ಸುದ್ದಿಮೂಲ ವಾರ್ತೆ
ಕೆ.ಆರ್.ಪುರ.ಅ.7:ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸಂಘ ಸಂಸ್ಥೆಗಳು ನೀಡುವ ಪ್ರೋತ್ಸಾಹ ಮಹತ್ವದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಮಹದೇವಪುರ ಕ್ಷೇತ್ರದ ರಾಮಗೊಂಡನಹಳ್ಳಿ ರೋಟರಿ ಬೆಂಗಳೂರು ಐಟಿ ಕಾರಿಡಾರ್ ಕ್ಲಬ್ ವತಿಯಿಂದ ಅಭಿವೃದ್ಧಿಪಡಿಸಿರುವ ಸರ್ಕಾರಿ ಪ್ರೌಢಶಾಲೆಯನ್ನು ಶಾಸಕಿ ಮಂಜುಳಾ ಲಿಂಬಾವಳಿ ಅವರೊಂದಿಗೆ ಉದ್ಘಾಟಿಸಿ ಮಾತನಾಡಿದರು.
ಸರ್ಕಾರಿ ಶಾಲೆ ಅಭಿವೃದ್ಧಿಯಾಗುವುದರಿಂದ ಬಡವರ ಮಕ್ಕಳಿಗೂ ಶಿಕ್ಷಣಕ್ಕೆ ಅನುವುಮಾಡಿಕೊಟ್ಟಂತೆ ಆಗುತ್ತದೆ. ಸರ್ಕಾರ ಸಂಘ ಸಂಸ್ಥೆಗಳು ನೀಡುವ ಅನುದಾನದ ಪ್ರೋತ್ಸಾಹದಿಂದ ಹೆಚ್ಚಿನ ಶಾಲೆಗಳು ಅಭಿವೃದ್ಧಿಗೊಳ್ಳಲಿ ಎಂದು ಹೇಳಿದರು.
ಶಾಸಕಿ ಮಂಜುಳಾ ಲಿಂಬಾವಳಿ ಮಾತನಾಡಿ, ಸಿಎಸ್ಆರ್ ಅನುದಾನದಡಿಯಲ್ಲಿ ನಿರ್ಮಾಣವಾಗಿರುವ ಈ ಶಾಲೆ ಕ್ಷೇತ್ರದ ಮಕ್ಕಳ ಭವಿಷ್ಯಕ್ಕೆ ಆಶಾದಾಯಕ. ಮೊದಲು ಕನ್ನಡ ಮಾಧ್ಯಮ ಮಾತ್ರ ಇದ್ದ ಈ ಶಾಲೆಯಲ್ಲಿ ಈಗ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳೆರಡನ್ನೂ ಪ್ರಾರಂಭಿಸಿರುವುದು ಸಂತಸದ ವಿಷಯ ಎಂದರು.
ಈ ಸಂಧರ್ಭದಲ್ಲಿ ಮಾಜಿ ಶಾಸಕ ಅರವಿಂದ ಲಿಂಬಾವಳಿ, ರೋಟರಿ ಐಟಿ ಕಾರಿಡಾರ್ ಸಂಸ್ಥೆಯ ಉದಯ ಭಾಸ್ಕರ್, ಡಾ.ಸತೀಶ್, ದಕ್ಷಿಣ ವಲಯ ಶಿಕ್ಷಣಾಧಿಕಾರಿ ರಾಮಮೂರ್ತಿ ಇದ್ದರು.