ಸುದ್ದಿಮೂಲ ವಾರ್ತೆ ರಾಯಚೂರು, ೆ.22:
ಸಾರ್ವಜನಿಕ ಶಿಕ್ಷಣ ವ್ಯವಸ್ಥೆೆ ಬುಡಮೇಲು ಮಾಡುತ್ತಿಿರುವ ಕೆಲಸ ನಡೆಯುತ್ತಿಿರುವುದು ಕಳವಳಕಾರಿಯಾಗಿದ್ದು, ಸಾರ್ವಜನಿಕ ಶಿಕ್ಷಣ ವ್ಯವಸ್ಥೆೆ ಹದಗೆಡದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾಾರಿಯಾಗಿದೆ ಎಂದು ಸಂಸದ ಜಿ.ಕುಮಾರನಾಯಕ ಹೇಳಿದರು.
ನಗರದ ನವೋದಯ ಶಿಕ್ಷಣ ಸಂಸ್ಥೆೆಯ ಕೇಂದ್ರ ಗ್ರಂಥಾಲಯ ಸಭಾಂಗಣದಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಿ ವೇದಿಕೆ, ಭಾರತ ಜ್ಞಾನ ವಿಜ್ಞಾನ ಸಮಿತಿ, ರಾಜ್ಯ ಮಹಿಳಾ ಒಕ್ಕೂಟ ಮತ್ತು ಶಿಕ್ಷಣ ಹಕ್ಕಿಿಗಾಗಿ ಕೆಲಸ ಮಾಡುತ್ತಿಿರುವ ವಿವಿಧ ಸಂಘಟನೆಗಳ ಸಂಯುಕ್ತಾಾಶ್ರಯದಲ್ಲಿ ನಡೆದ ನಮ್ಮ ಶಾಲೆ ನಮ ಹಕ್ಕು ಕಾರ್ಯಕ್ರಮ ಉದ್ಘಾಾಟಿಸಿ ಮಾತನಾಡಿದರು. ಸಂವಿಧಾನದ ಪೀಠಿಕೆ ಯಲ್ಲಿ ಪ್ರಸ್ತಾಾಪಿಸಲಾದ ವಿಷಯಗಳನ್ನು ಸಾಧಿಸಲು ಇರುವ ಸಾಧನ ಶಿಕ್ಷಣ ಮಾತ್ರ. ಹೊಸ ಸಮಾಜ ಕಟ್ಟಲು ಸಾರ್ವಜನಿಕ ಶಿಕ್ಷಣ ವ್ಯವಸ್ಥೆೆ ಪ್ರಮುಖ ಸಾಧನವಾಗಿದೆ. ಮನೆಯಲ್ಲಿನ ಶಿಕ್ಷಣ ಇತಿಮಿತಿ ಹೊಂದಿರುತ್ತಿಿದ್ದು, ಮಗು ಪರಿಪೂರ್ಣತೆ ಪಡೆಯಲು ಸಾರ್ವಜನಿಕ ಶಿಕ್ಷಣ ಅವಶ್ಯವಾಗಿದೆ ಎಂದು ಹೇಳಿದರು.
ಆಶಯ ನುಡಿಗಳಾಡಿದ ಜಯಣ್ಣ, ಸ್ವಾಾತಂತ್ರ್ಯಕ್ಕೆೆ 77 ವರ್ಷಗಳು ಕಳೆದರೂ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಮುಂದುವರಿದಿರುವುದು ದುರಂತ ಎಂದು ಕಳವಳ ವ್ಯಕ್ತಪಡಿಸಿದರು.
ಇದುವರೆಗೆ ಶಾಲೆಗಳ ಸಮಸ್ಯೆೆಯನ್ನು ನಾವು ಹಕ್ಕಿಿನ ದೃಷ್ಟಿಿಯಿಂದ ಚರ್ಚಿಸಿದ್ದೇವೆ. ಆದರೆ ಈಗ ಇದು ಕೇವಲ ಹಕ್ಕಿಿನ ಪ್ರಶ್ನೆೆಯಲ್ಲ, ನಮ್ಮ ಸ್ವಾಾಭಿಮಾನದ ಸಂಗತಿಯಾಗಿದೆ ಎಂದರು.
ನಮ್ಮ ಭಾಗದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರಿಲ್ಲದೆ ತರಗತಿಗಳು ನಡೆಯದಿರುವುದು ಮಕ್ಕಳ ಶಿಕ್ಷಣದ ಗುಣಮಟ್ಟಕ್ಕೆೆ ಧಕ್ಕೆೆ ತರುತ್ತಿಿದೆ. ಇರುವ ಶಿಕ್ಷಕರು ಮಕ್ಕಳೊಂದಿಗೆ ಭಾವನಾತ್ಮಕವಾಗಿ ಕೆಲಸ ಮಾಡಬೇಕಿದೆ. ಶಾಲೆಗಳು ಜ್ಞಾನ ಮಂದಿರಗಳಾಗಿದ್ದು, ಅವುಗಳನ್ನು ಉಳಿಸಿ ಅಭಿವೃದ್ಧಿಿಪಡಿಸುವ ಜವಾಬ್ದಾಾರಿ ಸಮಾಜದ ಮೇಲಿದೆ. ಶಿಕ್ಷಕರ ಖಾಲಿ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡಿ, ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಸರ್ಕಾರಿ ಶಾಲೆಗಳ ಮೇಲಿನ ನಂಬಿಕೆಯನ್ನು ಸರ್ಕಾರ ಬಲಪಡಿಸಬೇಕಾಗಿದೆ. ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಿಸುವ ನಿಟ್ಟಿಿನಲ್ಲಿ ಶಿಕ್ಷಕರು, ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳು ಕಾರ್ಯನಿರ್ವಹಿಸಬೇಕೆಂದು ತಿಳಿಸಿದರು.
ಸಹ ಪ್ರಾಾಧ್ಯಪಾಕರಾದ ಡಾ.ಕೆ.ವೆಂಕಟೇಶ್, ಡಾ.ನಿರಂಜನ ಆರಾಧ್ಯ, ಕೆ.ಸತ್ಯನಾರಾಯಣ, ಮೋಕ್ಷಮ್ಮ ಉಪಸ್ಥಿಿತರಿದ್ದರು. ಹಫೀಜುಲ್ಲಾ ಪ್ರಾಾಸ್ತಾಾವಿಕವಾಗಿ ಮಾತನಾಡಿದರು. ಚಂದ್ರಶೇಖರ ರೆಡ್ಡಿಿ ನಿರೂಪಿಸಿದರು.
ಸಾರ್ವಜನಿಕ ಶಿಕ್ಷಣ ವ್ಯವಸ್ಥೆ ಉಳಿಸುವುದು ಎಲ್ಲರ ಜವಾಬ್ದಾರಿ – ಕುಮಾರ ನಾಯಕ

