ಹಂತವಾಗಿ ಅಭಿವೃದ್ಧಿಿಪಡಿಸುವ ಮೂಲಕ ಜಿಲ್ಲೆೆಯಲ್ಲಿ ಮಾದರಿ ತಾಲ್ಲೂಕನ್ನಾಾಗಿ ಮಾಡಲಾಗಿದೆ ಎಂದು ತಿಳಿಸಿದರು.
ತುಂಗಾಭದ್ರಾಾ ಅಣೆಕಟ್ಟಿಿನಿಂದ ಈ ಭಾಗದ 80 ಗ್ರಾಾಮಗಳ 80 ಸಾವಿರ ಮನೆಗಳಿಗೆ ಕುಡಿಯುವ ನೀರಿನ ಯೋಜನೆ ಅನುಷ್ಟಾಾನಗೊಳಿಸಿದ್ದು ನಮ್ಮ ಸರ್ಕಾರ. ಈಗ ಪಂಚ ಗ್ಯಾಾರಂಟಿ ಯೋಜನೆಗಳನ್ನು ಪ್ರಾಾಮಾಣಿಕವಾಗಿ ಅನುಷ್ಟಾಾನಗೊಳಿಸಿ ವರ್ಷಕ್ಕೆೆ 60 ಸಾವಿರ ಕೋಟಿ ರೂ. ಗಳನ್ನು ಶೋಷಿತ ವರ್ಗಗಳ ಅಭಿವೃದ್ಧಿಿಗಾಗಿ ಖರ್ಚು ಮಾಡಲಾಗುತ್ತಿಿದೆ ಎಂದರು.
ಸಂಸದ ಈ.ತುಕಾರಾಮ್ ಅವರು ಪ್ರಾಾಸ್ತಾಾವಿಕ ವಾಗಿ, 2004 ರಿಂದ ಸಂಡೂರು ವಿಧಾನಸಭಾ ಕ್ಷೇತ್ರಕ್ಕೆೆ ಈವರೆಗೆ ಸುಮಾರು 4,700 ಕೋಟಿ ರೂ. ಅನುದಾನ ಪಡೆಯುವ ಮೂಲಕ ನಂಜುಂಡಪ್ಪ ವರದಿಯ ಪ್ರಕಾರ ಅತ್ಯಂತ ಹಿಂದುಳಿದ ತಾಲ್ಲೂಕಾದ ಸಂಡೂರನ್ನು ಅಭಿವೃದ್ಧಿಿ ಹೊಂದಿದ ತಾಲ್ಲೂಕನ್ನಾಾಗಿ ಮಾಡಲಾಗಿದೆ ಎಂದು ಹೇಳಿದರು.
ಸಂಡೂರು ಭಾಗದ 132 ಗ್ರಾಾಮಗಳಿಗೆ 425 ಕೋಟಿ ರೂ. ವೆಚ್ಚದಲ್ಲಿ ಕುಡಿಯುವ ನೀರು ಸರಬರಾಜು ಕಾಮಗಾರಿಗಳ ಮೂಲಕ ನೀರಿನ ಸಮಸ್ಯೆೆ ನೀಗಿಸಿದ್ದೇವೆ. ಅದೇರೀತಿಯಾಗಿ ವಾರ್ಷಿ ಕವಾಗಿ 1.60 ಲಕ್ಷ ರೂ. ವೆಚ್ಚದಲ್ಲಿ ಕ್ಲಿಿನಿಕ್ ಆನ್ ವೀಲ್ ಯೋಜನೆಯ ಮೂಲಕ ಈ ಭಾಗದ ಜನರಿಗೆ ಮನೆ ಮನೆಗೆ ಉಚಿತ ಆರೋಗ್ಯ ಸೇವೆ ಒದಗಿಸಲಾ ಗುತ್ತಿಿದೆ. ಇದು ದೇಶದಲ್ಲಿಯೇ ಪ್ರಥಮ ವಿನೂತನ ಕಾರ್ಯಕ್ರಮವಾಗಿದೆ ಎಂದು ಹೇಳಿದರು.
