ಸುದ್ದಿಮೂಲ ವಾರ್ತೆ ರಾಯಚೂರು, ೆ.25:
ಜಿಲ್ಲಾಡಳಿತದಿಂದ ಜಿಲ್ಲಾ ಕೇಂದ್ರದಲ್ಲಿ ಮಾರ್ಚ್ 01ರ ಭಾನುವಾರ ದಂದು ಆಚರಿಸಲಾಗುವ
ಶ್ರೀ ರೇಣುಕಾಚಾರ್ಯ ಜಯಂತಿಗೆ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾಾರ್ ಜಗದೀಶ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ೆ.24ರ ಮಂಗಳವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ
ಶ್ರೀರೇಣುಕಾಚಾರ್ಯ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲ ತಾಲೂಕು ಸರ್ಕಾರಿ ಕಚೇರಿಗಳು, ಗ್ರಾಾಮ ಪಂಚಾಯಿತಿಗಳಲ್ಲಿ, ಶಾಲಾ-ಕಾಲೇಜುಗಳು ಹಾಗೂ ವಸತಿ ನಿಲಯಗಳಲ್ಲಿ ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಕಡ್ಡಾಾಯವಾಗಿ ಆಚರಣೆ ಮಾಡಬೇಕಿದೆ. ಈ ನಿಟ್ಟಿಿನಲ್ಲಿ ಸಂಬಅಧಿಸಿದ ಅಧಿಕಾರಿಗಳು ನಾನಾ ಕಾರ್ಯಸಿದ್ಧತೆಗೆ ಅಗತ್ಯ ಕ್ರಮ ವಹಿಸಬೇಕು. ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಯಂತಿ ಆಚರಣೆ ಕಾರ್ಯಕ್ರಮಕ್ಕೆೆ ಸಮಾಜದ ಬಂಧುಗಳ ಸಹಕಾರವೂ ಅಗತ್ಯವಿದ್ದು, ಜಿಲ್ಲಾಡಳಿತದೊಂದಿಗೆ ಸಹಕರಿಸಿ ವ್ಯವಸ್ಥಿಿತ ಜಯಂತಿ ಆಚರಣೆಗೆ ಎಲ್ಲರೂ ಅನುಕೂಲ ಮಾಡಿಕೊಡಬೇಕು ಎಂದು ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿ ತಹಶೀಲ್ದಾಾರರು ಸಮಾಜದ ಮುಖಂಡರಲ್ಲಿ ಕೋರಿದರು.
ಇದೇ ಸಂದರ್ಭದಲ್ಲಿ ಸೋಮವಾರಪೇಟೆ ಹಿರೇಮಠದ ಅಭಿನವ ರಾಚೋಟಿವೀರ ಶಿವಾಚಾರ್ಯರು, ಮಂಗಳವಾರಪೇಟೆ ಹಿರೇಮಠದ ಸಂಗಮೇಶ್ವರ ಶಿವಾಚಾರ್ಯ ಹಾಗೂ ಸಮಾಜದ ಮುಖಂಡರಾದ ಸಂತೋಷ ರಾಜಗುರು, ಪ್ರಭು ಶಾಸಿಘಿ, ಶರಣಬಸವ ಹಿರೇಮಠ, ಎಂ.ಮಂಜುನಾಥ ಸ್ವಾಾಮಿ, ಬಸವರಾಜ ಸ್ವಾಾಮಿ ಹಿರೇಮಠ, ಶರಣಬಸವ ಸ್ವಾಾಮಿ ನಂದಿಮಠ, ರೇಣುಕಾಸ್ವಾಾಮಿ, ಶರಣಯ್ಯ ಸ್ವಾಾಮಿ, ಅಮರೇಶ ಸ್ವಾಾಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ಸಭೆಯಲ್ಲಿ ಇದ್ದರು.
ಪೂರ್ವಭಾವಿ ಸಿದ್ಧತಾ ಸಭೆ ಶ್ರೀ ರೇಣುಕಾಚಾರ್ಯ ಜಯಂತಿ ಆಚರಣೆಗೆ ಅಗತ್ಯ ಸಿದ್ಧತೆಯಾಗಲಿ : ತಹಶೀಲ್ದಾಾರ್ ಜಗದೀಶ್