ಸಂಡೂರು ಶಾಸಕರಾದ ಈ.ಅನ್ನಪೂರ್ಣ ಅವರು, ಸಂಡೂರು ಭಾಗದಲ್ಲಿ ಕುಡಿಯುವ ನೀರು, ಆರೋಗ್ಯ, ರಸ್ತೆೆ, ಶಿಕ್ಷಣ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ದೊರಕಿಸಿಕೊಡುವ ಮೂಲಕ ತಾಲ್ಲೂಕಿನ ಸರ್ವಾಂಗೀಣ ಅಭಿವೃದ್ಧಿಿಗೆ ಶ್ರಮಿಸಲಾಗುತ್ತಿಿದೆ ಎಂದು ಹೇಳಿದರು.
ಭಾಗದಲ್ಲಿ 82 ಹೆಣ್ಣುಮಕ್ಕಳು ಎಸ್ಎಸ್ಎಲ್ಸಿ ನಂತರ ತಮ್ಮ ಶಿಕ್ಷಣ ಮೊಟಕುಗೊಳಿಸಿರುವುದು ಕಂಡುಬಂದಿದ್ದು, ದೂರದೂರಿಗೆ ಪದವಿಪೂರ್ವ ಶಿಕ್ಷಣ ಪಡೆಯುವಲ್ಲಿ ವಂಚಿತರಾಗಿದ್ದರು. ಇದನ್ನು ಮನಗಂಡ ನಮ್ಮ ಸರ್ಕಾರ ವಿಠಲಾಪುರ ಗ್ರಾಾಮದಲ್ಲಿಯೇ ಪಿಯು ಕಾಲೇಜು ನಿರ್ಮಾಣ ಮಾಡಲಾಯಿತು. ಸದ್ಯ ಇದೇ ಕಾಲೇಜಿನಲ್ಲಿಯೇ ಆ ಎಲ್ಲಾಾ ಹೆಣ್ಣುಮಕ್ಕಳು ವಿದ್ಯಾಾಭ್ಯಾಾಸ ಮುಂದುವರೆಸಿದ್ದಾಾರೆ. ಇದೊಂದು ಹೆಮ್ಮೆೆಯ ವಿಷಯವಾಗಿದ್ದು, ಗಡಿಗ್ರಾಾಮದ ಮಕ್ಕಳು ವಿದ್ಯಾಾಭ್ಯಾಾಸದಿಂದ ಹೊರಗುಳಿಯದಂತೆ ಮುತುವರ್ಜಿ ವಹಿಸಲಾಗಿದೆ ಎಂದರು.
ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ಉಪಾಧ್ಯಕ್ಷ ಹೆಚ್.ಲಕ್ಷ್ಮಣ್ ಅವರು, ಸಂಡೂರು ತಾಲ್ಲೂಕು ಭಾಗದಲ್ಲಿ ವಸತಿ ಶಾಲೆಗಳು, ರೈತರ ಹೊಲಗಳಿಗೆ ವಿದ್ಯುತ್ ಸಂಪರ್ಕ ಒದಗಿಸುವುದರ ಮೂಲಕ 2004 ರಲ್ಲಿಯೇ ಈ ಭಾಗದ ಶಾಸಕರಾಗಿದ್ದ ಸಂತೋಷ್ ಲಾಡ್ ಅವರು ಸಂಡೂರಿನ ಏಳ್ಗೆೆಗೆ ಸಾಕಷ್ಟು ಶ್ರಮಿಸಿದ್ದಾಾರೆ. ಪ್ರಸ್ತುತ ಲಾಡ್ ೌಂಡೇಶನ್ ವತಿಯಿಂದ ಶಿಕ್ಷಣ ಸೌಲಭ್ಯ ಒದಗಿಸುವುದರ ಮೂಲಕ ಬಡ ಮಕ್ಕಳ ವಿದ್ಯಾಾಭ್ಯಾಾಸಕ್ಕೆೆ ಆಸರೆಯಾಗಿದ್ದಾಾರೆ ಎಂದು ಕೊಂಡಾಡಿದರು.
89.64 ಕೋಟಿ ರೂ. ವೆಚ್ಚದಲ್ಲಿ ಕೋಡಾಲ್ ಮತ್ತು ಇತರೆ 36 ಗ್ರಾಾಮಗಳ ಬಹುಗ್ರಾಾಮ ಕುಡಿಯುವ ನೀರಿನ ಯೋಜನೆ, ರೂ.39 ಕೋಟಿ ವೆಚ್ಚದಲ್ಲಿ ಅಂತಾಪುರ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಕಾಮಗಾರಿ ಶಂಕು ಸ್ಥಾಾಪನೆ, ರೂ.02 ಕೋಟಿ ವೆಚ್ಚದಲ್ಲಿ ವಿಠಲಾಪುರ 33/11 ಕೆವಿ ವಿದ್ಯುತ್ ವಿತರಣಾ ಕೇಂದ್ರಕ್ಕೆೆ ಹೆಚ್ಚುವರಿಯಾಗಿ 5 ಎಂವಿಎ ಪರಿವರ್ತಕದ ಲೋಕಾರ್ಪಣೆ, ನಾಲ್ಕು ಗ್ರಾಾ.ಪಂ ಗಳ ವ್ಯಾಾಪ್ತಿಿಯಲ್ಲಿ ರೂ.6.60 ಕೋಟಿ ವೆಚ್ಚದಲ್ಲಿ ಹೊಸ ವಿದ್ಯುತ್ ಪರಿವರ್ತಕಗಳು ಮತ್ತು ಹೊಸ ವಿದ್ಯುತ್ ಕಂಬಗಳನ್ನ ಅಳವಡಿಸುವ ಕಾಮಗಾರಿ ಲೋಕಾರ್ಪಣೆಗೊಳಿಸಿದರು.
ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಬಳ್ಳಾಾರಿ ಜಿಲ್ಲಾಾ ಗ್ಯಾಾರಂಟಿ ಯೋಜನೆಗಳ ಅನುಷ್ಟಾಾನ ಪ್ರಾಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಸಂಡೂರು ತಾಲ್ಲೂಕು ಗ್ಯಾಾರಂಟಿ ಯೋಜನೆಗಳ ಅನುಷ್ಟಾಾನ ಪ್ರಾಾಧಿಕಾರದ ಅಧ್ಯಕ್ಷರಾದ ನೂರುದ್ದೀನ್, ವಿಧಾನಪರಿಷತ್ ಮಾಜಿ ಸದಸ್ಯ ಕೆ.ಎಸ್.ಎಲ್.ಸ್ವಾಾಮಿ., ತೋರಣಗಲ್ಲು ವಾಡಾ ಅಧ್ಯಕ್ಷ ಅಕ್ಷಯ್ ಅಶೋಕ್ ಲಾಡ್, ಅಂತಾಪುರ ಗ್ರಾಾಪಂ ಅಧ್ಯಕ್ಷ ಎನ್.ಹೊನ್ನೂರಸ್ವಾಾಮಿ, ವಿಠಲಾಪುರ ಗ್ರಾಾಪಂ ಅಧ್ಯಕ್ಷ ರಮೇಶ್, ಮೆಟ್ರಿಿಕಿ ಗ್ರಾಾಪಂ ಅಧ್ಯಕ್ಷ ವರಲಕ್ಷ್ಮೀ ರುದ್ರೇೇಶ್, ರಾಜಾಪುರ ಗ್ರಾಾಪಂ ಅಧ್ಯಕ್ಷ ಬಿ.ನಾಗೇಶ್, ಬಳ್ಳಾಾರಿ ಉಪವಿಭಾಗಾಧಿಕಾರಿ ರಾಜೇಶ್ ಹೆಚ್.ಡಿ ಸೇರಿದಂತೆ ಸಂಡೂರು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿಿತರಿದ್ದರು.
ಸಂಡೂರು ಸಂಕಲ್ಪ ಸಮರ್ಪಣಾ ಸಮಾವೇಶ ಶೋಷಿತ ವರ್ಗಗಳ ಅಭಿವೃದ್ಧಿಿಯೇ ನಮ್ಮ ಧ್ಯೇಯ : ಸಚಿವ ಸಂತೋಷ್ ಎಸ್.ಲಾಡ್

